ಕೆಯ್ಯೂರು: ಹಾವು ಕಡಿದ ತಾಯಿಯನ್ನು ರಕ್ಷಿಸಿದ ಪುತ್ರಿ!

ಬಾಯಿಯಿಂದ ವಿಷ ಹೀರಿ ಸಮಯಪ್ರಜ್ಞೆ ಮೆರೆದಳು

Team Udayavani, Mar 21, 2023, 7:15 AM IST

ಕೆಯ್ಯೂರು: ಹಾವು ಕಡಿದ ತಾಯಿಯನ್ನು ರಕ್ಷಿಸಿದ ಪುತ್ರಿ!

ಪುತ್ತೂರು: ನಾಗರ ಹಾವಿನ ಕಡಿತಕ್ಕೆ ಒಳಗಾದ ತಾಯಿಗೆ ಪುತ್ರಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಅಪರೂಪದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ.

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿನಿ, ಸ್ಕೌಟ್ಸ್‌ ಮತ್ತು ಗೈಡ್ಸ್ ನ ರೇಂಜರ್‌ ಕೂಡ ಆಗಿರುವ ಶ್ರಮ್ಯಾ ರೈ ಈ ಸಾಹಸಿ. ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಸಮಯ ಪ್ರಜ್ಞೆ, ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬಾಯಿಯಿಂದಲೇ ವಿಷ ಹೀರಿದಳು!
ಕೆಯ್ಯೂರಿನ ತನ್ನ ಮನೆಯ ಸನಿಹದಲ್ಲೇ ಇರುವ ತಾಯಿ ಮನೆಗೆ ಶ್ರಮ್ಯಾಳ ತಾಯಿ, ಕೆಯ್ಯೂರು ಗ್ರಾ.ಪಂ. ಸದಸ್ಯೆಯಾಗಿರುವ ಮಮತಾ ರೈ ಹೋಗಿದ್ದರು. ಅಲ್ಲಿ ಪಂಪ್‌ ಸ್ವಿಚ್‌ ಹಾಕಲೆಂದು ಮಮತಾ ರೈ ಅವರು ತೋಟಕ್ಕೆ ತೆರಳಿದ್ದರು. ಸ್ವಿಚ್‌ ಹಾಕಿ ಮರಳಿ ಬರುತ್ತಿರುವಾಗ ಕೆರೆಯ ಪಕ್ಕದಲ್ಲಿ ನಾಗರಹಾವನ್ನು ತುಳಿದಿದ್ದು, ಹಾವು ಅವರಿಗೆ ಕಚ್ಚಿತ್ತು. ಅವರು ತತ್‌ಕ್ಷಣ ಮನೆಗೆ ಮರಳಿ ಕೆಲಸದಾಳಿನ ಸಹಾಯದಿಂದ ಹಾವು ಕಚ್ಚಿದ ಸ್ಥಳದಿಂದ ಮೇಲ್ಭಾಗಕ್ಕೆ ವಿಷ ಏರದಂತೆ ಬೈ ಹುಲ್ಲು ಕಟ್ಟಿದ್ದರು. ಆದರೆ ಇದು ಹೆಚ್ಚು ಪ್ರಯೋಜನಕಾರಿ ಆಗಲಾರದು ಎಂದರಿತ ಶ್ರಮ್ಯಾ ರೈ ಹಾವು ಕಚ್ಚಿದ ಸ್ಥಳದಲ್ಲಿ ಬಾಯಿಯೂರಿ, ಹೀರಿ ವಿಷ ತೆಗೆದಿದ್ದಾರೆ. ಅದಾದ ಬಳಿಕ ಮಮತಾ ರೈ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶ್ರಮ್ಯಾಳ ಸಮಯಪ್ರಜ್ಞೆಯಿಂದಾಗಿ ಮಮತಾ ರೈ ಅವರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.

“ಹಾವು ಕಚ್ಚಿದ ವಿಚಾರ ವನ್ನು ತಾಯಿ ಹೇಳಿದರು. ಬೈಹುಲ್ಲು ಕಟ್ಟಿದರೂ ನನಗೆ ವಿಶ್ವಾಸ ಮೂಡದ ಕಾರಣ ಬಾಯಿಯಿಂದಲೇ ಹೀರಿ ವಿಷ ತೆಗೆದು ಹಾಕಿದೆ. ಆಸ್ಪತ್ರೆಯಲ್ಲಿ ವೈದ್ಯರು ವಿಷ ತೆಗೆದದ್ದು ಒಳ್ಳೆಯದಾಯಿತು ಎಂದಿದ್ದಾರೆ. ಇದು ನನ್ನ ಮೊದಲ ಅನುಭವ. ಕೇಳಿ, ಸಿನೆಮಾಗಳಲ್ಲಿ ನೋಡಿ ತಿಳಿದಿದ್ದ ಮಾಹಿತಿಯ ಆಧಾರದಲ್ಲಿ ಇಂಥ ಪ್ರಥಮ ಚಿಕಿತ್ಸೆ ನಡೆಸುವ ಧೈರ್ಯ ಮಾಡಿದೆ’ ಎಂದು ಶ್ರಮ್ಯಾ ರೈ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.