ಹೆಮ್ಮಾಡಿ: ಅಂತರ್ಜಲ ಮಟ್ಟ ಕುಸಿತ – ಮೂರು ದಿನಕ್ಕೊಮ್ಮೆ ನೀರು ಪೂರೈಕೆ

ರಿಂಗ್‌ ಹಾಕುವ ಕಾಮಗಾರಿ ಪ್ರಗತಿಯಲ್ಲಿದೆ. ಈಗಿರುವುದು ಒಂದು ಬಾವಿಯ ನೀರು ಮಾತ್ರ.

Team Udayavani, Mar 16, 2023, 5:11 PM IST

ಹೆಮ್ಮಾಡಿ: ಅಂತರ್ಜಲ ಮಟ್ಟ ಕುಸಿತ – ಮೂರು ದಿನಕ್ಕೊಮ್ಮೆ ನೀರು ಪೂರೈಕೆ

ಹೆಮ್ಮಾಡಿ: ಬಿಸಿಲಿನ ಬೇಗೆ ಈ ಬಾರಿ ಹಿಂದಿನ ವರ್ಷಗಳಿಗಿಂತ ಹೆಚ್ಚುತ್ತಿದ್ದು, ಇದರಿಂದ ಎಲ್ಲೆಡೆಯ ನೀರಿನ ಮೂಲಗಳು ಬತ್ತಿ ಹೋಗುತ್ತಿದ್ದು, ಕೆಲವೆಡೆಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗ ಮನೆಗಳಿಗೆ 3 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹೆಮ್ಮಾಡಿ ಭಾಗದಲ್ಲಿ ನೀರಿನ ಸಮಸ್ಯೆ ಗಂಭೀರಗೊಳ್ಳುವ ಆತಂಕವಿದೆ.

ಜಲ ಮೂಲಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಈಗಿರುವ 3 ದಿನಕ್ಕೊಮ್ಮೆ ಮನೆ- ಮನೆಗಳಿಗೆ ನೀರು ಪೂರೈಸಲು ಸಹ ಗ್ರಾ.ಪಂ. ಹರಸಾಹಸ ಪಡುತ್ತಿದೆ. ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಎಲ್ಲ 4 ವಾರ್ಡ್‌ ಗಳಲ್ಲೂ ನೀರಿನ ಸಮಸ್ಯೆ ಆರಂಭವಾಗಿದೆ.

ಎಲ್ಲೆಲ್ಲ ಸಮಸ್ಯೆ
ಮುಖ್ಯವಾಗಿ ಸಂತೋಷನಗರ, ಕನ್ನಡ ಕುದ್ರು, ಬುಗುರಿಕಡು, ಕಟ್ಟು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಹೆಮ್ಮಾಡಿ ಗ್ರಾ.ಪಂ. ಕಚೇರಿ ಇರುವ ಸುತ್ತಮುತ್ತಲಿನ ಭಾಗದಲ್ಲಿ ಮಾತ್ರ ನೀರಿನ ಸಮಸ್ಯೆ ಈಗಿಲ್ಲ. ಗ್ರಾಮದಲ್ಲಿ ಒಟ್ಟಾರೆ 960 -970 ಮನೆಗಳಿದ್ದು, ಈ ಪೈಕಿ 280 ಮನೆಗಳಿಗೆ ನಳ್ಳಿ ನೀರಿನ ಸಂಪರ್ಕವಿದೆ. ಉಳಿದ ಮನೆಗಳಲ್ಲಿ ಸ್ವಂತ ಬಾವಿಯಿದೆ. ಆದರೆ ಈಗಲೇ ಕೆಲವು ಬಾವಿಗಳು ಬತ್ತಿ ಹೋಗಿದ್ದು, ಇನ್ನು ಕೆಲ ಬಾವಿಗಳಲ್ಲಿ ನೀರು ತಳಮಟ್ಟಕ್ಕೆ ಇಳಿದಿದೆ.

ಈಗಿರುವುದು ಒಂದು ಬಾವಿ ಮಾತ್ರ
ಪಂಚಾಯತ್‌ನಿಂದ ಒಂದು ಬೋರ್‌ವೆಲ್‌, ಎರಡು ಬಾವಿಗಳನ್ನು ಕೊರೆಯಿಸಲಾಗಿದ್ದು, ಈ ಪೈಕಿ ಬೋರ್‌ ವೆಲ್‌ನ ಪಂಪ್‌ ಹಾಳಾಗಿದೆ. ಇನ್ನು ಒಂದು ಬಾವಿಯ ನೀರು ಆಳಕ್ಕಿಳಿದಿದೆ. ಅದನ್ನು ಆಳ ಮಾಡಿ, ರಿಂಗ್‌ ಹಾಕುವ ಕಾಮಗಾರಿ ಪ್ರಗತಿಯಲ್ಲಿದೆ. ಈಗಿರುವುದು ಒಂದು ಬಾವಿಯ ನೀರು ಮಾತ್ರ.

ಮೂರು ದಿನಕ್ಕೊಮ್ಮೆ ನೀರು
ಪಂಚಾಯತ್‌ನಿಂದ ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಈ ಬಾರಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಬಾವಿಗಳಲ್ಲಿಯೂ ನೀರು ಇಳಿಕೆಯಾಗಿದೆ. ಜಲಜೀವನ್‌ ಮಿಷನ್‌ ಕಾಮಗಾರಿ ನಡೆಯುತ್ತಿದೆ. ಮುಂದಿನ ವರ್ಷದಿಂದ ವಾರಾಹಿ ನೀರಿನ ಪ್ರಯೋಜನ ಗ್ರಾಮಕ್ಕೆ ಸಿಗಲಿದೆ. ಈ ಬಾರಿ ಮಾತ್ರ ಸ್ವಲ್ಪ ಮಟ್ಟಿಗೆ ಕಷ್ಟವಾಗಲಿದೆ ಎನ್ನುವುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಯು. ಸತ್ಯನಾರಾಯಣ ರಾವ್‌ ತಿಳಿಸುತ್ತಾರೆ.

ಹೆಮ್ಮಾಡಿ ಗ್ರಾ.ಪಂ. ವಿವರ
ಒಟ್ಟು ಮನೆಗಳು 960-970
ನೀರಿನ ಸಂಪರ್ಕದ
ಮನೆ 280
ಸ್ವಂತ ಬಾವಿ 350 ಕ್ಕೂ ಮಿಕ್ಕಿ
ಜನಸಂಖ್ಯೆ 5 ಸಾವಿರಕ್ಕೂ ಮಿಕ್ಕಿ

ಗರಿಷ್ಠ ಪ್ರಯತ್ನ
ಪಂಚಾಯತ್‌ನಿಂದ ಎಲ್ಲರಿಗೂ ಕುಡಿಯುವ ನೀರು ಪೂರೈಕೆಗೆ ಗರಿಷ್ಠ ಪ್ರಯತ್ನ ಮಾಡುತ್ತಿದ್ದೇವೆ. ನೀರಿನ ಮೂಲಗಳಲ್ಲಿಯೇ ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ವ್ಯತ್ಯಯವಾಗುತ್ತಿದೆ. ಬಾವಿ ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಈಗಾಗಲೇ ಜಲಸಿರಿ ಯೋಜನೆಯವರಿಗೆ ಮನವಿ
ಸಲ್ಲಿಸಿದ್ದೇವೆ. ತಾಲೂಕು ಆಡಳಿತಕ್ಕೂ ಮನವಿ ಸಲ್ಲಿಸಲಾಗಿದೆ.
-ಸುಧಾಕರ ದೇವಾಡಿಗ ಕಟ್ಟು,
ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.