ಬಂಧಿಸಿರುವ ಮಹಾರಾಷ್ಟ್ರದ ಹಸುಕರುಗಳ ಬಿಡುಗಡೆ ಮಾಡಲು ಮನವಿ


Team Udayavani, Mar 26, 2023, 4:44 PM IST

TDY-20

ಶಿರಾ: ಮಹಾರಾಷ್ಟ್ರ ರೈತರ ಹಸುಕರುಗಳನ್ನು ಬಂಧಿಸಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತಹಶೀಲ್ದಾರ್‌ ಮುರಳೀಧರ್‌ಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಧನಂಜಯಾರಾಧ್ಯ, ಮಹಾ ರಾಷ್ಟ್ರದ ರೈತರು ಚಿಂತಾಮಣಿ ಹಸುಗಳ ಸಂತೆ ಯಲ್ಲಿ ಖರೀದಿಸಿ 110 ಹೈಬ್ರಿಡ್‌ ಎಚ್‌ಎಫ್ ತಳಿ ಹಸು ಸಾಗಾಣೆ ಮಾಡುತ್ತಿದ್ದಾಗ ಮಾ.3ರಂದು ತುಮಕೂರು ನಗರ ಪೊಲೀಸರು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಮೊಕದ್ದಮೆ ದಾಖ ಲಿಸಿ, ಶಿರಾ ತಾಲೂಕಿನ ಚಿಕ್ಕಬಾಣಗೆರೆ ಸರ್ಕಾರಿ ಗೋಶಾಲೆಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಬಂಧಿಸಿರುವ ಹಸುಗಳು ಹಾಲು ಕರೆಯುತ್ತವೆ ಮತ್ತು ಗರ್ಭ ಧರಿಸಿವೆ. ಗೋಶಾಲೆಗೆ ಬಂದ ಮೇಲೆ 40 ಹಸುಗಳು ಕರು ಹಾಕಿವೆ. ಕೆಲವು ಹಾಕುವ ಹಂತದಲ್ಲಿವೆ. ಎಲ್ಲಾ ಹಸುಗಳು 75000 ರೂ.ನಿಂದ 1 ಲಕ್ಷ ರೂ. ಬೆಲೆ ಬಾಳುತ್ತವೆ. ಬಂಧಿ ಸಿರುವ ಹಸುಗಳ ಒಟ್ಟು ಮೌಲ್ಯ 1.50 ಕೋಟಿ ರೂ. ಆಗಿದ್ದು, ಎಲ್ಲಾ ಹಸುಗಳು ಸಾಕಾಣಿಕೆ ಮಾಡಲು ಖರೀದಿಸಿ, ಮಹಾರಾಷ್ಟ್ರಕ್ಕೆ ಸಾಗಾಣೆ ಮಾಡುತ್ತಿದ್ದ ಸಂದರ್ಭದಲ್ಲಿ ದಾಖಲಾತಿ ಪರಿಶೀಲಿ ಸದೇ, ದುರುದ್ದೇಶದಿಂದ ಕೇಸು ದಾಖಲಿಸಿರುವು ದರಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ಹಸುಕರುಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಈ ವೇಳೆ ತಾಲೂಕು ರೈತ ಸಂಘದ ಅಧ್ಯಕ್ಷ ಸಣ್ಣದ್ಯಾಮೇಗೌಡ, ಕಾರ್ಯದರ್ಶಿ ಬಸವರಾಜು, ಉಪಾಧ್ಯಕ್ಷ ಲಕ್ಕಣ್ಣ ಕುದುರೆಕುಂಟೆ, ಮುಖಂಡ ರಾದ ಜುಂಜಣ್ಣ, ಜಗದೀಶ್‌, ನಾರಾಯಣಪ್ಪ, ಪ್ರಕಾಶ್‌ ಹಲವರು ಹಾಜರಿದ್ದರು. ಅಧಿಕಾರಿಗಳಿಗೆ ತರಾಟೆ: ಈ ವೇಳೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಬಿಸಿಲಿನಲ್ಲೇ ಹಸು, ಕರುಗಳನ್ನು ಕಟ್ಟಿ ಹಾಕಿರುವುದನ್ನು ಕಂಡು ಪಶು ಇಲಾಖೆ ಜಿಲ್ಲಾ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ತಕ್ಷಣ ನೆರಳಿನ ವ್ಯವಸ್ಥೆ ಮಾಡಲು ಸೂಚಿಸಿದರು.

ಬಿಸಿಲಿನ ತಾಪಕ್ಕೆ ಹಸುಗಳ ಸಾವು: ಕೆಲವು ಹಸುಗಳು, ಕರುಗಳು ಬಿಸಿಲಿನ ತಾಪ ತಾಳದೇ ಮೃತಪಟ್ಟಿದ್ದು, ಅವುಗಳನ್ನು ಸರಿಯಾಗಿ ಹೂತು ಹಾಕಿಲ್ಲ. ಒಂದೇ ಗುಂಡಿಯಲ್ಲಿ ಮೂರು ನಾಲ್ಕು ಕರುಗಳನ್ನು ಹಾಕಲಾಗಿದೆ. ಸರಿಯಾಗಿ ಮಣ್ಣು ಮುಚ್ಚಿಲ್ಲದ ಕಾರಣ ದುರ್ನಾತ ಬೀರುತ್ತಿದೆ. ಸ್ವತ್ಛತೆ, ಸೌಲಭ್ಯ ಮರೀಚಿಕೆ ಆಗಿದ್ದು, ಸ್ಥಳೀಯರು ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರು, ರೈತ ಸಂಘದವರಿಂದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿ, ಭಾನುವಾರ ನೆರಳಿಗಾಗಿ ತಾತ್ಕಾಲಿಕ ಶೆಡ್‌ ನಿರ್ಮಿಸಬೇಕು, ಹಿಂಡಿ, ರಾಗಿ ಹುಲ್ಲು ಹಾಗೂ ಜೋಳದ ತೆನೆ ಕತ್ತರಿಸಿ ರಾಸುಗಳಿಗೆ ನೀಡಬೇಕು, 15 ಗೋಪಾಲಕರನ್ನು ನೇಮಿಸಬೇಕು, ಸತ್ತ ಕರುಗಳನ್ನು ಸೂಕ್ತವಾಗಿ ಸುಡಬೇಕು. ಒಬ್ಬ ಪಶು ವೈದ್ಯ ಸ್ಥಳದಲ್ಲೇ ಇದ್ದು ರಾಸುಗಳಿಗೆ ಚಿಕಿತ್ಸೆ ನೀಡಬೇಕು. ಔಷಧ ಕೊರತೆ ಉಂಟಾಗಬಾರದು, ಇನ್ನು ಮುಂದೆ ಏನಾದರೂ ಹಸು, ಕರು ಸಾವನ್ನಪಿದ್ರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. -ಎಲ್‌.ಮುರಳೀಧರ್‌, ತಹಶೀಲ್ದಾರ್‌, ಶಿರಾ

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.