ವಹಿವಾಟು ಸ್ಥಗಿತಗೊಳಿಸಿದ ಸಿಗ್ನೇಚರ್‌ ಬ್ಯಾಂಕ್‌

ಅಮೆರಿಕದಲ್ಲಿ ಮತ್ತೊಂದು ಬ್ಯಾಂಕ್‌ ಪತನ, ಕ್ರಿಪ್ಟೋ ಮೂಲಕ ವಹಿವಾಟು ನಡೆಸುತ್ತಿದ್ದ ಬ್ಯಾಂಕ್‌

Team Udayavani, Mar 14, 2023, 7:30 AM IST

ವಹಿವಾಟು ಸ್ಥಗಿತಗೊಳಿಸಿದ ಸಿಗ್ನೇಚರ್‌ ಬ್ಯಾಂಕ್‌

ವಾಷಿಂಗ್ಟನ್‌/ನ್ಯೂಯಾರ್ಕ್‌: ಆರ್ಥಿಕ ಜಗತ್ತಿಗೆ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಮುಚ್ಚಿದ ಆಘಾತ ಅನುಭವಿಸುತ್ತಿರುವಂತೆಯೇ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಿಗ್ನೇಚರ್‌ ಬ್ಯಾಂಕ್‌ ತನ್ನ ವಹಿವಾಟು ಸ್ಥಗಿತಗೊಳಿಸಿದೆ.

ಕ್ರಿಪ್ಟೋ ಕರೆನ್ಸಿ ಕ್ಷೇತ್ರದ ವಹಿವಾಟಿನಲ್ಲಿ ಅದು ಪ್ರಧಾನ ಪಾತ್ರ ವಹಿಸುತ್ತಿತ್ತು. ವಹಿವಾಟಿನ ಅಂತ್ಯದಲ್ಲಿ ಕ್ರಿಪ್ಟೋ ಎಕ್ಸ್‌ಚೇಂಜ್‌ “ಕಾಯಿನ್‌ ಬೇಸ್‌’ ಬ್ಯಾಂಕ್‌ನಲ್ಲಿ 240 ಮಿಲಿಯನ್‌ ಡಾಲರ್‌ ಠೇವಣಿ ಹೊಂದಿತ್ತು.

ಬ್ಯಾಂಕ್‌ನಲ್ಲಿ ಗ್ರಾಹಕರು ಇರಿಸಿರುವ ಠೇವಣಿ ಫೆಡರಲ್‌ ಡೆಪಾಸಿಟ್‌ ಇನ್ಶೂರೆನ್ಸ್‌ ಕಾರ್ಪೊರೇಷನ್‌ (ಎಫ್ಡಿಐಸಿ) ನಿಯಂತ್ರಣಕ್ಕೆ ಬಂದಿದೆ. ಜತೆಗೆ ನ್ಯೂಯಾರ್ಕ್‌ನ ವಿತ್ತೀಯ ಸೇವೆಗಳ ವಿಭಾಗದ ಸುಪರ್ದಿಗೆ ಬಂದಿದೆ. 2008ರ ಬಳಿಕ ಮತ್ತೊಂದು ಬ್ಯಾಂಕಿಂಗ್‌ ಕುಸಿತಕ್ಕೆ ಅಮೆರಿಕದಲ್ಲುಂಟಾಗಲಿದೆಯಾ ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

ಕಠಿಣ ಕ್ರಮ ನಿಶ್ಚಿತ- ಬೈಡೆನ್‌: ಅಮೆರಿಕದಲ್ಲಿ ಉಂಟಾಗಿರುವ ಬ್ಯಾಂಕಿಂಗ್‌ ಕ್ಷೇತ್ರದ ಬಿಕ್ಕಟ್ಟಿಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧ್ಯಕ್ಷ ಜೋ ಬೈಡೆನ್‌ ವಾಗ್ಧಾನ ಮಾಡಿದ್ದಾರೆ.

ಸಿಗ್ನೇಚರ್‌ ಬ್ಯಾಂಕ್‌ ಮತ್ತು ಎಸ್‌ವಿಬಿ ಬಿಕ್ಕಟ್ಟಿಗೆ ಕಾರಣವಾದ ಅಂಶಗಳ ಬಗ್ಗೆ ವಿತ್ತ ಖಾತೆಯ ಜತೆಗೆ ಚರ್ಚಿಸಿದ್ದೇನೆ ಎಂದರು. ಜತೆಗೆ ದೇಶದ ಬ್ಯಾಂಕಿಂಗ್‌ ವ್ಯವಸ್ಥೆ ಹಾಗೂ ಅರ್ಥ ವ್ಯವಸ್ಥೆ ಸುಭದ್ರವಾಗಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಜತೆಗೆ ಠೇವಣಿದಾರರಿಗೆ ಕೂಡ ಆತಂಕ ಬೇಡ ಎಂದು ಭರವಸೆ ನೀಡಿದ್ದಾರೆ.

99.52 ರೂ.ಗೆ ಎಸ್‌ವಿಬಿ ಖರೀದಿ!
ಬ್ಯಾಂಕ್‌ ಖರೀದಿ ಎಂದರೆ ಸಾವಿರಾರು ಕೋಟಿ ವಹಿವಾಟಿನ ಡೀಲ್‌. ಆದರೆ, ಸದ್ಯ ಬಾಗಿಲು ಮುಚ್ಚಿರುವ ಎಸ್‌ವಿಬಿಯ ಇಂಗ್ಲೆಂಡ ಸಹವರ್ತಿಯನ್ನು ಎಚ್‌ಎಸ್‌ಬಿಸಿ ಬ್ಯಾಂಕ್‌, ಸಾಂಕೇತಿಕವಾಗಿ 99.52 ರೂ. ನೀಡಿ ಖರೀದಿಸಿದೆ! ಬ್ರಿಟನ್‌ನ ತಾಂತ್ರಿಕ ಸ್ಟಾರ್ಟಪ್‌ ಗಳಿಗಾಗಿ ಪ್ರಮುಖ ಬ್ಯಾಂಕನ್ನು ಉಳಿಸುವುದು, ಬ್ಯಾಂಕ್‌ ಭಾರೀ ಕುಸಿತ ತಡೆಯಲು ಸಹಾಯ ಮಾಡುವುದು ಇದರ ಉದ್ದೇಶ. ಬ್ರಿಟನ್‌ ಸರ್ಕಾರ ಕೂಡ ಕ್ಯಾಲಿಫೋರ್ನಿಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನ ಇಂಗ್ಲೆಂಡ್‌ ಶಾಖೆಯನ್ನು ಖರೀದಿ ಮಾಡುವವರಿಗಾಗಿ ಶೋಧ ನಡೆಸುತ್ತಿತ್ತು.

ಚಿಲ್ಲರೆ ಕ್ಷೇತ್ರದ ಹಣದುಬ್ಬರ ಇಳಿಕೆ
ದೇಶದಲ್ಲಿ ಪ್ರಸಕ್ತ ವರ್ಷ ಫೆಬ್ರವರಿಗೆ ಸಂಬಂಧಿಸಿದಂತೆ ಚಿಲ್ಲರೆ ಹಣದುಬ್ಬರ ದರ ಶೇ.6.44 ಇಳಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ದತ್ತಾಂಶಗಳಲ್ಲಿ ಉಲ್ಲೇಖಿಸಲಾಗಿದೆ.

ಜನವರಿಯಲ್ಲಿ ಅದರ ಪ್ರಮಾಣ, ಶೇ.6.52 ಆಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಹಣದುಬ್ಬರ ಪ್ರಮಾಣ ಶೇ.6.7 ಆಗಿದ್ದರೆ, ನಗರ ಪ್ರದೇಶಗಳಲ್ಲಿ ಶೇ.6.1 ಎಂದು ಸರ್ಕಾರ ತಿಳಿಸಿದೆ.

ಆಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಣದುಬ್ಬರ ಕೂಡ ಜನವರಿಯಲ್ಲಿ ಶೇ.6 ಇದ್ದದ್ದು ಕಳೆದ ತಿಂಗಳಿಗೆ ಶೇ.5.95ಕ್ಕೆ ಇಳಿಕೆಯಾಗಿದೆ. 2022 ನವೆಂಬರ್‌ ಮತ್ತು ಡಿಸೆಂಬರ್‌ ಅನ್ನು ಹೊರತುಪಡಿಸಿ, ಹಣದುಬ್ಬರ ಪ್ರಮಾಣ ಆರ್‌ಬಿಐ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಾಗಿಯೇ ಮುಂದುವರಿದಿತ್ತು.

ಟಾಪ್ ನ್ಯೂಸ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.