ಶಾಲೆಯಲ್ಲಿ ದುಷ್ಕರ್ಮಿಗಳಿಂದ ಮೋಜು ಮಸ್ತಿ
Team Udayavani, Mar 25, 2023, 5:06 AM IST
ಮಡಿಕೇರಿ: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಜ್ಞಾನ ದೇಗುಲವನ್ನೇ ಬಿಡದ ದುಷ್ಕರ್ಮಿಗಳು ಶಾಲೆಯ ಬೀಗ ಹೊಡೆದು ಒಳ ನುಗ್ಗಿದಲ್ಲದೆ ಮೋಜು ಮಸ್ತಿ ಮಾಡಿ ಅನೈತಿಕ ಚಟುವಟಿಕೆ ನಡೆಸಿ ಪರಾರಿಯಾಗಿರುವ ಘಟನೆ ನಾಪೋಕ್ಲುವಿನಲ್ಲಿ ಬೆಳಕಿಗೆ ಬಂದಿದೆ.
ನಾಪೋಕ್ಲು ಹಳೇತಾಲೂಕು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರಾಥಮಿಕ ಪಬ್ಲಿಕ್ ಶಾಲೆಯ ಕೊಠಡಿಯ ಬೀಗ ಹೊಡೆದು ಒಳನುಗ್ಗಿದ ಕಿಡಿಗೇಡಿಗಳು ಅನೈತಿಕ ಚಟುವಟಿಕೆ ನಡೆಸಿದ ಕುರುಹುಗಳು ಪತ್ತೆಯಾಗಿವೆ.
ಬುಧವಾರ ರಾತ್ರಿ ಕೃತ್ಯ ನಡೆದಿರಬಹುದು ಎನ್ನಲಾಗಿದ್ದು, ಗುರುವಾರ ಬೆಳಗ್ಗೆ ಮಕ್ಕಳು ಶಾಲೆಗೆ ಬಂದಾಗ ಶಾಲೆಯ ಒಳಾಂಗಣದ ಕೊಠಡಿಯ ಬೀಗ ಹೊಡೆದಿರುವುದು ಗೋಚರಿಸಿದೆ. ಈ ಬಗ್ಗೆ ಮಕ್ಕಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಶಿಕ್ಷಕರು ಪರಿಶೀಲಿಸಿದಾಗ ಶಾಲೆಯ ಮೇಲ್ಚಾವಣಿಯಲ್ಲಿ ಮಹಿಳೆ ಮತ್ತು ಗಂಡಸರ ಬಟ್ಟೆಗಳು ಹಾಗೂ ಧೂಮಪಾನ ಮಾಡಿ ಬಿಸಾಡಿದ ಸಿಗರೇಟ್ ತುಂಡುಗಳು ಪತ್ತೆಯಾಗಿವೆ.
ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಹಿನ್ನಲೆ ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು