ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಮಾಡಿದ್ದುಣ್ಣೋ ಮಹರಾಯ ಎಂಬಂತಾಗಿದೆ ರಾಹುಲ್ ಸ್ಥಿತಿ; 2013ರಲ್ಲಿ ಆಗಿದ್ದೇನು?

Team Udayavani, Mar 24, 2023, 4:21 PM IST

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಹೊಸದಿಲ್ಲಿ: 2019ರಲ್ಲಿ ಕರ್ನಾಟಕದಲ್ಲಿ ಭಾಷಣ ಮಾಡುವ ವೇಳೆ ನೀಡಿದ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ಕೋರ್ಟ್ ದೋಷಿ ಎಂದು ತೀರ್ಪು ನೀಡಿದ್ದು, ಎರಡು ವರ್ಷ ಶಿಕ್ಷೆ ವಿಧಿಸಿದೆ. ಹೀಗಾಗಿ 2013ರ ಸುಪ್ರೀಂ ಕೋರ್ಟ್ ಆದೇಶದಂತೆ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹವಾಗಿದೆ.

ನಿಗದಿತ ಪ್ರಕರಣದಲ್ಲಿ ಎರಡು ವರ್ಷವರೆಗೆ ಶಿಕ್ಷೆಗೆ ಗುರಿಯಾದ ಸಂಸತ್‌ ಸದಸ್ಯರು (ಲೋಕಸಭೆ ಮತ್ತು ರಾಜ್ಯಸಭೆ) ಶಾಸಕರು (ವಿಧಾನಸಭೆ ಮತ್ತು ವಿಧಾನ ಪರಿಷತ್‌) ಕೂಡಲೇ ತಾವು ಹೊಂದಿರುವ ಸದನದ ಸದಸ್ಯತ್ವದಿಂದ ಅನರ್ಹಗೊಳ್ಳುತ್ತಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಕಾರಣಿಗಳನ್ನು ಅನರ್ಹಗೊಳಿಸುವ ಕುರಿತು 2013 ರ ಆದೇಶವನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದಾಗ, ಯುಪಿಎ ಸರ್ಕಾರವು ಶಿಕ್ಷೆಗೊಳಗಾದ ಸಂಸದರು ಮತ್ತು ಶಾಸಕರು ಶಿಕ್ಷೆಯ ನಂತರ ಮೂರು ತಿಂಗಳವರೆಗೆ ಸದನದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸುಗ್ರೀವಾಜ್ಞೆಯನ್ನು ಸೂಚಿಸಿತ್ತು. ಆ ಅವಧಿಯಲ್ಲಿ, ಅವರು ತಮ್ಮ ದೋಷಾರೋಪಣೆಗೆ ತಡೆಯಾಜ್ಞೆಗಾಗಿ ಉನ್ನತ ನ್ಯಾಯಾಲಯಗಳಿಗೆ ಮೇಲ್ಮನವಿ ಸಲ್ಲಿಸಬಹುದು ಮತ್ತು ಸದನದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಬಹುದು ಎಂಬ ಅಂಶವನ್ನಿರಿಸಿ ಸುಗ್ರಿವಾಜ್ಞೆಗೆ ಸಿದ್ದತೆ ನಡೆಸಿತ್ತು.

ಇದನ್ನೂ ಓದಿ:ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಆದರೆ, ರಾಹುಲ್ ಗಾಂಧಿ ಯುಪಿಎ ಸರ್ಕಾರದ ಈ ಸುಗ್ರೀವಾಜ್ಞೆಯನ್ನು ಬಲವಾಗಿ ವಿರೋಧಿಸಿದ್ದರು. ಆಗ ಅಮೇಠಿ ಕ್ಷೇತ್ರದ ಸಂಸದರಾಗಿದ್ದ ರಾಹುಲ್‌ ಗಾಂಧಿಯವರು, ಕಾಂಗ್ರೆಸ್‌ ಮುಖಂಡ ಅಜಯ ಮಕೇನ್‌ ಉಪಸ್ಥಿತಿಯಲ್ಲಿ ನಡೆಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸುಗ್ರೀವಾಜ್ಞೆಯ ಪ್ರತಿಯನ್ನೇ ಹರಿದು ಎಸೆದಿದ್ದರು. ಸೆ.27ರಂದು ಈ ಘಟನೆ ನಡೆದಿತ್ತು. ಅಂತಿಮವಾಗಿ ಅ.2ರಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನೇ ವಾಪಸ್‌ ಪಡೆದಿತ್ತು. ಇದೀಗ ರಾಹುಲ್‌ ಗಾಂಧಿಯವರಿಗೆ ತಕ್ಷಣದಿಂದ ಅನ್ವಯವಾಗುವಂತೆ ಅನರ್ಹಗೊಂಡಿದ್ದಾರೆ. ಒಂದು ವೇಳೆ ಅಂದು ರಾಹುಲ್ ಪ್ರತಿ ಹರಿಯದೆ ವಿರೋಧ ಮಾಡದೆ ಇದ್ದರೆ, ಸುಗ್ರಿವಾಜ್ಞೆ ಜಾರಿಯಾಗಿ ರಾಹುಲ್ ಗೆ ಮೂರು ತಿಂಗಳ ಅವಕಾಶ ಸಿಗುತ್ತಿತ್ತು.

ಇದೀಗ ರಾಹುಲ್ ಗಾಂಧಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅವಕಾಶವನ್ನೂ ಕಳೆದುಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.