ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ
Team Udayavani, Mar 30, 2023, 6:47 PM IST
ಚಿಕ್ಕಮಗಳೂರು : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಬರುತ್ತಿದ್ದು, ಇದೀಗ ಬಂಧನ ಭೀತಿ ಎದುರಾಗಿದೆ. ಚೆಕ್ ಬೌನ್ಸ್ ಕೇಸಲ್ಲಿ ಸಂಕಷ್ಟ ಎದುರಾಗಿದ್ದು ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಎಂ.ಪಿ. ಕುಮಾರಸ್ವಾಮಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ನೋಟಿಸ್ ನೀಡಲಾಗಿದೆ.
30 ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು, 1 ಕೋಟಿ 38 ಲಕ್ಷದ 65 ಸಾವಿರದ 8 ಚೆಕ್ ಬೌನ್ಸ್ ಕೇಸ್ ನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿತ್ತು. 30 ದಿನದ ಒಳಗೆ ಹಣ ಮರು ಪಾವತಿ ಮಾಡುವಂತೆ ಕೋರ್ಟ್ ಹೇಳಿತ್ತು.
ಕುಮಾರಸ್ವಾಮಿ ಅವರ ವಿರುದ್ಧ ಚಿಕ್ಕಮಗಳೂರು ಮೂಲದ ಹೂವಪ್ಪಗೌಡ 8 ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ದೂರು ನೀಡಿದ್ದರು.ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್ ನಲ್ಲಿ ಮೂರು ವರ್ಷದಿಂದ ಪ್ರಕರಣ ನಡೆಯುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ