ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..


Team Udayavani, Mar 12, 2023, 4:59 PM IST

kannada movie mary review

ಚಿಕ್ಕಮಗಳೂರು ಜಿಲ್ಲೆಯ ಕಾಡು ಮಧ್ಯದಲ್ಲಿರುವ ಪೊಲೀಸ್‌ ಠಾಣೆಗೆ ಹೊಸದಾಗಿ ನೇಮಕವಾದ ಎಸ್‌ಐ ಮುಂದೆ ಹುಡುಗಿಯೊಬ್ಬಳು ತನ್ನ ಮೇಲೆ ರೇಪ್‌ ಆಗಿದೆ ಎಂದು ದೂರು ನೀಡುತ್ತಾಳೆ. ಜನ ಸೇವೆಯೇ ಗುರಿ ಎಂದುಕೊಂಡಿರುವ ಎಸ್‌ಐ ತನಿಖೆ ಆರಂಭಿಸುತ್ತಾನೆ. ಅಲ್ಲಿಂದ ಸಿನಿಮಾದ ಹಾದಿ ಕೂಡಾ ಬದಲಾಗುತ್ತಾ ಹೋಗುತ್ತದೆ. ಹೊಸ ಹೊಸ ಅಂಶಗಳು ತೆರೆದುಕೊಳ್ಳುತ್ತಾ ಹೋಗುತ್ತದೆ. ಅಷ್ಟಕ್ಕೂ ಆ ಅಂಶಗಳು ಏನು ಎಂಬ ಕುತೂಹಲ ನಿಮಗಿದ್ದರೆ ನೀವು ಈ ವಾರ ತೆರೆಕಂಡಿರುವ “ಮೇರಿ’ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದು.

ವಾರ ವಾರ ಚಿತ್ರಮಂದಿರಕ್ಕೆ ಬರುವ ಹೊಸಬರ ಸಿನಿಮಾಗಳು ಒಂದಷ್ಟು ಹೊಸತನವನ್ನು ಪ್ರಯತ್ನಿಸುತ್ತಿವೆ. ತಮಗೆ ಇರುವ ಸೀಮಿತ ಅವಕಾಶವನ್ನು ಸದು ಪಯೋಗಪಡಿಸಿಕೊಳ್ಳುವ ಮೂಲಕ ಭರವಸೆ ಮೂಡಿಸುತ್ತಿರುವುದಂತೂ ಸುಳ್ಳಲ್ಲ. “ಮೇರಿ’ ಕೂಡಾ ಅಂತಹ ಒಂದು ಪ್ರಯತ್ನ ಎನ್ನಬಹುದು.

ನಿರ್ದೇಶಕ ಮನೋಜ್‌ ಒಂದು ಥ್ರಿಲ್ಲರ್‌ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ. ಹುಡುಗಿಯೊಬ್ಬಳು ಪೊಲೀಸ್‌ ಸ್ಟೇಷನ್‌ಗೆ ಎಂಟ್ರಿಕೊಡುವುದರಿಂದ ಆರಂಭವಾಗುವ ಸಿನಿಮಾ ಬಹುತೇಕ ಅಲ್ಲೇ ಸಾಗುತ್ತದೆ. ಒಂದು ಥ್ರಿಲ್ಲರ್‌ ಸಿನಿಮಾವಾಗಿ ಟ್ವಿಸ್ಟ್‌-ಟರ್ನ್ಗಳೊಂದಿಗೆ ಪ್ರೇಕ್ಷಕರನ್ನು ಹಿಡಿದಿಡುವ ಪ್ರಯತ್ನವನ್ನು ನೀಟಾಗಿ ಮಾಡಲಾಗಿದೆ. ಆರಂಭದಲ್ಲಿ ಇದೊಂದು ಶೋಷಣೆಗೆ ಒಳಗಾದ ಹೆಣ್ಣೊಬ್ಬಳ ಕಥೆ ಎಂದು ಭಾಸವಾಗುವ ಸಿನಿಮಾ, ಮುಂದೆ ಸಾಗುತ್ತಾ ಹೊಸ ಬಣ್ಣವನ್ನು ಪಡೆದುಕೊಳ್ಳುತ್ತದೆ.

ಪ್ರೇಕ್ಷಕ ಏನು ಊಹಿಸಿಕೊಳ್ಳುತ್ತಾನೋ, ತೆರೆಮೇಲೆ ಅದಕ್ಕೆ ವಿರುದ್ಧವಾಗಿ ನಡೆಯುತ್ತಿರುವುದೇ ಸಿನಿಮಾದ ಪ್ಲಸ್‌ ಪಾಯಿಂಟ್‌. ಯಾವುದೇ ಪಾತ್ರಗಳಿಗೂ ಅತಿಯಾದ ಬಿಲ್ಡಪ್‌, ಅನವಶ್ಯಕ ಎಳೆದಾಟಗಳಿಲ್ಲದೇ, ಇರುವ ಪಾತ್ರಗಳಲ್ಲಿ ಇಡೀ ಸಿನಿಮಾವನ್ನು ಎಲ್ಲೂ ಬೋರ್‌ ಆಗದಂತೆ ಕಟ್ಟಿಕೊಡಲಾಗಿದೆ. ಆ ಮಟ್ಟಿಗೆ ಹೊಸಬರ ಪ್ರಯತ್ನವನ್ನು ಮೆಚ್ಚಬಹುದು.

ಚಿತ್ರದಲ್ಲಿ ವಿಕಾಶ್‌ ಉತ್ತಯ್ಯ, ಅನೂಷ ಕೃಷ್ಣ, ವಿಕ್ಕಿ, ತೇಜಸ್ವಿನಿ ಶರ್ಮಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅದರಲ್ಲೂ ಎಸ್‌ಐ ಆಗಿ ನಟಿಸಿರುವ ವಿಕಾಶ್‌ ಉತ್ತಯ್ಯ ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಉಳಿದಂತೆ ಸುಮಂತ್‌, ದೀಪಕ್‌ ಗೌಡ ನಟಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.