ಬಿಜೆಪಿ ಮುಖಂಡನಿಗೆ ಸೇರಿದ 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಸಾಮಗ್ರಿಗಳ ವಶ
ಹನೂರಿನಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ
Team Udayavani, Mar 24, 2023, 3:43 PM IST
ಹನೂರು : ಪಟ್ಟಣದಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು ಬಿಜೆಪಿ ಮುಖಂಡ ನಿಶಾಂತ್ ಗೆ ಸೇರಿದ್ದ 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಹುನೂರು ಪಟ್ಟಣದ ಮೈಸೂರು ಮಾರಮ್ಮನ ಗುಡಿ ದೇವಾಲಯದ ಬಿದಿಯಲ್ಲಿ ಅಂಗಡಿ ಮಳಿಗೆ ಒಂದನ್ನು ಪಡೆದಿದ್ದ ಬಿಜೆಪಿ ಮುಖಂಡ ನಿಶಾಂತ್ ಚುನಾವಣಾ ಸಮಯದಲ್ಲಿ ಹಂಚಿಕೆಗಾಗಿ ಹಲವು ಸಾಮಗ್ರಿಗಳನ್ನು ಸಂಗ್ರಹಿಸಿದ್ದಾರೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿ ನವೀನ್ ಮಠದ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ. ದಾಳಿ ವೇಳೆ 1,710 ಜೊತೆ ಶಾಲಾ ಮಕ್ಕಳ ಶೂಗಳು, 610 ಶಾಲಾ ಬ್ಯಾಗ್ ಗಳು, ಎರಡು ಚೀಲದಲ್ಲಿ ಕೆಂಪು ಬಣ್ಣದ ಟವಲ್ ಗಳು ಮತ್ತು 15 ಬೆಡ್ ಶೀಟ್ ಗಳು ದೊರೆತಿದೆ.
ಈ ಸಂಬಂಧ ಕಟ್ಟಡದ ಮಾಲೀಕರಿಂದ ಅಗತ್ಯ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ಸಾಮಗ್ರಿಗಳನ್ನು ವಶಪಡಿಸಿಕೊಂಡು ಹನೂರು ಪೊಲೀಸರ ವಶಕ್ಕೆ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್