ಬಾದಾಮಿಯಲ್ಲಿ ಸ್ಪರ್ಧೆಗೆ ಸಿದ್ದು ಹಿಂದೇಟು ಏಕೆ?


Team Udayavani, Mar 24, 2023, 6:53 AM IST

ಬಾದಾಮಿಯಲ್ಲಿ ಸ್ಪರ್ಧೆಗೆ ಸಿದ್ದು ಹಿಂದೇಟು ಏಕೆ?

ಬಾಗಲಕೋಟೆ: ಕ್ಷೇತ್ರ ಆಯ್ಕೆ ಗೊಂದಲದಲ್ಲಿರುವ ಸಿದ್ದರಾಮಯ್ಯ ಕೆಲವು ತಿಂಗಳ ಹಿಂದೆ ಬಾದಾಮಿಯಿಂದ ಓಡಾಡಲು ದೂರವಾಗುತ್ತದೆ, ಇಲ್ಲಿಂದ ಸ್ಪರ್ಧಿಸಲ್ಲ ಎಂದು ಬಹಿರಂಗವಾಗಿ ಹೇಳಿದ್ದರು. ಆದರೆ ಇದೀಗ ಪುನಃ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಗಂಭೀರ ಚರ್ಚೆ ನಡೆಸಿದಂತೆ ಕಾಣುತ್ತಿದೆ.

ಕೋಲಾರ ಕ್ಷೇತ್ರ ಆಯ್ಕೆ ಮಾಡಿಕೊಳ್ಳದಿರಲು ಸ್ವತಃ ರಾಹುಲ್‌ ಗಾಂಧಿ ಸೂಚನೆ ನೀಡಿದ ಬೆನ್ನಲ್ಲೇ ಬಾದಾಮಿಯಿಂದ ಸ್ಪರ್ಧಿಸಬೇಕೋ, ಬೇಡವೋ ಎಂಬ ಗೊಂದಲ ಮುಂದುವರಿದಿದೆ.

ಇನ್ನೊಂದೆಡೆ ಬಾದಾಮಿ ಯಿಂದಲೂ ಸ್ಪರ್ಧೆಗೆ ಮೀನಾಮೇಷ ಎಣಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಬಾದಾಮಿ ಕ್ಷೇತ್ರ ಬಿಟ್ಟು, ಕೋಲಾರದಿಂದ ಸ್ಪರ್ಧಿಸಬೇಕೆಂಬ ಆಲೋಚನೆ ಹಿಂದೆ ಬೇರೆಯೇ ಗುಟ್ಟಿದೆ ಎನ್ನಲಾಗಿದೆ. 2018ರಲ್ಲಿ ಈ ಕ್ಷೇತ್ರಕ್ಕೆ ಡಾ|ದೇವರಾಜ ಪಾಟೀಲ್‌ಗೆ ಟಿಕೆಟ್‌ ಘೋಷಣೆಯಾಗಿತ್ತು. ಬಳಿಕ ಸಿದ್ದರಾಮಯ್ಯ ಈ ಕ್ಷೇತ್ರಕ್ಕೆ ಬಂದಾಗ ಅವರು ತಮ್ಮ ನಾಯಕರ ಪರವಾಗಿ ಚುನಾವಣೆ ನಡೆಸಿದರು. ಅದೇ ಚಿಮ್ಮನಕಟ್ಟಿಗೆ ಟಿಕೆಟ್‌ ಘೋಷಿಸಿ, ಅವರನ್ನು ಹಿಂದೆ ಸರಿಸಿ ಸಿದ್ದರಾಮಯ್ಯ ಸ್ಪರ್ಧಿಸಿದ್ದರೆ ತೀವ್ರ ವಿರೋಧ ವ್ಯಕ್ತವಾಗುತ್ತಿತ್ತು. ಆದರೂ ಚಿಮ್ಮನಕಟ್ಟಿ ಬೆಂಬಲಿಗರು ಆಗ ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಡ ಕೂಡಾ ಹಾಕಿದ್ದರು.

ಪಕ್ಷದ ಹಿರಿಯರ ಸಂಧಾನ ಹಿನ್ನೆಲೆಯಲ್ಲಿ ಚಿಮ್ಮನಕಟ್ಟಿ ಕೂಡ ಕಣಕ್ಕಿಳಿಯದೆ ಸಿದ್ದರಾಮಯ್ಯ ಪರ ಚುನಾವಣೆ ಪ್ರಚಾರ ಮಾಡಿದ್ದರು. ಆಗ ಪಕ್ಷದ ಹಿರಿಯರ ಸಮ್ಮುಖ ದಲ್ಲಿ ನಡೆದ ಮಾತುಕತೆಯಲ್ಲಿ ಚಿಮ್ಮನಕಟ್ಟಿ ಗೆ ವಿಧಾನ ಪರಿಷತ್ತಿನ ಸದಸ್ಯತ್ವದ‌ ಭರವಸೆ ನೀಡಲಾಗಿತ್ತು. ಮುಂದೆ ಸರ್ಕಾರ ಬರಲಿಲ್ಲ. ಅವರನ್ನು ಎಂಎಲ್‌ಸಿ ಮಾಡಲಾ ಗಲಿಲ್ಲ. ಈ ಅಸಮಾಧಾನವನ್ನು ಸ್ವತಃ ಚಿಮ್ಮನಕಟ್ಟಿ ಬಹಿರಂಗವಾಗಿ ಹೇಳಿಕೊಂಡು ಕಣ್ಣೀರು ಹಾಕಿದ್ದರು. ಕ್ಷೇತ್ರ ಬಿಟ್ಟು ಕೊಟ್ಟ ನನಗೆ ಏನು ಮಾಡಿದಿರಿ ಎಂದು ನೇರವಾಗಿ ಸಿದ್ದರಾಮಯ್ಯ ಅವರನ್ನೇ ಪ್ರಶ್ನಿಸಿದ್ದರು. ಆ ವೇಳೆ ಚಿಮ್ಮನಕಟ್ಟಿ ಅವರ ಮನೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ 2023ರಲ್ಲಿ ನಿಮ್ಮ ಪುತ್ರನೇ ಈ ಕ್ಷೇತ್ರದಿಂದ ಸ್ಪರ್ಧಿಸಲಿ. ನಾವು ಅವರಿಗೆ ಸಹಕಾರ ಕೊಡುತ್ತೇವೆಂದು ಹೇಳಿದ್ದರು ಎನ್ನಲಾಗಿದೆ. ಚಿಮ್ಮನಕಟ್ಟಿ ಪುತ್ರನಿಗೆ ಮಾತು ಕೊಟ್ಟು ಈಗ ಮತ್ತೆ ಬಾದಾಮಿಯಿಂದ ಹೇಗೆ ಸ್ಪರ್ಧಿಸಲಿ ಎಂಬ ಅಳಕು ಸಿದ್ದರಾಮಯ್ಯರನ್ನು ಕಾಡುತ್ತಿದೆ.

ಇಂದು ನಿರ್ಧಾರ ಸಾಧ್ಯತೆ: ಇದೆಲ್ಲದರ ಮಧ್ಯೆ ಶುಕ್ರವಾರ ಬಾದಾಮಿಯಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿದ್ದು ಆಪ್ತ ಹೊಳಬಸು ಶೆಟ್ಟರ, ಬಾದಾಮಿ, ಗುಳೇದಗುಡ್ಡ ಬ್ಲಾಕ್‌ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿ ಹಳ್ಳಿ ಯಿಂದಲೂ ಜನರನ್ನು ಸೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಬೆಂಗಳೂರಿ ನವರೆಗೆ ತೆರಳಿ ಒತ್ತಾಯ ಮಾಡಿರುವ ಜನರು ಈ ಕಾರ್ಯಕ್ರಮ ವೇಳೆ ಪಟ್ಟು ಹಿಡಿಯಲಿದ್ದಾರೆ ಎನ್ನಲಾಗಿದೆ.

ಬಾದಾಮಿಯ ಎಪಿಎಂಸಿ ಆವರಣದಲ್ಲಿ ಸುಮಾರು 50 ಸಾವಿರ ಜನ ಸೇರಿಸಲು ತಯಾರಿ ನಡೆದಿದೆ. ಅಲ್ಲದೇ 1 ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಕೂಡ ನಡೆಯಲಿದೆ. ಇದು ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಶಾಸಕರಾಗಿ, ಬಹಿರಂಗ ಸಮಾವೇಶದಲ್ಲಿ ಕೊನೆಯ ಬಾರಿಗೆ ಭಾಗವಹಿಸಲಿದ್ದಾರೆ ಎಂದು ಬಿಂಬಿಸಲಾಗಿತ್ತು. ಆದರೆ ಯಾವಾಗ ರೋಡ್‌ ಶೋ ಏರ್ಪಡಿಸಲಾಗಿ ದೆಯೋ ಆಗ ಪುನಃ ಇಲ್ಲಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಾದಾಮಿ ಸೇಫ್‌
ಸಿದ್ದರಾಮಯ್ಯಗೆ ಈ ಬಾರಿ ಬಾದಾಮಿ ಕ್ಷೇತ್ರ ಅತ್ಯಂತ ಸೇಫ್‌ ಆಗಿದ್ದು, ಇಲ್ಲಿಂದಲೇ ಸ್ಪರ್ಧಿಸ ಬೇಕೆಂಬ ಒತ್ತಡ ಒಂದೆಡೆ ಇದೆ. ಅವರ ಪಕ್ಕಾ ಬೆಂಬಲಿಗರು ಹೆಲಿಕಾಪ್ಟರ್‌ ಕೊಡಿಸುವು ದಾಗಿ, ನೀವು ಕೇವಲ ನಾಮ ಪತ್ರ ಸಲ್ಲಿಸಿ ಹೋಗಿ ನಾವು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಮುಂದೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ, ಆಗ ಚಿಮ್ಮನಕಟ್ಟಿ ಕುಟುಂಬಕ್ಕೆ ರಾಜಕೀಯ ಅಧಿಕಾರ ಕೊಡುವ ಕುರಿತು ತೀರ್ಮಾನ ಮಾಡೋಣ, ಇದೊಂದು ಬಾರಿ ಇಲ್ಲಿಂದಲೇ ಸ್ಪರ್ಧಿಸಿ ನಿಮಗೆ ರಾಜಕೀಯ ಪುನರ್‌ ಜನ್ಮ ನೀಡಿದ ಕ್ಷೇತ್ರ, ಬಿಡಬೇಡಿ ಎಂದು ಒತ್ತಡ ಹೇರುತ್ತಿದ್ದರೂ ಸಿದ್ದರಾಮಯ್ಯ ಪೂರ್ಣ ಮನಸ್ಸು ಬಾದಾಮಿ ಕಡೆ ಇಲ್ಲ ಎಂದು ಹೇಳಲಾಗುತ್ತಿದೆ.

ವಿಪಕ್ಷದಲ್ಲಿದ್ದರೂ ಬಾದಾಮಿ ಕ್ಷೇತ್ರದ ಇತಿಹಾಸದಲ್ಲಿ ಆಗದ ಶಾಶ್ವತ ಯೋಜನೆಗಳು ಇಲ್ಲಿ ಆಗಿವೆ. ಪ್ರತಿ ಹಳ್ಳಿಗಳೂ, ಎಲ್ಲ ಸಮುದಾಯ ದವರಿಗೂ ಅವರು ಅನುದಾನ ಕಲ್ಪಿಸಿ ದ್ದಾರೆ. ಹೀಗಾಗಿ ಜನರು ಇದೊಂದು ಬಾರಿ ಇಲ್ಲಿಂದಲೇ ಸ್ಪರ್ಧಿಸಿ ಸಿಎಂ ಆಗಬೇಕೆಂದು ಬಯಸಿದ್ದಾರೆ.
– ಹೊಳಬಸು ಶೆಟ್ಟರ, ಕಾಂಗ್ರೆಸ್‌ ಮುಖಂಡ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.