ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ
Team Udayavani, Mar 20, 2023, 9:56 PM IST
ಕೊಟ್ಟಿಗೆಹಾರ:ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದ್ದು 15 ಲೀ. ಬೆಲ್ಲದ ಕೊಳೆ, 6 ಲೀ. ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.