ಸರಕಾರಿ ಶಾಲೆ ಆಸ್ತಿ ನೋಂದಣಿ ಸಂಕಷ್ಟ ! ದಾಖಲೆ ಸಮಸ್ಯೆ, ಅಧಿಕಾರಿಗಳ ಅಸಹಕಾರ


Team Udayavani, Mar 20, 2023, 7:30 AM IST

ಸರಕಾರಿ ಶಾಲೆ ಆಸ್ತಿ ನೋಂದಣಿ ಸಂಕಷ್ಟ ! ದಾಖಲೆ ಸಮಸ್ಯೆ, ಅಧಿಕಾರಿಗಳ ಅಸಹಕಾರ

ಉಡುಪಿ: ಸರಕಾರಿ ಶಾಲೆಗಳು ಇರುವ ಜಾಗದ ದಾಖಲೆ ಪತ್ರ ಸಮರ್ಪಕವಾಗಿಲ್ಲದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಜಮೀನು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸರಕಾರಿ ಇಲಾಖೆಗಳಿಂದ ಶಾಲೆಯ ಹೆಸರಿಗೆ ಜಮೀನು ನೋಂದಣಿ ಮಾಡಿಸಿಕೊಳ್ಳುವುದು ಕಗ್ಗಂಟಾಗುತ್ತಿದೆ.

ಕೆಲವು ಶಾಲೆಗಳು ಸರಕಾರಿ ಜಮೀನಿನಲ್ಲಿದ್ದರೂ ಕಂದಾಯ, ಲೋಕೋಪಯೋಗಿ, ಮೀನುಗಾರಿಕೆ ಅಥವಾ ಬೇರ್ಯಾವುದೋ ಇಲಾಖೆಯಲ್ಲಿ ಅದರ ದಾಖಲೆ ಪತ್ರಗಳಿರುತ್ತವೆ. ಕೆಲವು ಶಾಲೆಗಳ ಜಮೀನು ದಾನವಾಗಿ ಬಂದಿದ್ದು, ಅದರ ನೋಂದಣಿ ಕಷ್ಟವಾಗುತ್ತದೆ. ಕೆಲವೆಡೆ ಖಾಸಗಿ ಸೊತ್ತು, ಬೇರೆ ಬೇರೆ ಸಂಘ ಸಂಸ್ಥೆಗಳ ಅಧೀನದ ಜಮೀನಿನಲ್ಲಿ ಶಾಲೆಗಳಿವೆ. ಎಲ್ಲವನ್ನೂ ನೋಂದಣಿ ಮಾಡಿಸುವ ಪ್ರಕ್ರಿಯೆ ವರ್ಷಗಳಿಂದ ನಡೆಯುತ್ತಿದ್ದು, ಶೇ. 100ರಷ್ಟು ಸಾಧನೆ ಸಾಧ್ಯವಾಗುತ್ತಿಲ್ಲ.

ತಾಂತ್ರಿಕ ಸವಾಲು
ಸರಕಾರಿ ಜಮೀನಿನಲ್ಲಿರುವ ಆಸ್ತಿಗಳನ್ನು ಶಾಲೆಯ ಹೆಸರಿಗೆ ಸುಲಭವಾಗಿ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರಣ ಮೂಲ ಇಲಾಖೆಯಿಂದ ಆ ಜಮೀನನ್ನು ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿ ಕೊಡಲು ಅಧಿಕಾರಿಗಳು ಒಪ್ಪುತ್ತಿಲ್ಲ. ಮಾಡಿ ಕೊಡಲು ಸಿದ್ಧವಿರುವ ಕೆಲವು ಕಡೆ ಮೇಲಧಿಕಾರಿಗಳು ಮುಂದಿನ ಪ್ರಕ್ರಿಯೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಶಾಲಾ ಮುಖ್ಯ ಶಿಕ್ಷಕರಿಗೆ ಜಮೀನು ದಾಖಲೆ ಹಿಡಿದು ಇಲಾಖೆಯಿಂದ ಇಲಾಖೆಗೆ ಅಲೆಯುವುದೇ ಕೆಲಸ ವಾಗಿದೆ. ಕೆಲವು ತಾಂತ್ರಿಕ ಸವಾಲುಗಳಿಗೆ ಸರಕಾರವೇ ಮುಕ್ತಿ ನೀಡಬೇಕು ಎಂಬ ಆಗ್ರಹವೂ ಕೇಳಿಬರುತ್ತಿವೆ.

ಉಡುಪಿ ಜಿಲ್ಲೆಯಲ್ಲಿ 578 ಸರಕಾರಿ ಪ್ರಾಥಮಿಕ ಶಾಲೆ ಹಾಗೂ 106 ಪ್ರೌಢಶಾಲೆಗಳಿವೆ. 384 ಪ್ರಾಥಮಿಕ ಶಾಲೆಗಳ ಆಸ್ತಿ ನೋಂದಣಿ ಮಾಡಿದ್ದು, 194 ನೋಂದಣಿಗೆ ಬಾಕಿಯಿದೆ.

ಇದರಲ್ಲಿ ತಲಾ 7 ದಾನ ಹಾಗೂ ಖಾಸಗಿ ಸೊತ್ತಾಗಿದೆ. 55 ಪ್ರೌಢಶಾಲೆ ಆಸ್ತಿ ನೋಂದಣಿಯಾಗಿದ್ದು, 51 ಬಾಕಿಯಿದೆ. 1 ದಾನ ಹಾಗೂ ಮೂರು ಖಾಸಗಿ ಸೊತ್ತಿನಲ್ಲಿದೆ.

ದ.ಕ. ಜಿಲ್ಲೆಯ 914 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 838 ಶಾಲೆಗಳ ಆಸ್ತಿ ನೋಂದಣಿ ಆಗಿದ್ದು, 76 ಬಾಕಿಯಿದೆ. 21 ದಾನ, 45 ಖಾಸಗಿ ಸೊತ್ತು ಸೇರಿದೆ. 170 ಪ್ರೌಢಶಾಲೆಗಳಲ್ಲಿ 158 ನೋಂದಣಿಯಾಗಿದ್ದು, 12 ಬಾಕಿಯಿದೆ. ತಲಾ ಒಂದೊಂದು ದಾನ ಹಾಗೂ ಖಾಸಗಿ ಸೊತ್ತಾಗಿದೆ.

ಸರಕಾರಿ ಜಮೀನು ಹೆಚ್ಚಿದೆ
ಉಭಯ ಜಿಲ್ಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಯಾವುದೇ ಶಾಲೆಯ ನೋಂದಣಿ ಪ್ರಕ್ರಿಯೆ ನಡೆದಿಲ್ಲ. ಆಸ್ತಿ ನೋಂದಣಿಗೆ ಬಾಕಿ ಇರುವ 333 ಶಾಲೆಗಳಲ್ಲಿ 226 ಶಾಲೆಗಳು ಸರಕಾರಿ ಜಮೀನಿನಲ್ಲಿವೆ. ಉಳಿದವು ಖಾಸಗಿ ಹಾಗೂ ದಾನ ರೂಪದಲ್ಲಿ ಬಂದಿರುವ ಜಮೀನಿನಲ್ಲಿವೆ.

ನೋಂದಣಿ ಯಾಕೆ?
ಹಲವು ಕಡೆಗಳಲ್ಲಿ ಸರಕಾರಿ ಶಾಲೆಗಳ ಜಮೀನು ಎಷ್ಟಿದೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ. ಕೆಲವು ಕಡೆಗಳಲ್ಲಿ ಸರಕಾರಿ ಶಾಲೆಯ ಜಾಗವನ್ನು ಪರಭಾರೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಶಾಲೆಗಳ ಆಸ್ತಿ ನೋಂದಣಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸರಕಾರಿ ಇಲಾಖೆಗಳ ಜಮೀನಿನಲ್ಲಿರುವ ಶಾಲೆಯನ್ನು ಶಿಕ್ಷಣ ಇಲಾಖೆಯಡಿ ನೋಂದಣಿ ಮಾಡಿಕೊಳ್ಳಲು ಶಾಲೆಗಳಿಂದ ಹೋಗಿರುವ ಪ್ರಸ್ತಾವನೆ ಆಧಾರದಲ್ಲಿ ಮೂಲ ಇಲಾಖೆಯಿಂದ ಸರಕಾರಕ್ಕೆ ಕಳುಹಿಸಿ, ಅನುಮತಿ ನೀಡ ಬೇಕಾಗುತ್ತದೆ. ಕೆಲವು ಕಡೆಗಳಲ್ಲಿ ಫಾಲೋಅಪ್‌ ಕೊರತೆಯಿಂದ ನೋಂದಣಿ ಬಾಕಿ ಉಳಿದಿದೆ. ಆದಷ್ಟು ಬೇಗ ಪೂರ್ಣಗೊಳಿಸ ಲಾಗುವುದು.
-ಡಾ| ವಿಶಾಲ್‌, ಆಯುಕ್ತರು,
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.