“ನನ್ನ ಪತಿ ಯಾವ ತಪ್ಪನ್ನೂ ಮಾಡಿಲ್ಲ..” ವಂಚಕ ಕಿರಣ್ ಪಟೇಲ್ ಪತ್ನಿ ಮೊದಲ ಪ್ರತಿಕ್ರಿಯೆ
Team Udayavani, Mar 18, 2023, 9:35 AM IST
ನವದೆಹಲಿ: ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳನ್ನೇ ವಂಚಿಸಿ ಬಂಧನಕ್ಕೆ ಒಳಗಾಗಿರುವ ಗುಜರಾತ್ ನ ಕಿರಣ್ ಪಟೇಲ್ ಅವರ ಪತ್ನಿ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.
ಝಡ್ ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಮಹೀಂದ್ರಾ ಸ್ಕಾರ್ಪಿಯೋ ಎಸ್ ಯುವಿ, ಪಂಚತಾರಾ ಹೋಟೆಲ್ ನಲ್ಲಿ ಆತಿಥ್ಯ ವಹಿಸಿ ಗುಜರಾತ್ ನ ಕಿರಣ್ ಪಟೇಲ್ ಎಂಬಾತ ತಾನು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಕಾಶ್ಮೀರದ ಆಡಳಿತಾಧಿಕಾರಿಗಳನ್ನು ವಂಚಿಸಿ ಹೈಫೈ ಲೈಫ್ ನಡೆಸುತ್ತಿದ್ದರು.
ಮೂರನೇ ಬಾರಿ ಕಾಶ್ಮೀರಕ್ಕೆ ಭೇಟಿ ನೀಡುವ ವೇಳೆ ( ಮಾ. 3 ರಂದು) ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈತನ ಬಂಧನದ ವಿಷಯವನ್ನು ಪೊಲೀಸರು ರಹಸ್ಯವಾಗಿಟ್ಟಿದ್ದು, ಕೋರ್ಟ್ ಗೆ ಹಾಜರುಪಡಿಸಿದ ವೇಳೆ ನ್ಯಾಯಾಧೀಶರು ಪಟೇಲ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ ಬಳಿಕವಷ್ಟೇ ಪ್ರಕರಣ ಬಹಿರಂಗವಾಗಿರುವುದಾಗಿ ವರದಿ ವಿವರಿಸಿದೆ.
ಇದೀಗ ಪ್ರಕರಣದ ಬಗ್ಗೆ ಕಿರಣ್ ಪಟೇಲ್ ಅವರ ಪತ್ನಿ ʼಇಂಡಿಯಾ ಟುಡೇʼ ಜೊತೆ ಮಾತನಾಡಿದ್ದಾರೆ. “ನನ್ನ ಪತಿ ಎಂಜಿನಿಯರ್ ಮತ್ತು ನಾನು ವೈದ್ಯ. ನನ್ನ ಪತಿ ಇಂಜಿನಿಯರ್ ಆಗಿರುವ ಕಾರಣಕ್ಕೆ ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ ಹೋಗಿದ್ದರು ವಿನಃ ಬೇರೇನೂ ಕಾರಣದಿಂದಲ್ಲ. ನನ್ನ ಪತಿ ಯಾವ ತಪ್ಪನ್ನು ಮಾಡಿಲ್ಲ. ಅವರು ತಪ್ಪು ಮಾಡಲು ಸಾಧ್ಯವೇ ಇಲ್ಲ. ಈ ವಿಷಯವನ್ನು ನಮ್ಮ ವಕೀಲರು ನೋಡಿಕೊಳ್ಳುತ್ತಾರೆ. ಇದಕ್ಕಿಂತ ಹೆಚ್ಚು ಬೇರೇನನ್ನು ನಾನು ಹೇಳುವುದಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಅಹಮದಾಬಾದ್ ಕ್ರೈಂ ಬ್ರಾಂಚ್ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕೂಡ ಈ ಬಗ್ಗೆ ತನಿಖೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್