ದಾವಣಗೆರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ: ಪತ್ನಿ, ಪ್ರಿಯಕರನ ಬಂಧನ
Team Udayavani, Mar 28, 2023, 8:55 PM IST
ದಾವಣಗೆರೆ: ಎಸ್.ಎಸ್. ಬಡಾವಣೆ ಎ ಬ್ಲಾಕ್ನ ರಿಂಗ್ ರಸ್ತೆಯ ಖಾಲಿ ಜಾಗವೊಂದರಲ್ಲಿ ವ್ಯಕ್ತಿಯೊಬ್ಬನ ಕತ್ತು ಕೊಯ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸರು ಕೊಲೆಯಾದವನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.
ದಾವಣಗೆರೆಯ ಬುದ್ಧ ಬಸವ ನಗರದ ನಿವಾಸಿ ಶ್ವೇತಾ (28), ಆಕೆಯ ಪ್ರಿಯಕರ ಚಂದ್ರಶೇಖರ್ ಅಲಿಯಾಸ್ ಚಂದ್ರು (29) ಬಂಧಿತರು.
ಮಾ. 23 ರಂದು ರಿಂಗ್ ರಸ್ತೆ ಗುಡ್ ಹೋಮ್ಸ್ ಫರ್ನಿಚರ್ ಅಂಗಡಿ ಪಕ್ಕದ ಖಾಲಿ ನಿವೇಶನದಲ್ಲಿ 35 ವರ್ಷದ ಮಹಾಂತೇಶ್ ಪುಟ್ಟಪ್ಪ ಚೌರದ (36)ಎಂಬಾತನ ಮೇಲೆ ಕಲ್ಲು ಎತ್ತಿ ಹಾಕಿ ಹಲ್ಲೆ ಮಾಡಲಾಗಿತ್ತು. ತೀವ್ರವಾಗಿ ಗಾಯ ಗೊಂಡಿದ್ದ ಅವನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದನು. ಬೆರಳಚ್ಚಿನ ಸಹಾಯದಿಂದ ಕೊಲೆಗೀಡಾದವನು ಹಾನಗಲ್ ತಾಲೂಕಿನ ಬೇಚುವಳ್ಳಿಯ ಮಹಾಂತೇಶ್ ಪುಟ್ಟಪ್ಪ ಚೌರದ ಎಂದು ಗುರುತು ಪತ್ತೆ ಹಚ್ಚಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ವಿದ್ಯಾನಗರ ಪೊಲೀಸರು ಮೃತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ