ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ
Team Udayavani, Mar 23, 2023, 2:48 PM IST
ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಟ್ರೆಂಡಿಂಗ್ ಸ್ಟಾರ್ ಗಳಲ್ಲಿ ಒಬ್ಬರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುತ್ತಾರೆ. ನಗುಮುಖದಿಂದಲೇ ಅಭಿಮಾನಿಗಳೊಂದಿಗೆ ಬೆರೆಯುತ್ತಾರೆ.
ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ತನ್ನ ವ್ಯಕ್ತಿತ್ವ ಹಾಗೂ ದಿನಚರಣೆಯ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ಅವರು ಆಡಿದ ಒಂದು ಮಾತಿನಿಂದ ಕೊಡಗಿನ ಬೆಡಗಿ ಮತ್ತೆ ಸುದ್ದಿ ಆಗಿದ್ದಾರೆ.
ಇದನ್ನೂ ಓದಿ: ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
“ನನಗೆ ಜೀವನದಲ್ಲಿ ಸಣ್ಣ ವಿಚಾರಗಳು ಕೂಡ ಮಹತ್ವದಾಗುತ್ತದೆ. ನಾನು ಪ್ರತಿನಿತ್ಯ ನನ್ನ ಸ್ನೇಹಿತರು, ಸಾಕು ಪ್ರಾಣಿಗಳೊಂದಿಗೆ ದಿನಕಳೆಯುತ್ತೇನೆ ಅದು ನನಗೆ ಖುಷಿ ಕೊಡುತ್ತದೆ. ಮಾತುಗಳು ಮುಖ್ಯ ಏಕಂದರೆ ಅದು ಸಂತಸವನ್ನು ನೀಡುತ್ತದೆ ಅಥವಾ ಮನಸ್ಸಿಗೆ ನೋವನ್ನೂ ಮಾಡಬಹುದು. ನನಗೆ ಯಾರಾದರೂ ಏನಾದರೂ ಹೇಳಿದಾಗ, ಅದು ಮನಸ್ಸಿಗೆ ತಟ್ಟಿದರೆ ಅದನ್ನು ನಾನು ಡೈರಿಯಲ್ಲಿ ಬರೆದಿಡುತ್ತೇನೆ. ನನಗೆ ಮನೆಗೆ ಹಿಂತಿರುಗಿ, ಪ್ರತಿಯೊಬ್ಬರ ಪಾದಗಳನ್ನು ಗೌರವದಿಂದ ಸ್ಪರ್ಶಿಸುವ ಅಭ್ಯಾಸವಿದೆ. ನಾನು ನನ್ನ ಮನೆ ಕೆಲಸದವಳ ಪಾದವನ್ನು ಸ್ಪರ್ಶಿಸುತ್ತೇನೆ. ನಾನು ಎಲ್ಲರನ್ನೂ ಸಮಾನವಾಗಿ ನೋಡಲು ಇಷ್ಟಪಡುತ್ತೇನೆ. ಹಾಗೆ ಮಾಡಿದಾಗ ಒಬ್ಬ ವ್ಯಕ್ತಿಯಾಗಿ ನಾನು ಯಾರು ಎಂಬುದು ಗೊತ್ತಾಗುತ್ತದೆ” ಎಂದು ʼಬಜಾರ್ ಇಂಡಿಯಾʼ ಕ್ಕೆ ಹೇಳಿದ್ದಾರೆ.
ಇತ್ತೀಚೆಗಷ್ಟೇ ʼಮಿಷನ್ ಮಜ್ನುʼ ಚಿತ್ರದಲ್ಲಿ ಕಾಣಿಸಿಕೊಂಡ ರಶ್ಮಿಕಾ ರಣ್ಬೀರ್ ಕಪೂರ್ ಅವರ ʼಆ್ಯನಿಮಲ್ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ʼಪುಷ್ಪ-2ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು