ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ


Team Udayavani, Mar 24, 2023, 6:00 AM IST

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

2019ರ ಏ.13ರಂದು ಕರ್ನಾಟಕದ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ನೀಡಿದ್ದ ಅವಹೇಳನಕಾರಿ ಹೇಳಿಕೆಯ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಸೂರತ್‌ನ ಚೀಫ್ ಜ್ಯುಡಿಶಿಯಲ್‌ ಮ್ಯಾಜಿಸ್ಟೇಟ್‌ ನ್ಯಾಯಾಲಯ ರಾಹುಲ್‌ರನ್ನು ದೋಷಿ ಎಂದು ಘೋಷಿಸಿದೆ. ಅಲ್ಲದೆ ಈ ಸಂಬಂಧ ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ. ದಂಡವನ್ನು ವಿಧಿಸಿದೆ. ಇದೇ ವೇಳೆ ಶಿಕ್ಷೆಯ ಜಾರಿಯನ್ನು 30 ದಿನಗಳವರೆಗೆ ತಡೆ ಹಿಡಿದಿರುವ ನ್ಯಾಯಾಧೀಶರು ಅಲ್ಲಿಯವರೆಗೆ ರಾಹುಲ್‌ಗೆ ಜಾಮೀನು ಮಂಜೂರು ಮಾಡಿದ್ದು ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ್ದಾರೆ.

ಸೂರತ್‌ ನ್ಯಾಯಾಲಯದ ಈ ತೀರ್ಪು ಇದೀಗ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. ನಾಯಕರೊಬ್ಬರು ನೀಡಿದ ರಾಜಕೀಯ ಹೇಳಿಕೆಗೆ ನ್ಯಾಯಾಲಯ ಇಷ್ಟೊಂದು ಮಹತ್ವ ನೀಡಿರುವ ಕುರಿತಂತೆಯೂ ಜನಸಾಮಾನ್ಯನಿಂದ ಹಿಡಿದು ಕಾನೂನು ಪಂಡಿತರವರೆಗೂ ಚರ್ಚೆಗಳು ನಡೆಯತೊಡಗಿದೆ. ಇನ್ನು ರಾಜಕೀಯ ವಲಯದಲ್ಲಂತೂ ಈ ತೀರ್ಪು ಬಿರುಗಾಳಿಯನ್ನೇ ಎಬ್ಬಿಸಿದೆ. ಕಾಂಗ್ರೆಸ್‌ ಅಂತೂ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಹರಿಹಾಯ್ದಿದೆ. ವಿಪಕ್ಷಗಳನ್ನು ಹಣಿಯಲು ಬಿಜೆಪಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟ ಬಳಿಕ ಈಗ ನ್ಯಾಯಾಲಯದಲ್ಲಿ ಅನವಶ್ಯಕ ಎಫ್ಐಆರ್‌ಗಳನ್ನು ದಾಖಲಿಸಿ ವಿಪಕ್ಷ ನಾಯಕರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಮಾತ್ರವಲ್ಲದೆ ಈ ಪ್ರಕರಣಗಳ ವಿಚಾರಣೆಗಳಲ್ಲೂ ಹಸ್ತಕ್ಷೇಪ ನಡೆಸುತ್ತಿದೆ ಎಂದು ಕಾಂಗ್ರೆಸ್‌ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಬಿಜೆಪಿ ಮಾತ್ರ ಈ ಎಲ್ಲ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು ತನ್ನ ನಾಯಕನಿಗೆ ಶಿಕ್ಷೆ ವಿಧಿಸಿದ್ದನ್ನು ಸಹಿಸಿಕೊಳ್ಳಲಾಗದೆ ಕಾಂಗ್ರೆಸ್‌, ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ರಾಹುಲ್‌ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ತಮ್ಮ ನಾಲಗೆಯನ್ನು ಹರಿಯಬಿಡುವ ಮೂಲಕ ತೀರಾ ಬಾಲಿಶವಾಗಿ ವರ್ತಿಸುತ್ತಲೇ ಬಂದಿದ್ದು ಇದಕ್ಕೆ ಸೂಕ್ತ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ ಎಂದು ಪ್ರತಿಪಾದಿಸಿದೆ.

ಮುಂದಿನ ದಿನಗಳಲ್ಲಿ ಈ ತೀರ್ಪಿನ ವಿರುದ್ಧ ರಾಹುಲ್‌ ಗಾಂಧಿ ಸಲ್ಲಿಸಲಿರುವ ಮೇಲ್ಮನವಿಯ ವಿಚಾರಣೆ ನಡೆಸುವ ಉನ್ನತ ನ್ಯಾಯಾಲಯಗಳೂ ಈ ತೀರ್ಪನ್ನು ಎತ್ತಿಹಿಡಿದಲ್ಲಿ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದಾಗಲಿದೆ ಮಾತ್ರವಲ್ಲದೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಬಳಿಕದ ಆರು ವರ್ಷಗಳ ಕಾಲ ಅವರು ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಇವೆಲ್ಲವನ್ನು ಮುಂದಿನ ಕಾನೂನು ಹೋರಾಟದ ಫ‌ಲಿತಾಂಶ ನಿರ್ಧರಿಸಲಿವೆ.

ಇವೆಲ್ಲವನ್ನು ಒಂದಿಷ್ಟು ಪಕ್ಕಕ್ಕಿಟ್ಟು ನೋಡಿದಾಗ ಇಡೀ ಪ್ರಕರಣ ಮತ್ತು ನ್ಯಾಯಾಲಯ ನೀಡಿದ ತೀರ್ಪು ಎಲ್ಲ ಪಕ್ಷಗಳ ನಾಯಕರಿಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದು. ರಾಹುಲ್‌ ಗಾಂಧಿ ಅವರ ಮಟ್ಟಿಗಂತೂ ಈ ತೀರ್ಪು ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾದುದಾಗಿದೆ.

ಈ ತೀರ್ಪನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿದ್ದೇ ಆದಲ್ಲಿ ರಾಜಕೀಯ ನಾಯಕರೆಲ್ಲರಿಗೂ ಇದೊಂದು ಚಾಟಿ ಏಟು. ನಾಯಕನಾದವ ತನ್ನ ಮಾತು, ಕೃತಿ, ವರ್ತನೆಗಳಲ್ಲಿ ಎಷ್ಟೊಂದು ಜಾಗರೂಕನಾಗಿರಬೇಕು ಎಂಬುದನ್ನು ಇದು ಬೆಟ್ಟು ಮಾಡಿ ತೋರಿಸಿದೆ. ಉನ್ನತ ಸ್ಥಾನದಲ್ಲಿರುವ ನಾಯಕನಿಂದ ಹಿಡಿದು ತಳಹಂತದ ನಾಯಕನಾದವನಿಗೂ ಈ ತೀರ್ಪು ಅನ್ವಯವಾಗುತ್ತದೆ. ಸೂರತ್‌ ನ್ಯಾಯಾಧೀಶರು ನೀಡಿರುವ ತೀರ್ಪು, ಉಲ್ಲೇಖೀಸಿರುವ ಅಂಶಗಳು ಪಕ್ಷಾತೀತವಾಗಿ ಪ್ರತಿಯೊಬ್ಬ ನಾಯಕನ ಹೊಣೆಗಾರಿಕೆಯನ್ನು ನೆನಪಿಸಿಕೊಟ್ಟಿದೆ.

ರಾಜಕೀಯ ನಾಯಕರು ತಮ್ಮ ನಾಲಗೆಯನ್ನು ಹರಿಯ ಬಿಡುವುದಕ್ಕೂ ಎಚ್ಚರ ವಹಿಸುವುದು ಅತ್ಯಗತ್ಯ ಎಂಬುದನ್ನು ಮತ್ತೂಮ್ಮೆ ನೆನಪಿಸಿಕೊಟ್ಟಿದೆ. ಅದೆಷ್ಟೇ ಉನ್ನತ, ಜನಪ್ರಿಯ ನಾಯಕನಾಗಿರಲಿ; ಆರೋಪ, ಟೀಕೆ, ವ್ಯಂಗ್ಯ, ವಿಡಂಬನೆಯ ಮಾತು ಬಂದಾಗ ಇವೆಲ್ಲವೂ ತಮ್ಮ ಇತಿಮಿತಿ, ಚೌಕಟ್ಟಿನ ಪರಿಧಿಯೊಳಗೆ ಇದ್ದರೆ ಮಾತ್ರ ಸೊಗಸು. ಇಲ್ಲವಾದಲ್ಲಿ ಆ ನಾಯಕನ ಸಾಧನೆ, ವರ್ಚಸ್ಸು, ಜನಪ್ರಿಯತೆ ಎಲ್ಲವೂ ನೀರ ಮೇಲಿಟ್ಟ ಹೋಮದಂತೆಯೇ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.