ಐಪಿಎಲ್‌ ಆರಂಭಕ್ಕೂ ಮೊದಲೇ 6 ಕ್ರಿಕೆಟಿಗರು ಔಟ್‌!


Team Udayavani, Mar 29, 2023, 6:41 AM IST

ipl

ಹೊಸದಿಲ್ಲಿ: ಸಾಮಾನ್ಯವಾಗಿ ಸುದೀರ್ಘ‌ ಪಂದ್ಯಾವಳಿ ಅಥವಾ ಲೀಗ್‌ ನಡುವೆ ಆಟಗಾರರು ನಾನಾ ಕಾರಣದಿಂದ ಬೇರ್ಪಡುವುದಿದೆ. ಇದರಲ್ಲಿ ಮುಖ್ಯವಾದುದು ಗಾಯದ ಸಮಸ್ಯೆ. ಆದರೆ ಈ ಬಾರಿಯ ಐಪಿಎಲ್‌ ಇದಕ್ಕೆ ವ್ಯತಿರಿಕ್ತವಾದಂತಿದೆ. ಈ ಕ್ಯಾಶ್‌ ರಿಚ್‌ ಲೀಗ್‌ ಆರಂಭವಾಗುವ ಮೊದಲೇ 6 ಮಂದಿ ಆಟಗಾರರು ದೂರ ಸರಿದಿದ್ದಾರೆ. ಸದ್ಯ ನಾಲ್ವರಷ್ಟೇ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಜಾನಿ ಬೇರ್‌ಸ್ಟೊ, ವಿಲ್‌ ಜಾಕ್ಸ್‌, ಕೈಲ್‌ ಜೇಮಿಸನ್‌, ಪ್ರಸಿದ್ಧ್ ಕೃಷ್ಣ, ಶ್ರೇಯಸ್‌ ಅಯ್ಯರ್‌, ಜೇ ರಿಚರ್ಡ್‌ಸನ್‌ ಬೇರ್ಪಟ್ಟವರಲ್ಲಿ ಪ್ರಮುಖರು. ಉಳಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಸ್‌ಪ್ರೀತ್‌ ಬುಮ್ರಾ, ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ರಿಷಭ್‌ ಪಂತ್‌ ಹೊರಗುಳಿಯುವುದು ಅನಿವಾರ್ಯವಾಗಿತ್ತು.

* ವಿಲ್‌ ಜಾಕ್ಸ್‌
ಇಂಗ್ಲೆಂಡ್‌ ಆಲ್‌ರೌಂಡರ್‌ ವಿಲ್‌ ಜಾಕ್ಸ್‌ ಆರ್‌ಸಿಬಿ ತಂಡದ ಸದಸ್ಯ. ಅವರು ಗಾಯದ ಕಾರಣದಿಂದ ಹಿಂದೆ ಸರಿದಿದ್ದಾರೆ. ಬದಲಿ ಆಟಗಾರನಾಗಿ ಸ್ಥಾನ ಪಡೆದವರು ನ್ಯೂಜಿಲ್ಯಾಂಡ್‌ ಸವ್ಯಸಾಚಿ ಮೈಕಲ್‌ ಬ್ರೇಸ್‌ವೆಲ್‌.

* ಜಾನಿ ಬೇರ್‌ಸ್ಟೊ
ಪಂಜಾಬ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ, ವಿಕೆಟ್‌ ಕೀಪರ್‌ ಜಾನಿ ಬೇರ್‌ಸ್ಟೊ ಹಿಂದಡಿ ಇಡಲು ಮುಖ್ಯ ಕಾರಣ ಫಿಟ್‌ನೆಸ್‌ ಸಮಸ್ಯೆ. ಇವರ ಬದಲು ಆಸ್ಟ್ರೇಲಿಯದ ಮ್ಯಾಥ್ಯೂ ಶಾರ್ಟ್‌ ಆಯ್ಕೆಯಾಗಿದ್ದಾರೆ.

* ಕೈಲ್‌ ಜೇಮಿಸನ್‌
ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನ್ಯೂಜಿಲ್ಯಾಂಡ್‌ ವೇಗಿ ಕೈಲ್‌ ಜೇಮಿಸನ್‌ ಈ ಋತುವಿನಲ್ಲಿ ಆಡುವುದಿಲ್ಲ. ಇವರ ಸ್ಥಾನಕ್ಕೆ ಆಯ್ಕೆಯಾದವರು ದಕ್ಷಿಣ ಆಫ್ರಿಕಾದ ಸಿಸಂಡ ಎಮ್‌ಗಾಲ.

* ಪ್ರಸಿದ್ಧ್ ಕೃಷ್ಣ
ಕರ್ನಾಟಕದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿರುವ ಪ್ರಸಿದ್ಧ್ ಕೃಷ್ಣ ರಾಜಸ್ಥಾನ್‌ ರಾಯಲ್ಸ್‌ ಪರ ಆಡಬೇಕಿತ್ತು. ಆದರೆ ಗಾಯಾಳಾದ ಕಾರಣ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಇವರ ಬದಲು ಸಂದೀಪ್‌ ಶರ್ಮ ಅವರನ್ನು ಆರಿಸಲಾಗಿದೆ.

* ಜೇ ರಿಚರ್ಡ್‌ಸನ್‌
ಮುಂಬೈ ಇಂಡಿಯನ್ಸ್‌ ತಂಡದ ಆಸ್ಟ್ರೇಲಿಯದ ವೇಗಿ ಜೇ ರಿಚರ್ಡ್‌ಸನ್‌ ಕೂಡ ಈ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಹೀಗಾಗಿ ಮುಂಬೈನ ವೇಗದ ಬೌಲಿಂಗ್‌ ವಿಭಾಗ ಅವಳಿ ಆಘಾತಕ್ಕೆ ಸಿಲುಕಿದೆ. ಬುಮ್ರಾ ಕೂಡ ಇಲ್ಲದಿರುವುದು ದೊಡ್ಡ ಹಿನ್ನಡೆ. ರಿಚರ್ಡ್‌ಸನ್‌ ಬದಲು ಯಾರು ಎಂಬುದಿನ್ನೂ ಖಾತ್ರಿಯಾಗಿಲ್ಲ.

* ಶ್ರೇಯಸ್‌ ಅಯ್ಯರ್‌
ಕೆಕೆಆರ್‌ ತಂಡವನ್ನು ಮುನ್ನಡೆಸಬೇಕಿದ್ದ ಶ್ರೇಯಸ್‌ ಅಯ್ಯರ್‌ ಬೆನ್ನುನೋವಿನಿಂದಾಗಿ ಐಪಿಎಲ್‌ನಿಂದ ಬೇರ್ಪಟ್ಟಿದ್ದಾರೆ. ಇವರ ಬದಲು ನಿತೀಶ್‌ ರಾಣಾ ಅವರಿಗೆ ನಾಯಕತ್ವ ವಹಿಸಲಾಗಿದೆ. ಅಯ್ಯರ್‌ ಚೇತರಿಸಿಕೊಂಡರೆ ದ್ವಿತೀಯಾರ್ಧದಲ್ಲಿ ಆಡಲಿಳಿಯಬಹುದು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.