ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಭೇಟಿಯಾಗಲು ಮನೆ ಬಿಟ್ಟು ಜೈಲಿಗೆ ಹೊರಟ ಬಾಲಕಿಯರು
Team Udayavani, Mar 17, 2023, 11:38 AM IST
ಬಟಿಂಡಾ: ಸೆಂಟ್ರಲ್ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ನೋಡಲೆಂದು ಇಬ್ಬರು ಅಪ್ರಾಪ್ತ ಬಾಲಕಿಯರು ಮನೆಯಿಂದ ಪರಾರಿಯಾಗಿ ಜೈಲಿಗೆ ತೆರಳಿದ ಘಟನೆ ನಡೆದಿದೆ.
ಜೈಲಿನ ಹೊರಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಅಪ್ರಾಪ್ತ ವಯಸ್ಕ ಬಾಲಕಿಯರನ್ನು ಜೈಲು ಆಡಳಿತ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಗೆ ಒಪ್ಪಿಸಿದೆ. ಬಟಿಂಡಾದ ಮಕ್ಕಳ ರಕ್ಷಣಾ ಅಧಿಕಾರಿ ರವನೀತ್ ಕೌರ್ ಸಿಧು ಮಾತನಾಡಿ, ಹುಡುಗಿಯರು ಬಟಿಂಡಾ ಸೆಂಟ್ರಲ್ ಜೈಲಿನ ಹೊರಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವುಗಳನ್ನು ತಮ್ಮ ಸ್ನೇಹಿತರ ವಲಯಗಳಲ್ಲಿ ಕಳುಹಿಸಲು ಬಯಸಿದ್ದರು. ಈ ಬಾಲಕಿಯರು ಸಾಮಾಜಿಕ ಮಾಧ್ಯಮದಲ್ಲಿ ಲಾರೆನ್ಸ್ ಬಿಷ್ಣೋಯ್ ನಿಂದ ಪ್ರಭಾವಿತರಾಗಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:PMO ಕಚೇರಿಯ ಅಧಿಕಾರಿ ಅಂತ ಹೇಳಿ ಜಮ್ಮುವಿನಲ್ಲಿ ಯೋಧರು, ಅಧಿಕಾರಿಗಳನ್ನೇ ಯಾಮಾರಿಸಿದ ವಂಚಕ!
“ಅಪ್ರಾಪ್ತ ಬಾಲಕಿಯರು ತಮ್ಮ ಮನೆಯಲ್ಲಿ ಸುಳ್ಳು ಹೇಳಿ ಬಟಿಂಡಾ ತಲುಪಿದ್ದಾರೆ. ಇಬ್ಬರೂ ಬಟಿಂಡಾ ರೈಲ್ವೆ ನಿಲ್ದಾಣದಲ್ಲಿ ರಾತ್ರಿ ಕಳೆದಿದ್ದರು. ಅವರ ಸ್ನೇಹಿತರು, ಅವರೆಲ್ಲರೂ ಸಾಮಾಜಿಕ ಮಾಧ್ಯಮದಲ್ಲಿ ಲಾರೆನ್ಸ್ ಬಿಷ್ಣೋಯ್ ನಿಂದ ಪ್ರಭಾವಿತರಾಗಿದ್ದಾರೆ. ಬಿಷ್ಣೋಯ್ ನನ್ನು ಬಟಿಂಡಾ ಜೈಲಿನಲ್ಲಿ ಇರಿಸಲಾಗಿದೆ. ಹೀಗಾಗಿ ಇವರುಗಳು ಬಟಿಂಡಾ ಸೆಂಟ್ರಲ್ ಜೈಲಿನ ಹೊರಗೆ ಸೆಲ್ಫಿ ತೆಗೆದು ಅದನ್ನು ಸ್ನೇಹಿತರಿಗೆ ತೋರಿಸುವ ಉದ್ದೇಶ ಹೊಂದಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ” ಎಂದು ರವನೀತ್ ಕೌರ್ ಸಿಧು ಹೇಳಿದ್ದಾರೆ.
ಬಾಲಕಿಯರ ಮನೆಯವರನ್ನು ಕರೆಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಒಳಗಾದ ನಂತರ ಇಬ್ಬರೂ ಹುಡುಗಿಯರನ್ನು ಸಫಿ ಸೆಂಟರ್ ಗೆ ಕಳುಹಿಸಲಾಗಿದೆ. ಇಡೀ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ