ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ
Team Udayavani, Mar 26, 2023, 5:22 AM IST
ಉಡುಪಿ: ರೈಲ್ವೇ ಸಿಬಂದಿಗೆ ಅವಾಚ್ಯವಾಗಿ ನಿಂದಿಸಿದ ಆರೋಪಿ ಸಮೀರ್ ಭಿವಾಜಿ ಶಿಂಧು ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೊಂಕಣ ರೈಲ್ವೇಯಲ್ಲಿ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಝೋನಾ ಪಿಂಟೋ ಅವರು ಇಂದ್ರಾಳಿಯ ರೈಲ್ವೇ ನಿಲ್ದಾಣದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ಮಂಗಳೂರು ಸೆಂಟ್ರಲ್ನ ಲೋಕಮಾನ್ಯ ತಿಲಕ್ ಜನರಲ್ ಕೋಚ್ನಲ್ಲಿ ವ್ಯಕ್ತಿಗಳು ಗಲಾಟೆ ಮಾಡುತ್ತಿರುವ ಬಗ್ಗೆ ಕರೆ ಬಂದಿತ್ತು.
ಈ ವೇಳೆ ಝೀನಾ ಪಿಂಟೋ ಅವರು ಕಾನ್ಸ್ಟೆಬಲ್ ಶ್ರೀಕಾಂತ್ರೊಂದಿಗೆ ಬೋಗಿಯ ಬಳಿ ಹೋದಾಗ ಕರ್ತವ್ಯ ನಿರತ ಟಿಟಿಇ ಹಾಗೂ ಸಾರ್ವಜನಿಕರು ಗಲಾಟೆ ಮಾಡುತ್ತಿದ್ದ ಸಮೀರ್ ಭಿವಾಜಿ ಶಿಂಧು ಅವರನ್ನು ವಶಕ್ಕೆ ತೆಗೆದುಕೊಂಡರು. ಈ ವೇಳೆ ಆತ ಟಿಟಿಇ ನೀಡಿದ ಜ್ಞಾಪನವನ್ನು ಹಾಗೂ ಪ್ರತಿಯನ್ನು ಹರಿದು ಬಿಸಾಡಿ ಝೀನಾ ಪಿಂಟೋ ಹಾಗೂ ಅವರ ಸಹೊದ್ಯೋಗಿ ಶ್ರೀಕಾಂತ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ಬಳಿಕ ಆತನನ್ನು ಕಚೇರಿಗೆ ಕರೆದುಕೊಂಡು ಹೋಗಿ ನಿರೀಕ್ಷಕರ ಎದುರು ಹಾಜರುಪಡಿಸಿದಾಗ ಅವರ ಎದುರು ಕೂಡ ಶ್ರೀಕಾಂತ್ ಅವರಿಗೆ ಜೀವ ಬೆದರಿಕೆ ಹಾಕಿದ. ಸಮವಸ್ತ್ರದಲ್ಲಿ ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸಿದ್ದಾನೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ