ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!


Team Udayavani, Mar 29, 2023, 7:40 AM IST

ನಿಷೇಧಿತ ಇ- ಸಿಗರೇಟ್‌ ಹತ್ತಿಕ್ಕುವವರಿಲ್ಲ ! ಗ್ರಾಮೀಣ ಪ್ರದೇಶದಲ್ಲೂ ಮಾರಾಟ ಅವ್ಯಾಹತ!

ಇ- ಸಿಗರೇಟ್‌ ಅಪಾಯಕಾರಿ ಮಾದಕ ವಸ್ತುಗಳ ಜಗತ್ತಿಗೆ ಕರೆದೊಯ್ಯುವಂಥದ್ದು. ಮಂಗಳೂರು ನಗರ ಸೇರಿದಂತೆ ಹಲವೆಡೆ ಇವುಗಳ ಅವ್ಯಾಹತವಾಗಿ ಮಾರಾಟವಾಗುತ್ತಿದೆ. ಇದು ನಿಷೇಧಿತ ವಸ್ತುವಾಗಿದ್ದರೂ ಯುವಜನರಿಗೆ ಲಭ್ಯವಾಗುತ್ತಿದೆ. ಈ ಕುರಿತು ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

ಮಂಗಳೂರು: ಡ್ರಗ್ಸ್‌ ಚಟಕ್ಕೆ ಬೀಳಿಸುವ ಇ-ಸಿಗರೇಟ್‌ ನಿಷೇಧಿತ ವಸ್ತುಗಳ ಪಟ್ಟಿಯಲ್ಲಿ ಸೇರಿದ್ದರೂ ಜಿಲ್ಲೆಯಲ್ಲಿ ಯುವಜನರ ಕೈಗೆ ನಿರಾಂತಕವಾಗಿ ಲಭ್ಯವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕೆಲವು ದಿನಗಳ ಹಿಂದಷ್ಟೇ ಉಪ್ಪಿನಂಗಡಿಯ ಅಂಗಡಿಯೊಂದರಲ್ಲಿ ಪೊಲೀಸರಿಗೆ ನಿಷೇಧಿತ ಇ- ಸಿಗರೇಟುಗಳು ಸಿಕ್ಕಿದ್ದು ಸದ್ಯ ಕಳವಳಕ್ಕೆ ಕಾರಣ.

ದ.ಕ. ಜಿಲ್ಲಾ ಪೊಲೀಸ್‌ ಘಟಕದ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನದ ಅಂಗವಾಗಿ ಶಾಲಾ, ಕಾಲೇಜುಗಳ ಸುತ್ತ ಇರುವ ಗೂಡಂಗಡಿ, ಹೊಟೇಲ್‌ಗ‌ಳು, ಕಿರಾಣಿ ಅಂಗಡಿ ಸೇರಿದಂತೆ ಹಲವು ಅಂಗಡಿ ಮುಂಗಟ್ಟುಗಳಿಗೆ ಪೊಲೀಸರು ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ಈ ಸಂದರ್ಭ ಉಪ್ಪಿನಂಗಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ 52 ನಿಷೇಧಿತ ಇ- ಸಿಗರೇಟ್‌ಗಳು ಸಿಕ್ಕಿದ್ದವು. ಕೋಟಾ³ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಂಗಡಿ ಮಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಯಿತು.

ಆಗ ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಇ ಸಿಗರೇಟ್‌ ಮಾರಾಟವಾಗುತ್ತಿರುವುದರ ಹಿಂದಿನ ಹಿನ್ನೆಲೆ ಬೆಳಕಿಗೆ ಬಂದಿತು.

2019ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರಕಾರವು ಆರೋಗ್ಯದ ದೃಷ್ಟಿಯಿಂದ ಇ- ಸಿಗರೇಟ್‌ ನಿಷೇಧಿಸಿತ್ತು. ಸಾಮಾನ್ಯವಾಗಿ ಸಿಗರೇಟ್‌ಗಳು ಉರಿಯುವಾಗ ಹೊಗೆ ಬಿಡುತ್ತವೆ. ಆದರೆ ಇ-ಸಿಗರೇಟ್‌ ಹಾಗಲ್ಲ. ಇದು ಸಿಗರೇಟ್‌ ಒಳಗಿನ ಬ್ಯಾಟರಿಗೆ ಅಳವಡಿಸಲಾದ ಕಾಯಿಲ್‌ನಿಂದ ಬೆಂಕಿ ಹತ್ತಿಕೊಂಡು ದ್ರವ ರೂಪದಲ್ಲಿರುವ ನಿಕೋಟಿನ್‌ ಹೊಗೆಯ ರೂಪದಲ್ಲಿ ಹೊರಸೂಸತೊಡಗುತ್ತದೆ. ಇದು ಸಾಮಾನ್ಯ ಸಿಗರೇಟ್‌ನ ಹೊಗೆಗಿಂತ ಶೇ. 20ರಷ್ಟು ಹೆಚ್ಚು ದಟ್ಟವಾಗಿರುತ್ತದೆ. ವಿಶೇಷವೆಂದರೆ, ಸಿಗರೇಟ್‌ ಸ್ವಾಭಾವಿಕ ತಂಬಾಕಿನ ವಾಸನೆಯನ್ನು ಹೊಂದಿದ್ದರೆ, ಇ- ಸಿಗರೇಟ್‌ ನಾನಾ ರೀತಿಯ ಸುಗಂಧ ದ್ರವ್ಯಗಳ ಪರಿಮಳದಲ್ಲಿ (ಚಾಕೋಲೆಟ್‌, ವೆನಿಲ್ಲಾ, ಸ್ಟ್ರಾಬೆರಿ ಇತ್ಯಾದಿ) ಲಭ್ಯ. ಆದರೆ ಈ ನಿಕೋಟಿನ್‌ ಸಾಮಾನ್ಯ ಸಿಗರೇಟ್‌ಗಿಂತಲೂ ವೇಗವಾಗಿ ವ್ಯಸನಿಯನ್ನಾಗಿಸುತ್ತದೆ.
ಯುವಜನರನ್ನು ಅತಿಯಾಗಿ ಆಕರ್ಷಿಸುವ ಇ- ಸಿಗರೇಟ್‌ ವ್ಯಸನ ಇತರ ಅಪಾಯಕಾರಿ ನಿಷೇಧಿತ ಮಾದಕ ವಸ್ತುಗಳತ್ತ ಕೊಂಡೊಯ್ಯುತ್ತದೆ. ಇದೇ ಇ- ಸಿಗರೇಟ್‌ ನಿಷೇಧಕ್ಕೆ ಪ್ರಮುಖ ಕಾರಣ ಎನ್ನುವುದು ತಜ್ಞರ ಅಭಿಪ್ರಾಯ.

ದುಬಾರಿ ಬೆಲೆಯಲ್ಲಿ ಮಾರಾಟವಾಗುವ ಇ- ಸಿಗರೇಟ್‌, ನಗರ ಪ್ರದೇಶದಲ್ಲಿಯಂತೂ ಜನನಿಬಿಡ, ಆಯಕಟ್ಟಿನ ಪ್ರದೇಶಗಳ ಅಂಗಡಿ ಮುಂಗಟ್ಟುಗಳಲ್ಲೇ ಎಗ್ಗಿಲ್ಲದೆ ಮಾರಾಟವಾಗುತ್ತದೆ. ಯುವ ಜನತೆಯೇ ಇದರ ಗ್ರಾಹಕರು. ಆದ ಕಾರಣ ಇಲಾಖೆಗಳು ಈ ಬಗ್ಗೆ ಕಟ್ಟನಿಟ್ಟಿನ ಕ್ರಮ ಕೈಗೊಂಡು ಡ್ರಗ್ಸ್‌ ವ್ಯಸನಕ್ಕೆ ತುತ್ತಾಗುವ ಯುವ ಸಮುದಾಯವನ್ನು ರಕ್ಷಿಸಬೇಕಿದೆ.

ದ.ಕ. ಪೊಲೀಸ್‌ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸುತ್ತಮುತ್ತ ಮಾದಕ ದ್ರವ್ಯಗಳ ಸಾಗಣೆ-ಮಾರಾಟ ಜಾಲದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ. ನಾಲ್ಕೈದು ದಿನಗಳ ಹಿಂದೆ ನಡೆದ ವಿಶೇಷ ದಾಳಿಯಲ್ಲಿ ಮೊಬೈಲ್‌ ಅಂಗಡಿಯೊಂದರಿಂದ 52 ಇ- ಸಿಗರೇಟ್‌ಗಳು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಕ್ರಮ ವಹಿಸಲಾಗಿದೆ. ಇದಲ್ಲದೆ ಎರಡು ವಾರಗಳಿಂದೀಚೆಗೆ ಪೊಲೀಸರ ಕಾರ್ಯಾಚರಣೆಯ ಸಂದರ್ಭ 7 ಕೆಜಿ ಗಾಂಜಾ, ಸಿಂಥೆಟಿಕ್‌ ಡ್ರಗ್‌ ಆದ 75 ಗ್ರಾಂ ಎಂಡಿಎಂ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್‌ ನಿಯಂತ್ರಣಕ್ಕೆ ಸಂಬಂಧಿಸಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು.
– ಡಾ| ವಿಕ್ರಮ್‌ ಅಮಟೆ, ಪೊಲೀಸ್‌ ವರಿಷ್ಠಾಧಿಕಾರಿ, ದ.ಕ.

ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಇ- ಸಿಗರೇಟ್‌ ಮಾರಾಟದ ಬಗ್ಗೆಯೂ ಇಲಾಖೆಗೆ ಮಾಹಿತಿ ಬಂದಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ವಹಿಸಲಾಗುವುದು. ವಿಶೇಷ ಡ್ರೈವ್‌ ಬಗ್ಗೆಯೂ ಚಿಂತಿಸಲಾಗುವುದು.
– ಕುಲ್‌ದೀಪ್‌ ಕುಮಾರ್‌ ಜೈನ್‌, ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.