ಮುಂಬೈ ಇಂಡಿಯನ್ಸ್‌ಗೆ 4 ವಿಕೆಟ್‌ ಗೆಲುವು: ಸೋಲಿನೊಂದಿಗೆ ಡಬ್ಲೂಪಿಎಲ್‌ ಮುಗಿಸಿದ ಮಂಧನಾ ಪಡೆ


Team Udayavani, Mar 22, 2023, 7:32 AM IST

RCB MUMBA

ಮುಂಬೈ: ತೀವ್ರ ಪೈಪೋಟಿಯಿಂದ ಸಾಗಿದ ವನಿತಾ ಪ್ರೀಮಿಯರ್‌ ಲೀಗ್‌ನ ಮಂಗಳವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಲು ಯಶಸ್ವಿಯಾಗಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡವು 6 ವಿಕೆಟಿಗೆ 125 ರನ್‌ ಗಳಿಸಲು ಶಕ್ತವಾಯಿತು. ಇದಕ್ಕುತ್ತರವಾಗಿ ಉತ್ತಮ ಆರಂಭದ ಹೊರತಾಗಿಯೂ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದರೂ ಅಂತಿಮವಾಗಿ 16.3 ಓವರ್‌ಗಳಲ್ಲಿ 129 ರನ್‌ ಗಳಿಸಿ ಜಯಭೇರಿ ಬಾರಿಸಿತು. ಹೀಲಿ ಮ್ಯಾಥ್ಯೂಸ್‌ ಮತ್ತು ಯಾಸ್ತಿಕಾ ಭಾಟಿಯಾ ಮೊದಲ ವಿಕೆಟಿಗೆ 53 ರನ್‌ ಪೇರಿಸಿದ್ದರು. ಆಬಳಿಕ ಕೆಲವು ವಿಕೆಟ್‌ ಉರುಳಿದ್ದರೂ ಗೆಲುವಿನ ಮೊತ್ತ ಕಡಿಮೆ ಇದ್ದ ಕಾರಣ ಮುಂಬೈ ಜಯ ಸಾಧಿಸುವಂತಾಯಿತು.

ಸ್ಪಿನ್‌ ದಾಳಿಗೆ ಕಂಗಾಲು
ಈ ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಆರ್‌ಸಿಬಿ ತಂಡವು ಅಮೆಲಿಯಾ ಕೆರ್ರ ಅವರ ಮಾರಕ ದಾಳಿಗೆ ಸಿಲುಕಿ 125 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸ್ಪಿನ್ನರ್‌ಗಳು ಮೇಲುಗೈ ಪಡೆಯಬಹುದೆಂಬ ಮುಂಬೈ ಇಂಡಿಯನ್ಸ್‌ ನಾಯಕಿ ಹರ್ಮನ್‌ ಪ್ರೀತ್‌ ಅವರ ನಿರೀಕ್ಷೆ ಸರಿಯಾಗಿಯೇ ಫ‌ಲ ನೀಡಿತು. ಕೆರ್ರ ಅವರು 22 ರನ್‌ ನೀಡಿ ಮೂರು ವಿಕೆಟ್‌ ಉರುಳಿಸಿ ಬೌಲಿಂಗ್‌ನಲ್ಲಿ ಅಗ್ರಸ್ಥಾನಿಯಾಗಿ ಮಿಂಚಿದರೆ ಹೀಲಿ ಮ್ಯಾಥ್ಯೂಸ್‌ ಮತ್ತು ಸೈಕಾ ಇಶಾಕಿ ಅವರು ಬ್ಯಾಟರ್‌ಗಳನ್ನು ಕಾಡುವಲ್ಲಿ ಯಶಸ್ವಿಯಾದರು.

ಮಂಗಳವಾರದ ಈ ಸಾಧನೆಯೊಂದಿಗೆ ಕೆರ್ರ ಮತ್ತು ಇಶಾಕಿ ಅವರು ಯುಪಿಯ ಸೋಫಿ ಅವರೊಂದಿಗೆ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಗರಿಷ್ಠ 13 ವಿಕೆಟ್‌ ಉರುಳಿಸಿದ ಸಾಧನೆಗೆ ಪಾತ್ರರಾದರು.

ಪಂದ್ಯದ ನಾಲ್ಕನೇ ಎಸೆತದಲ್ಲಿಯೇ ಮುಂಬೈ ಯಶಸ್ಸೊಂದನ್ನು ಪಡೆಯಿತು. ಸ್ಮತಿ ಮಂಧನಾ ಮತ್ತು ಸೋಫಿ ಡಿವೈನ್‌ ಅವರ ನಡುವಿನ ಹೊಂದಾಣಿಕೆ ರಹಿತ ಓಟವು ರನೌಟ್‌ಗೆ ಕಾರಣವಾಯಿತು. ಇದರಿಂದ ಆರಂಭದಲ್ಲಿಯೇ ಆರ್‌ಸಿಬಿ ಒತ್ತಡಕ್ಕೆ ಸಿಲುಕಿತು. ಆಗ ತಂಡದ ಸ್ಕೋರ್‌ ಕೇವಲ ಒಂದು ರನ್‌-ಒಂದು ವಿಕೆಟ್‌.

ಸ್ಮತಿ ಅವರು ಕೆರ್ರ ಅವರ ಸ್ಪಿನ್‌ ದಾಳಿಗೆ ಸಿಲುಕುವ ಮೊದಲು ಉತ್ತಮವಾಗಿ ಆಡಿ 25 ಎಸೆತಗಳನ್ನು ಎದುರಿಸಿ 24 ರನ್‌ ಸಂಪಾದಿಸಿದರು. ಇದರಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್‌ ಒಳಗೊಂಡಿತ್ತು. ಎಲ್ಸಿ ಪೆರ್ರಿ ಅವರು ಆರಂಭದಲ್ಲಿ ಎಚ್ಚರಿಕೆಯಿಂದ ಆಟವಾಡಿದರು. ಅವರು 10ನೇ ಓವರ್‌ನಲ್ಲಷ್ಟೇ ಸತತ ಬೌಂಡರಿ ಸಿಡಿಸುವ ಮೂಲಕ ರನ್‌ರೇಟ್‌ ಏರಿಸಿಕೊಂಡರು. ಒಟ್ಟು 28 ಎಸೆತಗಳನ್ನು ಎದುರಿಸಿ 29 ರನ್‌ ಗಳಿಸಿದರು. ಅದರಲ್ಲಿ ಮೂರು ಬೌಂಡರಿಗಳಿದ್ದವು. ಅರ್ಧ ಇನ್ನಿಂಗ್ಸ್‌ ಮುಗಿದಾಗ ತಂಡ ಎರಡು ವಿಕೆಟ್‌ ನಷ್ಟಕ್ಕೆ 56 ರನ್‌ ಗಳಿಸಿತ್ತು. ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್‌ ಅವರು ಸ್ವಲ್ಪ ಸಿಡಿದ ಕಾರಣ ತಂಡ 100ರ ಗಡಿ ದಾಟಲು ಸಾಧ್ಯವಾಯಿತು. ರಿಚಾ ಅವರು ಕೇವಲ 13 ಎಸೆತಗಳಲ್ಲಿ 29 ರನ್‌ ಸಿಡಿಸಿದರು. ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳು ಇದರಲ್ಲಿ ಸೇರಿತ್ತು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.