ಧಾರವಾಡ: ಅನುಭವ ಮಂಟಪ-ವಚನ ಸಾಹಿತ್ಯ ಜಗತ್ತಿಗೇ ಮಾದರಿ

ಹೆಚ್ಚು ಬಸವ ತತ್ವ ಪ್ರಚಾರ ಮಾಡೋಣ

Team Udayavani, Mar 14, 2023, 5:25 PM IST

ಧಾರವಾಡ: ಅನುಭವ ಮಂಟಪ-ವಚನ ಸಾಹಿತ್ಯ ಜಗತ್ತಿಗೇ ಮಾದರಿ

ಧಾರವಾಡ: ಬಸವಾದಿ ಶರಣರು ರಚಿಸಿದ ಅನುಭವ ಮಂಟಪ ಹಾಗೂ ವಚನ ಸಾಹಿತ್ಯ ಈ ನಾಡಿಗೆ ಅಷ್ಟೇ ಅಲ್ಲದೆ ಜಗತ್ತಿಗೆ ಮಾದರಿಯಾಗಿದ್ದು, ಇದರ ಪ್ರಸಾರ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಸಪ್ತಗಿರಿ ಲೇಔಟ್‌ನಲ್ಲಿರುವ ಅಲ್ಲಮಪ್ರಭು ನಗರದಲ್ಲಿ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ ಸ್ಮಾರಕ ಭವನಕ್ಕೆ ಭೂಮಿಪೂಜೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಬಸವಾದಿ ಶರಣರು ವಚನಗಳನ್ನು ಸಂರಕ್ಷಣೆ ಮಾಡುವಲ್ಲಿ ತಮ್ಮ ಜೀವನವನ್ನೇ ತೆತ್ತರು. ತದನಂತರ ಡಾ| ಹಳಕಟ್ಟಿಯವರು ಶರಣರು ಸಂಚರಿಸಿದ ಜಾಗದಲ್ಲಿ ಹೋಗಿ ವಚನಗಳನ್ನು ಕ್ರೋಢೀಕರಿಸುವ ಕೆಲಸ ಮಾಡಿದ್ದರು. ವಚನ ಗ್ರಂಥಗಳನ್ನು ಸಿದ್ಧಪಡಿಸಿದರು. ಹಳಕಟ್ಟಿಯವರನ್ನು ನಾವು ನಿತ್ಯ ಸ್ಮರಿಸಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಡಾ| ಹಳಕಟ್ಟಿಯವರು ವಚನ ಸಾಹಿತ್ಯವನ್ನು ಜನಮನಕ್ಕೆ ತಲುಪಿಸಿದ ಕಾರಣ ಇಂದು ಜಗತ್ತಿಗೆ ಬಸವಣ್ಣನವರ ವಚನ ಹಾಗೂ ಅವರ ಅನುಭವ ಮಂಟಪದ ಮಾಹಿತಿ ಲಭ್ಯವಾಗಿದೆ. ಯುವ ಜನರು ಬಸವತತ್ವ ಪ್ರಚಾರ ಮಾಡುವುದರ ಜತೆಗೆ ಬಸವಾದಿ ಶರಣರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕು. ಸ್ಮಾರಕ ಭವನ ನಿರ್ಮಾಣದ ನಂತರ ಮಕ್ಕಳು ಹಾಗೂ ಯುವಜನರನ್ನು ಕರೆಯಿಸಿ ಅವರಿಗೆ ವಚನ ಸಾಹಿತ್ಯ ಹಾಗೂ ಬಸವಾದಿ ಶರಣರ ಸಂದೇಶಗಳನ್ನು ತಿಳಿಸಿಕೊಟ್ಟು ಮತ್ತಷ್ಟು ಹೆಚ್ಚು ಬಸವ ತತ್ವ ಪ್ರಚಾರ ಮಾಡೋಣ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಸವತತ್ವ ಪ್ರಸಾರ ಸಂಸ್ಥೆ ಅಧ್ಯಕ್ಷ ಡಾ| ಎಸ್‌.ಆರ್‌. ಗುಂಜಾಳ ಮಾತನಾಡಿ, ಹಳಕಟ್ಟಿಯವರ ಭವನ ಭೂಮಿಪೂಜೆ ಸಮಾರಂಭದಲ್ಲಿಯೇ ಅನೇಕ ಮಠಾಧೀಶರು, ಸಮಾಜ ಬಾಂಧವರು 25 ಲಕ್ಷಕ್ಕೂ ಅಧಿಕ ನೆರವಿನ ವಾಗ್ಧಾನ ಮಾಡಿರುವುದು ಸಂತಸದ ಸಂಗತಿ ಎಂದರು.

ತೋಂಟದಾರ್ಯ ಸಂಸ್ಥಾನಮಠದ ಡಾ| ತೋಂಟದ ಸಿದ್ದರಾಮ ಸ್ವಾಮೀಜಿ, ಜಮಖಂಡಿ ಓಲೆಮಠದ ಡಾ| ಅಭಿನವಕುಮಾರ ಚನ್ನಬಸವ ಸ್ವಾಮೀಜಿ, ಮುರುಘಾಮಠದ ಡಾ| ಮಲ್ಲಿಕಾರ್ಜುನ ಸ್ವಾಮೀಜಿ, ಸಂಶೋಧಕ ಡಾ| ವೀರಣ್ಣ ರಾಜೂರ, ಕಾರ್ಯದರ್ಶಿ ಡಾ| ಸುಲೋಚನಾ ಮಟ್ಟಿ , ರವಿಕುಮಾರ, ನಾಗರಾಜ ಪಟ್ಟಣಶೆಟ್ಟಿ, ಮಾರ್ಕಾಂಡೇಯ ದೊಡಮನಿ ಇದ್ದರು. ಪ್ರಭಾವತಿ ತಂಡದವರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ಕೂಡಲಪ್ಪ ಕೊಪ್ಪದ ನಿರೂಪಿಸಿದರು. ಮಹೇಶ ಬೆಲ್ಲದ ಸ್ವಾಗತಿಸಿದರು. ಶಕುಂತಲಾ ಮನ್ನಂಗಿ ವಂದಿಸಿದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.