ಗುಣಮಟ್ಟದ ಹಾಲು ಪೂರೈಕೆಯಿಂದ ಒಕ್ಕೂಟದ ಪ್ರಗತಿ


Team Udayavani, Mar 25, 2023, 3:01 PM IST

tdy-16

ಚಾಮರಾಜನಗರ: ಗುಣಮಟ್ಟದ ಹಾಲು ಪೂರೈಕೆ ಮಾಡಿ, ಡೇರಿ ಹಾಗೂ ಒಕ್ಕೂಟದ ಪ್ರಗತಿಗೆ ಹಾಲು ಉತ್ಪಾದಕರ ರೈತರು ಸಹಕರಿಸಿ, ಹೆಚ್ಚಿನ ಲಾಭ ವನ್ನು ಪಡೆದುಕೊಳ್ಳಬೇಕು ಎಂದು ಚಾಮುಲ್‌ ಅಧ್ಯಕ್ಷ ವೈ.ಸಿ. ನಾಗೇಂದ್ರ ಹೇಳಿದರು.

ತಾಲೂಕಿನ ಬಂದಿಗೌಡನಹಳ್ಳಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹೈನುಗಾರಿಕೆ ಪ್ರಮುಖ ಉದ್ಯಮವಾಗಿದೆ. ಬೇಸಾಯದ ಜೊತೆಗೆ ಹೈನುಗಾರಿಕೆ ಹೆಚ್ಚಿನ ಪ್ರಾಮುಖ್ಯತೆ ಹಾಗು ವೈಜ್ಞಾನಿಕವಾಗಿ ಹಸು ಸಾಕಾಣಿಕೆ ಮಾಡುವುದನ್ನು ಹೈನುಗಾರರು ಅಳವಡಿಸಿಕೊಳ್ಳಬೇಕು. ಹಸು ಎರಡು ಹೊತ್ತು ಹಾಲು ಕೊಡುವ ಜೊತೆಗೆ ನಮ್ಮ ಜೀವನಾಡಿಯಾಗಿದೆ ಎಂದರು.

ಇನ್ನೂ ಹೆಚ್ಚಿನ ಹಾಲು ಪೂರೈಸಿ: ಹಸುವನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ತರಬೇತಿ ಯನ್ನು ರೈತರು ಪಡೆದುಕೊಳ್ಳಬೇಕು. ಒಕ್ಕೂಟ ಹಾಗೂ ಡೇರಿಯಿಂದ ಇಂಥ ತರಬೇತಿಗಳನ್ನು ಆಯೋಜನೆ ಮಾಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ಒಕ್ಕೂಟದ ಯೋಜನೆಗಳನ್ನು ಸದ್ಬಳಕೆ ಮಾಡಿ ಕೊಂಡು ಇನ್ನೂ ಹೆಚ್ಚಿನ ಹಾಲು ಪೂರೈಕೆ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ರೈತರಿಗೆ 10 ದಿನಕ್ಕೊಮ್ಮೆ ಹಣ: ಚಾಮುಲ್‌ ನಿರ್ದೇಶಕ ಎಚ್‌.ಎಸ್‌. ಬಸವರಾಜು ಮಾತನಾಡಿ, ರೈತರು ಹೈನುಗಾರಿಕೆಯಿಂದ ಹೆಚ್ಚಿನ ಲಾಭ ಕಾಣಲು ಸಾಧ್ಯವಿದೆ. ಇದನ್ನರಿತು ಅಂದು ಸಹಕಾರ ಸಚಿವರಾಗಿದ್ದ ದಿ. ಮಹದೇವಪ್ರಸಾದ್‌ ಅವರು ಮೈಸೂರಿನಿಂದ ಒಕ್ಕೂಟವನ್ನು ಪ್ರತ್ಯೇಕಗೊಳಿಸಿ ಚಾ.ನಗರ ಹಾಲು ಒಕ್ಕೂಟ ರಚನೆ ಮಾಡಿ, ಹೆಚ್ಚಿನ ಹಾಲು ಸಂಗ್ರಹವಾಗುತ್ತಿದ್ದ ಒಕ್ಕೂಟವನ್ನು ಉಳಿಸಲು ಟೆಟ್ರಾ ಪ್ಯಾಕೆಟ್‌ ಯೂನಿಟ್‌ ಆರಂಭಿಸಿದರು. ಆದರ ಫ‌ಲವಾಗಿ ಇಂದು ಡೇರಿ ಪ್ರಗತಿಯತ್ತ ಸಾಗುತ್ತಿದೆ. ರೈತರಿಗೆ 10 ದಿನಕ್ಕೊಮ್ಮೆ ಹಣ ನೀಡಲು ಸಾಧ್ಯವಾಗುತ್ತಿದೆ. ಕುದೇರಿನಲ್ಲಿ ಸುಸಜ್ಜಿತ ಒಕ್ಕೂಟ ನಿರ್ಮಾಣವಾಗಿದೆ. ನೀವು ನೀಡುವ ಹಾಲು ಯಾವ ರೂಪದಲ್ಲಿ ಎಲ್ಲಿಗೆ ಹೋಗುತ್ತದೆ ಎಂಬುದನ್ನು ತಿಳಿಯಲು ಒಮ್ಮೆ ಒಕ್ಕೂಟಕ್ಕೆ ಭೇಟಿ ನೀಡಿ, ಅಲ್ಲಿನ ಘಟಕವನ್ನು ವೀಕ್ಷಣೆ ಮಾಡಿ, ನಿಮಗೂ ಪ್ರೇರಣೆಯಾಗುತ್ತದೆ ಎಂದರು.

ಮಾದರಿ ಸಂಘವನ್ನಾಗಿ ಮಾಡಲು ಶ್ರಮಿಸಿ: ಬಂದಿಗೌಡನಹಳ್ಳಿ ಕಾಲೋನಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ. ರವಿಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಸಂಘ ಸ್ಥಾಪನೆಗೆ ಅನೇಕರ ಶ್ರಮ ಕಾರಣವಾಗಿದೆ. ಈ ಹಿಂದೆ ಬಿಸಲವಾಡಿಯಲ್ಲಿದ್ದ ಡೇರಿಗೆ ಈ ಭಾಗದ ರೈತರು ಹಾಲು ಸರಬರಾಜು ಮಾಡುತ್ತಿದ್ದರು. ನಂತರ ಬಂದಿಗೌಡನಹಳ್ಳಿಯಲ್ಲಿ ಡೇರಿಯನ್ನು ಆರಂಭಿಸಲಾಯಿತು. ಇದಾದ ಬಳಿಕ ಕಾಲೋನಿ ಯಲ್ಲಿರುವ ರೈತರು ಐದಾರು ಕಿ.ಮೀ. ದೂರದಲ್ಲಿ ರುವ ಬಂದಿಗೌಡನಹಳ್ಳಿ, ಬೊಮ್ಮನಹಳ್ಳಿ, ಬಿಸಲ ವಾಡಿಗಳಿಗೆ ಹೋಗಬೇಕಾಗಿತ್ತು. ಬಂದಿಗೌಡ ನಹಳ್ಳಿ ಕಾಲೋನಿಯಲ್ಲಿಯು ಸಹ 2006ರಲ್ಲಿ ಡೇರಿಯನ್ನು ಸ್ಥಾಪನೆ ಮಾಡಿ, ಈಗ ಸ್ವಂತ ಕಟ್ಟಡವನ್ನು ಹೊಂದಿದೆ. 100ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಇನ್ನೂ ಹೆಚ್ಚಿನ ಹಾಲು ಸರಬರಾಜು ಮಾಡುವ ಮೂಲಕ ಮಾದರಿ ಸಂಘವನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದರು. ಡೇರಿ ಕಟ್ಟಡ ನಿರ್ಮಾಣಕ್ಕೆ ಸಂಘದಲ್ಲಿ ಕೇವಲ 1.50 ಲಕ್ಷ ರೂ. ಹಣ ಇತ್ತು. ಕ್ಷೇತ್ರದ ಶಾಸಕರು 5 ಲಕ್ಷ ರೂ. ವಿಧಾನ ಪರಿಷತ್‌ ಸದಸ್ಯರು 5 ಲಕ್ಷ ರೂ. ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 75 ಸಾವಿರ ರೂ.ಗಳನ್ನು ನೀಡಿದೆ. ಹಿಂದಿನ ಚಾಮುಲ್‌ ನಿರ್ದೇಶಕರು ಅನುದಾನ ನೀಡಿದ್ದಾರೆ ಎಂದರು.

ಚಾಮುಲ್‌ ನಿರ್ದೇಶಕರಾದ ಸದಾಶಿವ ಮೂರ್ತಿ, ಶೀಲಾ, ವ್ಯವಸ್ಥಾಪಕ ನಿರ್ದೇಶಕ ರಾಜಶೇಖರಮೂರ್ತಿ, ಪ್ರಧಾನ ವ್ಯವಸ್ಥಾಪಕ ಕೆ. ರಾಜಕುಮಾರ್‌, ಸಹಾಯಕ ವ್ಯವಸ್ಥಾಪಕ ಡಾ. ಎಸ್‌. ಅಮರ್‌, ಸಮಾಲೋಚಕ ನಂಜುಂಡಸ್ವಾಮಿ, ಬಿಸಲವಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ ಈಶ್ವರ್‌, ಉಪಾಧ್ಯಕ್ಷ ಗುರುಸ್ವಾಮಿ, ಸದಸ್ಯರಾದ ಮಲ್ಲೇಶ್‌, ಮಣಿ ಬಿಜಿ ಕಾಲೋನಿ, ಜ್ಯೋತಿ, ಡೇರಿ ಉಪಾಧ್ಯಕ್ಷೆ ಮಹಾಲಕ್ಷ್ಮಿ, ನಿರ್ದೇಶಕರಾದ ಮಹದೇವಸ್ವಾಮಿ, ಬಸವರಾಜು, ಎಂ. ಬಸವಣ್ಣ, ಶಿವಮಲ್ಲಪ್ಪ, ಚನ್ನಬಸಪ್ಪ, ಚಿನ್ನಮ್ಮ, ಕೆಂದೇವಪ್ಪ, ಸಿಇಓ ಸಿ. ಬಸವಣ್ಣ, ಮುಖಂಡರಾದ ಶಾಂತಮಲ್ಲಪ್ಪ, ಮಹದೇವಪ್ಪ, ನಂಜಪ್ಪ, ಬಿಸಲವಾಡಿ ಡೇರಿ ಮಹೇಶ್‌, ಪುನೀತ್‌ ಇದ್ದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.