ಬಿಎಸ್ವೈ- ರಾಘವೇಂದ್ರಗೆ ಕೊಟ್ಟ ಪ್ರೀತಿಯನ್ನು ವಿಜಯೇಂದ್ರಗೂ ತೋರಿಸಿ: ಸಿಎಂ ಬೊಮ್ಮಾಯಿ


Team Udayavani, Mar 17, 2023, 2:56 PM IST

ಬಿಎಸ್ವೈ- ರಾಘವೇಂದ್ರಗೆ ಕೊಟ್ಟ ಪ್ರೀತಿಯನ್ನು ವಿಜಯೇಂದ್ರಗೂ ತೋರಿಸಿ: ಸಿಎಂ ಬೊಮ್ಮಾಯಿ

ಶಿಕಾರಿಪುರ (ಶಿವಮೊಗ್ಗ): ಬಿಎಸ್ ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರಿಗೆ ತೋರಿದ ಅಭಿಮಾನ- ಪ್ರೀತಿಯನ್ನು ಮುಂದೆ ವಿಜಯೇಂದ್ರಗೆ ತೋರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಶಿಕಾರಿಪುರದಲ್ಲಿ ಮನವಿ ಮಾಡಿದರು.

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಉಡುತಡಿ ಗ್ರಾಮದಲ್ಲಿ ಅಕ್ಕಮಹಾದೇವಿ ಪುತ್ಹಳಿ ಲೋಕಾರ್ಪಣೆ‌ ಕಾರ್ಯಕ್ರಮ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ಶಿಕಾರಿಪುರದ ಅಲ್ಲಮಪ್ರಭುಗೆ ಅನುಭವ ಮಂಟಪದ ಅಧ್ಯಕ್ಷತೆ ಕೊಟ್ಟಿದ್ದರು. ಅಂದು ಶಿಕಾರಿಪುರದಿಂದ ಬಸವ ಕಲ್ಯಾಣದ ವರೆಗೆ ಜೋಡಿಸುವ ಕೆಲಸವಾಗಿತ್ತು. 21ನೇ ಶತಮಾನದಲ್ಲಿ ಅದೇ ಕೆಲಸವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಇಂದು ಕೆಲವರು ನಮ್ಮನ್ನೇ ಸಿಎಂ ಮಾಡಿ ಮಾಡಿ ಎಂದು ಹೇಳುವವರಿದ್ದಾರೆ. ಆದರೇ, ಯಾವುದೇ ಅಪೇಕ್ಷೆಯಿಲ್ಲದೇ 40 ವರ್ಷ ಹೋರಾಟ ಮಾಡಿ ಬಿಎಸ್ವೈ ಈ ಹಂತಕ್ಕೆ ಬಂದಿದ್ದಾರೆ. ಪಕ್ಷ ಸಂಘಟನೆ ಮಾಡುವಾಗ ಹಲ್ಲೆಯಾದರೂ ಧೈರ್ಯದಿಂದ ಮುಂದೆ ಬಂದಿದ್ದಾರೆ. ಹೋರಾಟದಿಂದಲೇ ಸಿಎಂ ಆಗಿ, ಶಿವಶರಣರ ನಾಡು ಶಿಕಾರಿಪುರ ಅಭಿವೃದ್ಧಿ ಮಾಡಿದ್ದಾರೆ. ಜೊತೆಗೆ ಬಸವಕಲ್ಯಾಣದಲ್ಲಿ ಅನುಭವ ಮಂಟಪ ಕಟ್ಟಲೂ ಯಡಿಯೂರಪ್ಪ 600 ಕೋಟಿ ಕೊಟ್ಟಿದ್ದಾರೆ. 12 ನೇ ಶತಮಾನದ ಕ್ರಾಂತಿಯನ್ನು ಇನ್ನೋಂದು ರೀತಿಯಲ್ಲಿ ಯಡಿಯೂರಪ್ಪ ಮುಂದುವರೆಸಿದ್ದಾರೆ ಎಂದರು.

ಇದನ್ನೂ ಓದಿ:ಗಂಡನ ಜೊತೆ ಇರುವ ಪ್ರಿಯತಮೆಯನ್ನು ನನ್ನ ವಶಕ್ಕೆ ಒಪ್ಪಿಸಿ…ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ…

ನನ್ನಂತ ನೂರಾರು ಜನರಿಗೆ ಸ್ಥಾನಮಾನ, ನಾಯಕತ್ವ ಕೊಟ್ಟಂತ ನಾಯಕ ಯಡಿಯೂರಪ್ಪ. ಅವರೀಗ ನಾನು ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದಾರೆ. ಜನ ಅವರನ್ನು ರಿಟೈರ್ಡ್ ಮಾಡುವುದಿಲ್ಲ. ಜನರು ಅವರ ಸೇವೆಯನ್ನು ಯಾವಾಗಲೂ ತೆಗೆದುಕೊಳ್ತಾರೆ.

ಮಂತ್ರಿ, ಮುಖ್ಯಮಂತ್ರಿ ಆಗೋದು ಬೇರೆ, ಜನ ನಾಯಕ ಆಗುವುದು ಬೇರೆ. ಜನರು ಮತ್ತು ಯಡಿಯೂರಪ್ಪ ನಡುವೆ ಗಾಳಿಯೂ ಬರಲು ಸಾಧ್ಯವಿಲ್ಲ. ರಾಜ್ಯಕ್ಕೆ ಯಡಿಯೂರಪ್ಪ ಅಗತ್ಯ ಹಿಂದಿಗಿಂತ ಇಂದು ಹೆಚ್ಚಾಗಿದೆ. ನಾನು ಕಷ್ಟದಲ್ಲಿದ್ದಾಗ ಕರೆದು, ಧೈರ್ಯ ಹೇಳಿ ಮಾರ್ಗದರ್ಶನ ಮಾಡಿದವರು ಯಡಿಯೂರಪ್ಪ. ತಂದೆ- ಮಗನ ಬಾಂಧವ್ಯ ರಾಜಕೀಯ ಹೊರತಾಗಿಯೂ ನಿರಂತರವಾಗಿ ಇರುತ್ತದೆ. ರಾಜ್ಯದಲ್ಲಿ ಬಡತನ ನೀಗಿ, ಎಲ್ಲರ ಅಭಿವೃದ್ಧಿಯಾಗಬೇಕು. ರಾಜ್ಯದಲ್ಲಿ ಮುಂದೆಯೂ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಮಾಡುತ್ತೇವೆ ಎಂದರು.

ಶರಣ ಅಲ್ಲಮಪ್ರಭು ಜನ್ಮಸ್ಥಳದ ಅಭಿವೃದ್ಧಿಗೆ 5 ಕೋಟಿ ಘೋಷಿಸಿದ ಸಿಎಂ, ಅಕ್ಕಮಹಾದೇವಿ ಪಿಜಿ ಸೆಂಟರ್ ನ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ಅನುದಾನ, ಶಿವನಪಾದ ಕ್ಷೇತ್ರವನ್ನು 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡುತ್ತೇವೆವೆ ಎಂದರು.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.