ಕೊಚ್ಚಿ,ಕೂಟನ್ನಾಡ್-ಮಂಗಳೂರು,ಬೆಂಗಳೂರು ಗ್ಯಾಸ್ ಪೈಪ್ಲೈನ್ ಕಾಮಗಾರಿಯ ಸೊತ್ತು ಕಳವು
Team Udayavani, Mar 14, 2023, 6:05 AM IST
ಉಳ್ಳಾಲ: ಕೊಚ್ಚಿ,ಕೂಟನ್ನಾಡ್- ಮಂಗಳೂರು,ಬೆಂಗಳೂರು ಅಂತರಾಜ್ಯ ಗ್ಯಾಸ್ ಪೈಪ್ಲೈನ್ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಐಎಲ್ಆಂಡ್ಎಫ್ಎಸ್ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪನಿಯ ಎಡ್ಮಿನ್ ಆಫೀಸರ್ ಸತೀಶ್ ಪಾಲ್ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2019ರ ಮೇ.19 ರಿಂದ ಫೆ.20ರ ವರೆಗೆ ಕಾಮಗಾರಿಗಳು ನಡೆದಿತ್ತು. ಈ ಸಮಯ ಸೈಟ್ ನಲ್ಲಿ ಕಾಮಗಾರಿ ನಡೆಸುವ ಸಾಮಗ್ರಿಗಳನ್ನು ದಾಸ್ತಾನಿರಿಸಲಾಗಿತ್ತು. 2020 ರ ಮಾ.21 ರಿಂದ 21ರವರೆಗೆ ನಿರ್ವಹಣೆಯ ಅವಧಿಯಿದ್ದು, ಬಳಿಕ ಕೋವಿಡ್ -19 ಇರುವುದರಿಂದ ವಸ್ತುಗಳನ್ನು ಹಾಗೆಯೇ ಇರಿಸಲಾಗಿತ್ತು. ಇದರಲ್ಲಿ ಬ್ರೇಕ್ ಟ್ಯಾಂಕ್ -1, 24 ಇಂಚುಗಳ 45 ಮೀ. ಉದ್ದದ ಕಾರ್ಬನ್ ಸ್ಟೀಲ್ ಪೈಪ್ , 3- ಮಡ್ ಮೇಟ್ ಸಾಗಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಅಲ್ಲಿಯೇ ಇರಿಸಲಾಗಿತ್ತು. ಇದನ್ನು 2021ರ ನ.3 ರಿಂದ ಡಿ.31ರ ಮಧ್ಯದಲ್ಲಿ ಕಳ್ಳರು ಕಳವು ನಡೆಸಿದ್ದಾರೆ. ಈ ಬಗ್ಗೆ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರಲ್ಲಿ, ಸಬ್ ಗುತ್ತಿಗೆದಾರರಲ್ಲಿ ವಿಚಾರಿಸಿದರೂ ಈವರೆಗೆ ಪತ್ತೆಯಾಗಿಲ್ಲ. ಅದರಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ