ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ


Team Udayavani, Mar 14, 2023, 5:01 AM IST

ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ

ದಯಾನಂದ ಕೆ. ಸುವರ್ಣ,
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ
ರಾಜ್ಯದ ಆರ್ಥಿಕತೆಗೆ ತನ್ನದೇ ಕೊಡುಗೆ ನೀಡುವ ಮೂಲಕ ಕರಾವಳಿಯ ಆರ್ಥಿಕತೆಯನ್ನು ಸದೃಢವಾಗಿಸುವಲ್ಲಿ ಮೀನುಗಾರಿಕೆ ಪ್ರಮುಖ ಪಾತ್ರವಹಿಸುತ್ತಿದೆ. ಕಡಲ ಮೀನುಗಾರಿಕೆ ಮತ್ತು ಉಪ ಕಸುಬು ಗಳನ್ನು ಅವಲಂಬಿಸಿ ಸಾವಿರಾರು ಕುಟುಂಬಗಳು ಇವೆ. 2021-22ರಲ್ಲಿ 5.89 ಲಕ್ಷ ಮೆಟ್ರಿಕ್‌ ಟನ್‌ ಕಡಲ ಮೀನು ಉತ್ಪಾದನೆಯಾಗಿದೆ. ಕಡಲ ಮೀನುಗಾರಿಕೆಯಲ್ಲಿ 4,744 ಯಾಂತ್ರೀ ಕೃತ ದೋಣಿಗಳು, 10,084 ಮೋಟಾರು ದೋಣಿಗಳು ಹಾಗೂ 7,714 ಸಾಂಪ್ರದಾಯಿಕ ದೋಣಿಗಳಿವೆ. ಯಾಂತ್ರೀಕೃತ ದೋಣಿಗಳು ರಾಜ್ಯದ ಒಟ್ಟು ಕಡಲ ಮೀನು ಉತ್ಪಾದನೆಯ ಶೇ.85ಕ್ಕೂ ಅಧಿಕ ಪಾಲು ಹೊಂದಿವೆ. 1962.19 ಕೋಟಿ ಮೌಲ್ಯದ 1,20,427 ಮೆಟ್ರಿಕ್‌ ಟನ್‌ ಸಾಗರೋತ್ಪನ್ನಗಳನ್ನು 2021-22ರಲ್ಲಿ ಹೊರ ದೇಶ ಹಾಗೂ ರಾಜ್ಯಗಳಿಗೆ ರಫ್ತು ಮಾಡಲಾಗಿದೆ.

ಮೀನುಗಾರರ ಬಹುಪಾಲು ಬದುಕು ಕಡಲ ಮಧ್ಯೆ ದೋಣಿ ಯಲ್ಲೇ ಇರುತ್ತದೆ. ಮೀನುಗಾರರ ಅದೆಷ್ಟೋ ಬೇಡಿಕೆಗಳು ಈಡೇರದೆ ಉಳಿದುಕೊಂಡಿವೆ. ಈ ಬಾರಿಯ ಚುನಾವಣೆಯಲ್ಲಾದರೂ ರಾಜಕೀಯ ಪಕ್ಷಗಳ ಪ್ರಣಾಳಿಕೆ ಯಲ್ಲಿ ಮೀನುಗಾರರ ಪ್ರಮುಖ ಬೇಡಿಕೆಗಳು ಇರಲಿ ಮತ್ತು ಅದಕ್ಕೆ ಪರಿಹಾರವೂ ಸಿಗುವಂತಾಗಲಿ.

ಮಲ್ಪೆ ಸಹಿತ ಕೆಲವು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ಮೇ ಅಂತ್ಯಕ್ಕೆ ಮೀನುಗಾರಿಕೆಯ ಋತು ಮುಗಿದು ಬೋಟುಗಳನ್ನು ಲಂಗರು ಹಾಕಲಾಗುತ್ತದೆ. ಅಷ್ಟರೊಳಗೆ ಹೂಳೆತ್ತುವ ಕಾರ್ಯ ಆಗಬೇಕು.

ಪ್ರತೀ ವರ್ಷವೂ ಮೇ ಅಂತ್ಯದೊಳಗೆ ಹೂಳೆತ್ತಬೇಕು. ಬೋಟುಗಳಿಗೆ ದಿನಕ್ಕೆ ನಿಗದಿ ಮಾಡಿರುವ ಡೀಸೆಲ್‌ ಮಿತಿಯನ್ನು 300 ಲೀಟರ್‌ನಿಂದ 500 ಲೀಟರ್‌ಗೆ ಹೆಚ್ಚಿಸಬೇಕು ಮತ್ತು ಅದನ್ನು ಯಾವ ತಿಂಗಳಿನಲ್ಲಿ ಬೇಕಾದರೂ ಪಡೆಯಲು ಅವಕಾಶ ನೀಡಬೇಕು.

ನಾಡದೋಣಿ ಮೀನುಗಾರರಿಗೆ ನಿರ್ದಿಷ್ಟ ಪ್ರಮಾಣದ ಸೀಮೆಎಣ್ಣೆಯನ್ನು ಆಯಾ ತಿಂಗಳು ಸಿಗುವಂತೆ ಮಾಡಬೇಕು. ಪೆಟ್ರೋಲ್‌ ಎಂಜಿನ್‌ ಬರುವ ತನಕವೂ ಇದನ್ನು ಮುಂದುವರಿಸಬೇಕು.

ಮೀನುಗಾರ ಮಹಿಳೆಯರಿಗೆ 50,000 ರೂ. ವರೆಗೆ ಬಡ್ಡಿರಹಿತ ಸಾಲ ಪುನರ್‌ ಆರಂಭಿಸಬೇಕು ಮತ್ತು ಈ ಹಿಂದೆ ಆಗಿರುವ ಮೀನುಗಾರರ ಸಾಲಮನ್ನಾ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗಬೇಕು.

ಎಲ್ಲ ಬಂದರುಗಳ ನಿರ್ವಹಣೆಗೆ ನಿರ್ದಿಷ್ಟ ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಮತ್ತು ಮೀನುಗಾರಿಕೆಗೆ ನೀಡುವ ಒಟ್ಟಾರೆ ಅನುದಾನದ ಪ್ರಮಾಣವನ್ನು ಹೆಚ್ಚಿಸಬೇಕು.

ಭದ್ರತೆಯ ವಿಷಯವಾಗಿ ಎಲ್ಲ ಬಂದರುಗಳಲ್ಲೂ ಸಿಸಿ ಕೆಮರಾ ಅಳವಡಿಸಬೇಕು. ಮೀನುಗಾರರ ರಕ್ಷಣೆಗೆ ಸೀ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು.

ಸಮುದ್ರದ ಮಧ್ಯದಲ್ಲಿ ಮೀನುಗಾರರ ಮೇಲೆ ಹೊರ ರಾಜ್ಯದವರಿಂದ ಆಗುವ ಹಲ್ಲೆಯನ್ನು ತಡೆಯಲು ಕ್ರಮ ಆಗಬೇಕು. ಮೀನುಗಾರರಿಗೆ ಸರಕಾರದಿಂದ ನೀಡುವ ವಸತಿ ಯೋಜನೆಯ ಅನುದಾನ ಹೆಚ್ಚಳ ಮಾಡಬೇಕು.
ಕಡಲಿನಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೀನುಗಾರ ಮಹಿಳೆಯರಿಗೂ ಅಗತ್ಯ ಸೌಲಭ್ಯಗಳನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಒದಗಿಸಬೇಕು.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.