ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಮಾಜಿ ಸಂಸದ ಹೆಚ್.ಜಿ.ರಾಮುಲು ಅವರ ಕಿರಿಯ ಪುತ್ರ

Team Udayavani, Mar 30, 2023, 5:01 PM IST

1-asdssa-dsa

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಮಾಜಿ ಸಂಸದ ಹೆಚ್.ಜಿ.ರಾಮುಲು ಕಿರಿಯ ಪುತ್ರ ಎಚ್.ಆರ್.ಚನ್ನಕೇಶವ ಅವರು ಗುರುವಾರ ಮಧ್ಯಾಹ್ನ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

2013 ರಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದ ಎಚ್.ಆರ್.ಚನ್ನಕೇಶವ ನಂತರ ಅವರ ತಂದೆಯವರ ಸೂಚನೆಯಂತೆ ಸಹೋದರ ಎಚ್.ಆರ್.ಶ್ರೀ ನಾಥ ಅವರಿಗೆ ಕಾಂಗ್ರೆಸ್ ಟಿಕೆಟ್ ಬಿಟ್ಟು ಕೊಟ್ಟಿದ್ದರು. ನಂತರ ಬಿಜೆಪಿ ಪಕ್ಷ ಸೇರ್ಪಡೆಯಾಗಿ 2014 ರ ಲೋಕಸಭಾ ಹಾಗೂ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹರ ಸಾಹಸ ನಡೆಸಿ ವಿಫಲರಾಗಿದ್ದರು.

ಬಿಜೆಪಿ ಮುಖಂಡರ ರಾಜಿ ಸಂಧಾನದ ನಂತರ ಬಿಜೆಪಿ ಯಲ್ಲಿ ಮುಂದುವರಿದಿದ್ದರು ಪಕ್ಷದ ಯಾವುದೇ ಕಾರ್ಯಕ್ರಮ ಹಾಗೂ ಪಕ್ಷದ ರಾಜ್ಯ ಮುಖಂಡರ ಗಂಗಾವತಿ ಕೊಪ್ಪಳ ಭೇಟಿ ಸಂದರ್ಭದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ವರ್ತನೆಗೆ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಇಡೀ ಕ್ಷೇತ್ರದಾದ್ಯಂತ ಸಂಚಾರ ಮಾಡಿ ಸಿದ್ಧತೆ ನಡೆಸಿದ್ದರು.

ಈ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಕೇಶವ ಅವರಿಗೆ ದೂರವಾಣಿ ಕರೆ ಮಾಡಿ ಗಂಗಾವತಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಮಾಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅಧಿಕೃತವಾಗಿ ಪಕ್ಷ ಸೇರಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ,ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ,ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿ ಪಕ್ಷ ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರ ಉಪಸ್ಥಿತಿಯಲ್ಲಿ ಜೆಡಿಎಸ್ ಸೇರಿದ್ದಾರೆ.

ಬಿಜೆಪಿ ಯಿಂದ ಹಿಂದುಳಿದವರಿಗೆ ಮೋಸ

ಬಿಜೆಪಿ ಪಕ್ಷಕ್ಕಾಗಿ ಕಳೆದ ಮೂರು ನಾಲ್ಕು ಚುನಾವಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದರೂ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ. ಬಿಜೆಪಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವಿರೋಧಿಯಾಗಿದ್ದು ಮೋಸ ಮಾಡುವ ಪಕ್ಷವಾಗಿದೆ. ಗಂಗಾವತಿ ಕ್ಷೇತ್ರದಲ್ಲಿ ಶಾಂತಿ ಭಾವೈಕ್ಯ ಕಾಪಾಡಲು ನಮ್ಮ ತಂದೆ ಹೆಚ್.ಜಿ.ರಾಮುಲು ಕಳೆದ ನಾಲ್ಕು ದಶಕಗಳಿಂದ ಕೆಲಸ ಮಾಡಿದ್ದಾರೆ. ಜನರು ತಮ್ಮ ಕುಟುಂಬದ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದು ಇದೀಗ ಜೆಡಿಎಸ್ ಪಕ್ಷದ ಮುಖಂಡ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಪಕ್ಷಕ್ಜೆ ಸೇರಿದ್ದು ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿದ್ದೇನೆ ಎಂದು ಚನ್ನಕೇಶವ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.