ಎಕ್ಸ್‌ಪ್ರೆಸ್‌ವೇಗೆ ಕಾಂಗ್ರೆಸ್‌ ಕಾರಣ


Team Udayavani, Mar 11, 2023, 1:50 PM IST

tdy-18

ಮೈಸೂರು: ಎಕ್ಸ್‌ಪ್ರೆಸ್‌ವೇ ಯೋಜನೆಗೆ ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮತ್ತು ನಾನು ಕಾರಣ. ಆದರೆ ಈಗ ಸಂಸದ ಪ್ರತಾಪ್‌ ಸಿಂಹ ಅಪಪ್ರಚಾರ ಮಾಡುತ್ತಿದ್ದು, ಇದನ್ನು ಖಂಡಿಸುವುದಾಗಿ ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ನಗರದ ಹೊರ ವಲಯದ ಸಿದ್ದಲಿಂಗಪುರ ಬಳಿ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗ ಳೂ ರು-ಮೈಸೂರು ಹೆದ್ದಾರಿ 2013ರವರೆಗೂ ರಾಜ್ಯ ಹೆದ್ದಾರಿ ಆಗಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದುದ್ದನ್ನು ಮಾನದಂಡವಾಗಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲಾಯಿತು. ಕೆಆರ್‌ ಡಿಸಿಎಲ್‌ ಮೂಲಕ ನಾಲ್ಕು ಪಥವಾಗಿ ಮಾಡಿದರೂ ಒತ್ತಡ ಹೆಚ್ಚಾದ್ದರಿಂದ ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಡಿಪಿಆರ್‌ ತಯಾರಿಸಲು ನಿರ್ಧರಿಸಲಾಯಿತು.

ಯಾವುದೇ ವ್ಯಕ್ತಿ ಶಾಶ್ವತವೂ ಅಲ್ಲ: ರಾಜ್ಯದ 1,882 ಕಿಮೀ ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಪ್ರಸ್ತಾವ ಸಲ್ಲಿಸಲಾಗಿತ್ತು. ಮಾ.4ರಂದು 2014ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಬೊಗಳೆ ಬಿಡುವವರು ಆಗ ಸಂಸದರೇ ಆಗಿರಲಿಲ್ಲ. ಆಸ್ಕರ್‌ ಫ‌ರ್ನಾಂಡೀಸ್‌ ಕೇಂದ್ರದಲ್ಲಿ ಸಚಿವರಾ ಗಿದ್ದರು. ಅಭಿವೃದ್ಧಿ ಕೆಲಸ ಎಂಬುದು ಪಕ್ಷದ ಭಿಕ್ಷೆ ಅಲ್ಲ. ಯಾವುದೇ ವ್ಯಕ್ತಿ ಶಾಶ್ವತವೂ ಅಲ್ಲ. ನನ್ನ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎನ್ನು ವವರಿಗೆ ಪರಿಜ್ಞಾನ ಇರಬೇಕು ಎಂದರು.

2 ಸಾವಿರ ಎಕರೆ ಜಮೀನು ಸ್ವಾಧೀನ: ಕಾಮ ಗಾರಿಗಾಗಿ ರಾಮನಗರದಲ್ಲಿ ಕಚೇರಿ ತೆರೆದು 2 ಸಾವಿರ ಎಕರೆ ಜಮೀನು ಸ್ವಾಧೀನ ಪಡಿಸಿಕೊಂ ಡೆವು. ಸರ್ವೆ ಮಾಡಿಸಿದೆವು. ತಾಂತ್ರಿಕ ವರದಿ ಯನ್ನೂ ಸಲ್ಲಿಸಿದೆವು. ಯೋಜನೆ ಜಾರಿಗೆ ನಮ್ಮ ಸರ್ಕಾರ ಕಾರಣ. ಇದೀಗ ಬಿಜೆಪಿ ತನ್ನದೆಂದು ಕ್ರೆಡಿಟ್‌ ತೆಗೆದುಕೊಳ್ಳುತ್ತಿದೆ ಎಂದು ಕಿಡಿ ಕಾರಿದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಾಮಗಾರಿ ನಡೆಸಲಾಗುತ್ತಿದೆ. 2014ರ ಮಾ.4 ರಂದು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸಲಾಯಿತು. ಈಗ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳ್ಳಲು ಆರೇಳು ತಿಂಗಳು ಬೇಕು. ಸಿದ್ದಲಿಂಗಪುರದಲ್ಲಿ ಮೋರಿ ಇತ್ತು ಅದನ್ನು ಮುಚ್ಚಿ ರಸ್ತೆ ಮೇಲೆ ಮೋರಿ ನೀರು ಹರಿಯುವಂತೆ ಮಾಡಿದ್ದಾರೆ. ಮೈಸೂರು ಸಂಸದರಿಗೆ ಕೇವಲ ಏಳು ಕಿಮೀ ಮಾತ್ರವೇ ಬರುತ್ತದೆ. ಆದ್ದರಿಂದ ನರಿ ಬುದ್ಧಿ ಪ್ರದರ್ಶಿಸದೇ, ಕೆಲಸ ಮಾಡಿದವರನ್ನು ಶ್ಲಾಘಿಸಿ. ಟೀಕೆಯನ್ನು ಆರೋಗ್ಯಕರವಾಗಿ ಮಾಡಿ. ಸುಳ್ಳು ಹೇಳುವುದು ಹಾಗೂ ರಾಜಕೀಯ ಲಾಭ ಪಡೆಯುವುದನ್ನು ನಿಲ್ಲಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಯೋಜನೆ ಮೊತ್ತ ಹೆಚ್ಚಾಗಿದೆ. ರೈತರಿಗೆ ಜಮೀನಿಗೆ ತೆರಳಲು ಅವಕಾಶ ನೀಡಿಲ್ಲ. ಚುನಾ ವಣೆ ಕಾರಣಕ್ಕೆ ತರಾತುರಿಯಲ್ಲಿ ಉದ್ಘಾಟಿಸ ಲಾಗುತ್ತಿದೆ ಎಂದು ಆರೋಪಿಸಿದರು. ನಗರ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ಜಯಕುಮಾರ್‌, ಜಿ.ವಿ.ಸೀತಾರಾಂ, ಮಾವಿನಹಳ್ಳಿ ಸಿದ್ದೇಗೌಡ, ಅಯೂಬ್‌ ಖಾನ್‌ ಇತರರು ಇದ್ದರು.

ಸಿಂಹ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು : ಕೆಪಿ ಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಮಾತ ನಾಡಿ, ಕಾಮಗಾರಿ ಅವೈಜ್ಞಾನಿಕವಾಗಿ ಇರುವುದರಿಂದ ಅಪಘಾತ ಹೆಚ್ಚಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ 90 ಸಾವಿರ ವಾಹನ ಸಂಚರಿಸುತ್ತವೆ. 5.3 ಕೋಟಿ ಟೋಲ್‌ ಸಂಗ್ರಹವಾಗುತ್ತದೆ. ವರ್ಷಕ್ಕೆ 2,440 ಕೋಟಿ ಆಗುತ್ತದೆ. ಒಟ್ಟಾರೆ ಯೋಜನೆಗೆ 12 ಸಾವಿರ ಕೋಟಿಯಾದರೂ 8 ಸಾವಿರ ಕೋಟಿ ಹೆಚ್ಚಿಸಲಾಗಿದೆ. ನಮ್ಮ ಸರ್ಕಾರ ಡಿಪಿಆರ್‌ಗೆ 6.50 ಕೋಟಿ ಸೇರಿದಂತೆ ಒಟ್ಟು 13 ಕೋಟಿ ಕೊಟ್ಟಿದೆ. ಒಂಬತ್ತೂವರೆ ಪೈಸೆ ಕೊಟ್ಟಿದ್ದರೆ ಹೇಳಲಿ ಎಂದಿರುವ ಪ್ರತಾಪ ಸಿಂಹ ಕೂಡಲೇ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ದಶ ಪಥ ಯೋಜನೆ ವಿಷಯದಲ್ಲಿ ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರವನ್ನು ಖಂಡಿಸುತ್ತೇನೆ. ರಾಜಕೀಯವಾಗಿ ಲಾಭ ಪಡೆದುಕೊಳ್ಳಲು ಸುಳ್ಳುಗಳನ್ನು ಹೇಳುವುದು ನಮ್ಮ ಜಾಯಮಾನ ದಲ್ಲೇ ಬಂದಿಲ್ಲ. ಅದೇನಿದ್ದರೂ ಬಿಜೆಪಿಯವರ ಕೆಲಸ. – ಡಾ.ಎಚ್‌.ಸಿ.ಮಹದೇವಪ್ಪ, ಮಾಜಿ ಸಚಿವ

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.