ಆಸ್ಕರ್ ವೀಕ್ಷಿಸಲು ಕೋಟ್ಯಂತರ ರೂ. ವ್ಯಯಿಸಿದ ರಾಜಮೌಳಿ!
Team Udayavani, Mar 19, 2023, 7:23 AM IST
ನವದೆಹಲಿ: ಇತ್ತೀಚೆಗಷ್ಟೇ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಆರ್ಆರ್ಆರ್ ಸಿನಿಮಾ ಇತಿಹಾಸ ಸೃಷ್ಟಿಸಿತ್ತು. ಆದರೆ ಅದೇ ಸಿನಿಮಾದ ನಿರ್ದೇಶಕ ರಾಜಮೌಳಿಗೇ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸಲು ಉಚಿತ ಟಿಕೆಟ್ ಸಿಕ್ಕಿಲ್ಲ. ನಾಟು-ನಾಟು ಹಾಡಿನ ಸಂಗೀತ ನಿರ್ದೇಶಕರಾದ ಎಂ.ಎಂ.ಕೀರವಾಣಿ ಮತ್ತವರ ಧರ್ಮಪತ್ನಿ ಹಾಗೂ ಸಾಹಿತ್ಯಗಾರರಾದ ಚಂದ್ರಬೋಸ್ ಮತ್ತವರ ಶ್ರೀಮತಿಗೆ ಮಾತ್ರ, ಆಸ್ಕರ್ ಅಕಾಡೆಮಿ ಉಚಿತ ಟಿಕೆಟ್ ನೀಡಿದೆ.
ಉಳಿದಂತೆ ರಾಜಮೌಳಿ ತಂಡದ ಯಾರಿಗೂ ಉಚಿತ ಟಿಕೆಟ್ ನೀಡಲಾಗಿಲ್ಲ. ಹೀಗಾಗಿ ಸಿನಿಮಾದ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ರಾಜಮೌಳಿ ಕೋಟಿಕೋಟಿ ಖರ್ಚು ಮಾಡಿದ್ದಾರೆ.
ಒಂದು ಟಿಕೆಟ್ಗೆ 20.6 ಲಕ್ಷ ರೂ. ಶುಲ್ಕವಿದ್ದು, ರಾಜಮೌಳಿ ಅವರ ಪತ್ನಿ, ಪುತ್ರ ಹಾಗೂ ಸೊಸೆಗೆ ಟಿಕೆಟ್ ಖರೀದಿಸಿದ್ದಾರೆ. ಅಲ್ಲದೇ ತಮ್ಮ ತಂಡಕ್ಕೂ ತಾವೇ ಟಿಕೆಟ್ ಖರೀದಿಸಿದ್ದಾರೆ. ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಕೂಡ ಅವರವರ ಪತ್ನಿಯರ ಜತೆಗೆ ಸ್ವಂತ ಟಿಕೆಟ್ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅದರಲ್ಲೂ ಕೊನೆಯ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದ್ದ ತಂಡದ ವಿಡಿಯೊ ನೋಡಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…