ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ವರ್ಷಾಂತ್ಯದಲ್ಲಿ ಚುನಾವಣೆ ; ಚುನಾವಣೆ ಸಜ್ಜಾಗುತ್ತಿರುವ ಬಿಜೆಪಿ
Team Udayavani, Mar 26, 2023, 7:51 PM IST
ಭೋಪಾಲ್: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಸ್ಥಾನಗಳ ಪೈಕಿ 200ಕ್ಕೂ ಹೆಚ್ಚು ಸ್ಥಾನಗಳನ್ನು ತಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ.
ಬಿಜೆಪಿ ಕಚೇರಿಯ ಶಂಕುಸ್ಥಾಪನೆಗಾಗಿ ಆಗಮಿಸಿದ ಅವರು ಈ ಹೇಳಿಕೆ ನೀಡಿದರು. ಭೋಪಾಲ್ನ ಈ ಕಚೇರಿಯು ಅತ್ಯಂತ ಆಧುನಿಕ ಮತ್ತು ಭವ್ಯವಾಗಿರಲಿದೆ. ನಮ್ಮ ಕಚೇರಿಗಳು ಸಂಸ್ಕಾರ ಕೇಂದ್ರಗಳು, ಬಿಜೆಪಿ ಕಾರ್ಯಕರ್ತರು ಸಂಸ್ಕಾರ ಸ್ವೀಕರಿಸಲು ಇಲ್ಲಿಗೆ ಬರುತ್ತಾರೆ ಮತ್ತು ಸಮಾಜ ಮತ್ತು ರಾಷ್ಟ್ರದ ಸೇವೆಯಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಾರೆ ಎಂದು ನಡ್ಡಾ ಹೇಳಿದರು. ಬಳಿಕ ಬೂತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಉತ್ಸಾಹಭರಿತ ಬಿಜೆಪಿ ಕಾರ್ಯಕರ್ತರು ನನಗೆ ನೀಡಿದ ಆತ್ಮೀಯ ಸ್ವಾಗತವು ನಾವು ಎಂಪಿಯಲ್ಲಿ 200 ಕ್ಕೂ ಹೆಚ್ಚು ಅಸೆಂಬ್ಲಿ ಸ್ಥಾನಗಳಿಗೆ ಹೋಗುತ್ತಿದ್ದೇವೆ ಎಂದು ತೋರಿಸುತ್ತದೆ ಎಂದು ಅವರು ಹೇಳಿದರು.
ಮಧ್ಯಪ್ರದೇಶದಲ್ಲಿ 2018 ರ ಚುನಾವಣೆಯಲ್ಲಿ ಹಂಗ್ ಅಸೆಂಬ್ಲಿ ನಿರ್ಮಾಣವಾಗಿತ್ತು ಕಾಂಗ್ರೆಸ್ 230 ಸದಸ್ಯರ ಸದನದಲ್ಲಿ 114 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಬಿಜೆಪಿ 109 ಸ್ಥಾನಗಳಲ್ಲಿ ಗೆದ್ದಿತ್ತು. ಬಿಜೆಪಿಗೆ 41.02 ರಷ್ಟು ಮತಗಳು ಬಂದಿದ್ದು, ಕಾಂಗ್ರೆಸ್ನ 40.89 ರಷ್ಟು ಮತಗಳನ್ನು ಪಡೆದಿತ್ತು.
ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವನ್ನು ರಚಿಸಿತು, 2020ರ ಮಾರ್ಚ್ ತಿಂಗಳಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಶಾಸಕರು ಬಂಡಾಯವೆದ್ದು, ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಮರಳಲು ದಾರಿ ಮಾಡಿಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು