ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…


Team Udayavani, Mar 24, 2023, 5:30 PM IST

Dark-circle

ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ ಡಾರ್ಕ್ ಸರ್ಕಲ್‌. ಇದು ನಿಮ್ಮ ಮುಖದ ಸೌಂದರ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ನಿದ್ರೆ ಕೊರತೆಯಿಂದಾಗಿ ಡಾರ್ಕ್‌ ಸರ್ಕಲ್ಸ್‌ ಕಾಣಿಸಿಕೊಳ್ಳುತ್ತವೆ ಎಂದು ಸಾಮಾನ್ಯವಾಗಿ ಭಾವಿಸಲಾಗುತ್ತದೆ. ಕಣ್ಣಿನ ಕೆಳವಲಯದಲ್ಲಿ ಮುಖದ ಬಣ್ಣಕ್ಕಿಂತ ಸ್ವಲ್ಪ ಹೆಚ್ಚು‌ ಪ್ರಮಾಣದಲ್ಲಿ ಕಪ್ಪಗಾಗುವ ಭಾಗಕ್ಕೆ ಡಾರ್ಕ್‌ ಸರ್ಕಲ್ಸ್‌ ಎನ್ನುತ್ತಾರೆ. ನಿದ್ರಾಹೀನತೆಯೂ ಇದಕ್ಕೆ ಒಂದು ಕಾರಣ ಆಗಿರಬಹುದು. ಅದರೊಂದಿಗೆ ಅತಿಯಾದ ಒತ್ತಡ ಅತಿಯಾಗಿ ಡಿಜಿಟಲ್‌ ಸಾಧನಗಳನ್ನು ಬಳಸುವುದು, ವಿಟಮಿನ್‌ ಕೊರತೆ, ಅನುವಂಶೀಯತೆ ಈ ಎಲ್ಲಾ ಕಾರಣಗಳಿಂದ ಕಣ್ಣಿನ ಕೆಳಗೆ ಕಪ್ಪಾಗಬಹುದು. ಚರ್ಮದಲ್ಲಿ ಮೆಲನಿನ್‌ ಅಂಶ ಕಡಿಮೆ ಇರುವವರು ಬೇರೆಯವರಿಗಿಂತ ಹೆಚ್ಚು ಈ ಸಮಸ್ಯೆ ಎದುರಿಸುತ್ತಾರೆ.

ಸೌತೆಕಾಯಿ:

ಸೌತೆಕಾಯಿಯಲ್ಲಿ ಚರ್ಮದ ಹೊಳಪು ಹೆಚ್ಚಿಸುವ ಗುಣ ಇರುವ ಕಾರಣ ಇದು ನೈಸರ್ಗಿಕವಾಗಿ ಕಣ್ಣಿನ ಸುತ್ತಲಿನ ಕಪ್ಪನ್ನು ತಿಳಿಗೊಳಿಸುತ್ತದೆ. ದಣಿದ ಕಣ್ಣುಗಳ ಒತ್ತಡ ಮತ್ತು ಆಯಾಸವನ್ನು ನಿವಾರಿಸುತ್ತದೆ. ತಂಪಾದ ಸೌತೆಕಾಯಿಯ ದಪ್ಪ ಹೋಳುಗಳನ್ನು ಕತ್ತರಿಸಿ ಕನಿಷ್ಠ ಅರ್ಧ ಗಂಟೆ ಕಣ್ಣುಗಳ ಮೇಲೆ ಇಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ತೊಳೆಯಿರಿ.

ಹಾಲು:

ಹತ್ತಿ ಉಂಡೆಯನ್ನು ಸಾಮಾನ್ಯ ಹಾಲಿನಲ್ಲಿ ಸ್ವಲ್ಪ ಸಮಯ ನೆನೆಸಿಟ್ಟು ಹತ್ತಿಯನ್ನು ಡಾರ್ಕ್ ಸರ್ಕಲ್‌ಗಳ ಮೇಲೆ ಇಟ್ಟುಕೊಳ್ಳಿ. ಕನಿಷ್ಠ 10 ನಿಮಿಷಗಳ ಕಾಲ ಅವುಗಳನ್ನು ಹಾಗೆಯೇ ಬಿಡಿ. ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ.

ರೋಸ್ ವಾಟರ್:

ರೋಸ್‌ ವಾಟರ್‌ನಲ್ಲಿ ಚರ್ಮವನ್ನು ಪುರ್ನಚೈತನ್ಯಗೊಳಿಸುವ ಗುಣವಿದೆ. ಹತ್ತಿ ಉಂಡೆಯನ್ನು ರೋಸ್ ವಾಟರ್‌ನಲ್ಲಿ ನೆನೆಸಿ. ಇದನ್ನು ಕಣ್ಣಿನ ಸುತ್ತ ಹಚ್ಚಿ ಮತ್ತು ಕನಿಷ್ಠ 20 ನಿಮಿಷಗಳ ಕಾಲ ಹಾಗೆಯೇ ಬಿಡಿ. ರೋಸ್ ವಾಟರ್ ಕಣ್ಣಿಗೆ ಮುದ ನೀಡುತ್ತದೆ.

ಗ್ರೀನ್ ಟೀ ಬ್ಯಾಗ್‌ಗಳು:

ಗ್ರೀನ್ ಟೀ ಬ್ಯಾಗ್‌ಗಳನ್ನು ನೀರಿನಲ್ಲಿ ಅದ್ದಿ 30 ನಿಮಿಷಗಳ ಕಾಲ ಫ್ರಿಜ್‌ನಲ್ಲಿಡಿ. ನಿಮ್ಮ ಕಣ್ಣುಗಳ ಮೇಲೆ ಟೀ ಬ್ಯಾಗ್‌ಗಳನ್ನು ಇರಿಸಿ ಮತ್ತು ಅವುಗಳನ್ನು 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ನಿಮ್ಮ ಕಣ್ಣುಗಳನ್ನು ತೊಳೆಯಿರಿ.

ಬಾದಾಮಿ ಎಣ್ಣೆ:

ಒಂದು ಚಮಚ ಬಾದಾಮಿ ಎಣ್ಣೆಯನ್ನು ರಾತ್ರಿ ಮಲಗುವ ಮೊದಲು  ಕಣ್ಣುಗಳ ಸುತ್ತಲೂ ಹಚ್ಚಿ. ರಾತ್ರಿಯಿಡೀ ಹಾಗೆಯೇ ಬಿಡಿ. ಮರುದಿನ ಬೆಳಿಗ್ಗೆ ಮುಖ ತೊಳೆಯಿರಿ.

ಜೇನುತುಪ್ಪ:

ಜೇನುತುಪ್ಪವನ್ನು ಹತ್ತಿ ಉಣ್ಣೆಯಲ್ಲಿ ನೆನೆಸಿ. ಬಳಿಕ ಅದನ್ನು ಡಾರ್ಕ್ ಸರ್ಕಲ್ ಇರುವ ಜಾಗದಲ್ಲಿ ಹಚ್ಚಿ. ನಂತರ ಕೈಗಳಿಂದ ಮಸಾಜ್ ಮಾಡಿರಿ. 20 ನಿಮಿಷಗಳ ನಂತರ ಮುಖವನ್ನು ನೀರಿನಿಂದ ತೊಳೆಯಿರಿ.

ಉತ್ತಮ ನಿದ್ದೆ:

ಕನಿಷ್ಠ 8 ಗಂಟೆ ನಿದ್ದೆ ಅಗತ್ಯ. ಸಾಕಷ್ಟು ನಿದ್ದೆಯಿಂದ ಕಣ್ಣುಗಳ ಮೇಲೆ ಒತ್ತಡ ಕಡಿಮೆಯಾಗುತ್ತದೆ ಮತ್ತು ಡಾರ್ಕ್ ಸರ್ಕಲ್ ಗಳು ಕೂಡ ಕಡಿಮೆಯಾಗಿ ಕಾಣುವಂತೆ ಮಾಡುತ್ತದೆ.

ಆಹಾರ:

ವಿಟಮಿನ್ ಸಿ ಸಮೃದ್ಧ ಆಹಾರವನ್ನು ಹೆಚ್ಚಾಗಿ ಬಳಸಿ. ತರಕಾರಿಗಳಾದ ಪಪ್ಪಾಯಿ, ಕ್ಯಾರೆಟ್, ದಾಳಿಂಬೆ, ಕಿತ್ತಳೆ ಮುಂತಾದ ಹಣ್ಣುಗಳಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ಆಂತಿಗಳಿದ್ಟಿದು, ಇದು ಆರೋಗ್ಯಕರ ಮತ್ತು ಕಾಂತಿಯುತ ಚರ್ಮಕ್ಕೆ ಅಗತ್ಯ.

ರಾತ್ರಿ ಮಲಗುವ ಮುನ್ನ ಮುಖ ತೊಳೆದು ಮೇಕಪ್ ಸ್ವಚ್ಛಗೊಳಿಸಬೇಕು. ಮೇಕಪ್ ಉತ್ಪನ್ನಗಳಿಂದ ಅಲರ್ಜಿ ಮತ್ತು ಕಣ್ಣಿನ ಕೆಳಭಾಗದ ಕಪ್ಪಗಾಗುವ ಸಾಧ್ಯತೆಗಳಿಗೆ.  ವಾರಕ್ಕೆರಡು ಬಾರಿ ಇವುಗಳನ್ನು ಬಳಸಿ ಉತ್ತಮ ಫಲಿತಾಂಶ ಪಡೆಯಿರಿ.

*ಕಾವ್ಯಶ್ರೀ

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.