ಭ್ರಷ್ಟಾಚಾರ ಮರೆಮಾಚಲು ಸಭೆ ಮುಂದೂಡಿಕೆ


Team Udayavani, Mar 11, 2023, 1:46 PM IST

tdy-17

ಕನಕಪುರ: ಗ್ರಾಪಂ ಅಧ್ಯಕ್ಷರು ಮತ್ತು ಅಧಿಕಾರಿಗಳು ಮಾಡಿರುವ ಭ್ರಷ್ಟಾಚಾರ ಮರೆಮಾಚಲು ಉದ್ದೇಶ ಪೂರ್ವಕವಾಗಿ ಗ್ರಾಮ ಸಭೆಯನ್ನು ಮುಂದೂಡಿದ್ದಾರೆ ಎಂದು ಅಚ್ಚಲು ಗ್ರಾಪಂ ಸದಸ್ಯ ಕುಮಾರಸ್ವಾಮಿ ಆರೂಪಿಸಿದರು.

ನಗರದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಅಧ್ಯಕ್ಷೆ ಶಿವಮ್ಮ ಅವರ ಅನುಮತಿ ಮೇರೆಗೆ ನೋಡಲ್‌ ಅಧಿಕಾರಿ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ಅವರ ಸಮ್ಮುಖದಲ್ಲಿ ಕರಪತ್ರಗಳನ್ನು ಮುದ್ರಿಸಿ ಹಂಚಿ ಮಾ.10ರ ಶುಕ್ರವಾರ 2023-24 ನೇ ಸಾಲಿನ ಗ್ರಾಮಸಭೆಯನ್ನು ಕರೆಯಲಾಗಿತ್ತು. ಆದರೆ, ಅಧ್ಯಕ್ಷ ಶಿವಮ್ಮ ಮತ್ತು ನೋಡಲ್‌ ಅಧಿಕಾರಿ ಇಒ ಭೈರಪ್ಪ ಅವರೇ ನಿಗದಿ ಮಾಡಿದ ಸಭೆ ನಡೆದರೆ ಆಕ್ರಮ ಬಯಲಾಗುವುದೆಂದು ಉದ್ದೇಶಪೂರ್ವಕವಾಗಿ ಸಭೆಗೆ ಗೈರಾಗಿದ್ದಾರೆ ಎಂದು ಆರೋಪಿಸಿದರು.

ಗ್ರಾಪಂನಲ್ಲಿ ಪತಿರಾಯರದ್ದೇ ದರ್ಬಾರು: ಅಚ್ಚಲು ಗ್ರಾಪಂನಲ್ಲಿ ಅಧ್ಯಕ್ಷ ಶಿವಮ್ಮ ಕೇವಲ ನಾಮ್‌ ಕೇ ವಾಸ್ತೇಗಷ್ಟೆ, ಅಧ್ಯಕ್ಷರು. ಇಲ್ಲಿ ಇವರ ಪತಿರಾಯರದ್ದೇ ದರ್ಬಾರು. ಅಧ್ಯಕ್ಷ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಅಧ್ಯಕ್ಷರ ಬದಲು ಅವರ ಪತಿ ಕೆಂಗೆಗೌಡ ಅಧಿಕಾರ ನಡೆಸುತ್ತಿದ್ದಾರೆ . ಗ್ರಾಪಂ ಅಧ್ಯಕ್ಷ ಶಿವಮ್ಮ ಅವರಿಗೆ ಸೇರಿದ 26 ಎಕರೆ ಜಮೀನಿನಲ್ಲಿ 1,300 ಕೋಟಿ ರೂ.ವೆಚ್ಚದಲ್ಲಿ ನಡೆಯುತ್ತಿರುವ ಪೈಪ್‌ ತಯಾರಿಕೆ ಘಟಕಕ್ಕೆ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದು, ಗ್ರಾಪಂಗೆ ತೆರಿಗೆ ಕಟ್ಟದಿದ್ದರೂ, ನಿಯಮ ಬಾಹೀರವಾಗಿ ಅಧಿಕಾರಿಗಳು ಎನ್‌ಒಸಿ ಕೊಟ್ಟಿದ್ದಾರೆ ಎಂದು ಆಪಾದಿಸಿದರು.

ತೆರಿಗೆ ಹಣ ವಂಚನೆ: ಗ್ರಾಪಂಗೆ ಬರಬೇಕಾದ ತೆರಿಗೆಯಲ್ಲೂ ವಂಚನೆ ಮಾಡುತ್ತಿದ್ದಾರೆ. ಸಾಮಾನ್ಯ ರೈತ ಇಟ್ಟಿಗೆ ಕಾರ್ಖಾನೆ ಕೋಳಿ ಫಾರಂ ನಡೆಸಿದರೆ ತೆರಿಗೆ ಸಂಗ್ರಹ ಮಾಡುತ್ತಾರೆ. ಆದರೆ, ಹೊಂಗಾಣಿ ದೊಡ್ಡಿ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ತೆರಿಗೆ ಸಂಗ್ರಹ ಮಾಡುತ್ತಿಲ್ಲ. ಗ್ರಾಪಂ ಸದಸ್ಯ ನಂಜೇಗೌಡ ಎಂಬುವರು ಕಲ್ಲು ಗಣಿಗಾರಿಕೆ ಮೇಲ್ವಿಚಾರಣೆ ವಹಿಸಿಕೊಂಡಿದ್ದಾರೆ. ಹಾಗಾಗಿ, ಗಣಿಗಾರಿಕೆಯಿಂದ ಯಾವುದೇ ತೆರಿಗೆ ಸಂಗ್ರಹ ಮಾಡದೆ, ಕಲ್ಲು ಗಣಿಗಾರಿಕೆ ಮಾಡುವವರೊಂದಿಗೆ ಅಧಿಕಾರಿಗಳು ಸದಸ್ಯ ನಂಜೇಗೌಡ ಶಾಮೀಲಾಗಿ ಕಿಕ್‌ ಬ್ಯಾಕ್‌ ಪಡೆದು ಗ್ರಾಪಂ ಗೆ ಬರಬೇಕಾದ ತೆರಿಗೆ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ರಮ ವ್ಯವಹಾರ ದಾಖಲೆ ಸಮೇತ ಸಾಬೀತು: ಗ್ರಾಪಂ ನಲ್ಲಿ ಕೋಟಿಗೂ ಹೆಚ್ಚು ಅಕ್ರಮ ವ್ಯವಹಾರ ನಡೆದಿದೆ ದಾಖಲೆ ಸಹಿತ ಸಾಬೀತು ಮಾಡಿದ್ದೇನೆ. ಹಿಂದೆ ನಡೆದ ಸಭೆಗಳಲ್ಲಿ ದಾಖಲಾತಿ ಇಲ್ಲ ಎಂದು ಸಬೂಬು ಹೇಳಿ ಸಭೆ ಮುಂದೂಡಿ, ಈಗ ಸಭೆ ಕರೆದಿದ್ದರು. ಈಗಲೂ ಸಹ ಅವರ ಲೋಪ ದೋಷಗಳು ಸಾರ್ವಜನಿಕವಾಗಿ ಬಯಲಾ ಗುತ್ತವೆ ಎಂಬ ಉದ್ದೇಶದಿಂದಲೇ ಪದೇಪದೇ ಸಭೆ ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.