ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ ನಲ್ಲಿ ಪ್ರೇಕ್ಷಕರ ಮುಂದೆ..


Team Udayavani, Mar 31, 2023, 2:27 PM IST

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ..

ಆರಂಭದಲ್ಲಿಯೇ ಚಿತ್ರತಂಡ ಹೇಳಿರುವಂತೆ, “ಘೋಸ್ಟ್‌’ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌-ಥ್ರಿಲ್ಲರ್‌ ಕಥಾಹಂದರದ ಸಿನಿಮಾ. ಈಗಾಗಲೇ ಬಿಡುಗಡೆಯಾಗಿರುವ “ಘೋಸ್ಟ್‌’ ಸಿನಿಮಾದ ಪೋಸ್ಟರ್‌ಗಳಲ್ಲೂ ಶಿವಣ್ಣ ಅವರ ಕೆಲವು ಗೆಟಪ್‌ಗ್ಳು ಗಮನ ಸೆಳೆಯುವಂತಿದೆ. ಹಾಗಾದರೆ, “ಘೋಸ್ಟ್‌’ ಸಿನಿಮಾದಲ್ಲಿ ನಿಜಕ್ಕೂ ಶಿವಣ್ಣ ಎಷ್ಟು ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲೂ ಇದೆ. ಇದಕ್ಕೆ ಈಗ ಶಿವಣ್ಣ ಅವರೇ ಉತ್ತರಿಸಿದ್ದಾರೆ.

“ಈ ಸಿನಿಮಾದಲ್ಲಿ ನಾನು 3 ಶೇಡ್‌ನ‌ಲ್ಲಿ ಕಾಣಿಸಿಕೊಳ್ತೀನಿ. ಕಥೆ ಮತ್ತು ಪಾತ್ರಕ್ಕೆ ತಕ್ಕಂತೆ ಸಿನಿಮಾದಲ್ಲಿ 3 ಲುಕ್‌ನಲ್ಲಿ ಕಾಣಿಸಿಕೊಳ್ಳುವ ಪ್ರಯತ್ನ ಮಾಡಿದ್ದೇನೆ. ಅದು ಎಲ್ಲರಿಗೂ ಖುಷಿ ಕೊಡಲಿದೆ ಅಂತ ಭಾವಿಸಿದ್ದೇನೆ. ಇದಕ್ಕಿಂತ ಹೆಚ್ಚಾಗಿ ಈಗಲೇ ನನ್ನ ಪಾತ್ರದ ಬಗ್ಗೆ ಹೆಚ್ಚೇನೂ ಮಾತನಾಡಲಾರೆ. ಆಡಿಯನ್ಸ್‌ ಥಿಯೇಟರ್‌ನಲ್ಲಿ ನೋಡುವಾಗಲೂ ಒಂದಷ್ಟು ಸಸ್ಪೆನ್ಸ್‌- ಥ್ರಿಲ್ಲಿಂಗ್‌ ಇರಲಿ’ ಎನ್ನುವುದು ಶಿವಣ್ಣ ಮಾತು.

ಪ್ಯಾನ್‌ ಇಂಡಿಯಾದಲ್ಲಿ ಶಿವಣ್ಣ :”ಘೋಸ್ಟ್‌’ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲೂ ಏಕಕಾಲದಲ್ಲೆ ನಿರ್ಮಾಣವಾಗುತ್ತಿದೆ. ಸಿನಿಮಾದಲ್ಲಿ ನಟ ಶಿವರಾಜಕುಮಾರ್‌ ಅವರೊಂದಿಗೆ ಬಹುಭಾಷಾ ನಟರಾದ ಅನುಪಮ್‌ ಖೇರ್‌, ಜಯರಾಮ್‌ ಇನ್ನಿತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮೊದಲ ಬಾರಿಗೆ ಇಂಥ ದಿಗ್ಗಜರ ಜೊತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಶಿವಣ್ಣ ಕೂಡ ಫ‌ುಲ್‌ ಖುಷಿಯಾಗಿದ್ದಾರೆ.

“ಅನುಪಮ್‌ ಖೇರ್‌ ಅವರು ದೇಶದಲ್ಲಿ ಒಂದೇ ಅಲ್ಲ, ವಿಶ್ವದಲ್ಲಿ ಒಳ್ಳೆಯ ನಟ. ಅವರಿಂದ ಕಲಿಯುವುದು ಸಾಕಷ್ಟಿದೆ. ಸಿನಿಮಾದಲ್ಲಿ ಅವರಿಗೊಂದು ವಿಶೇಷ ಪಾತ್ರವಿದೆ. ಖಂಡಿತ ಅವರ ಪಾತ್ರ ಎಲ್ಲರಿಗೂ ಇಷ್ಟವಾಗುತ್ತದೆ. ಇನ್ನು ಜಯರಾಮ್‌ ಅವರೊಂದಿಗೆ ಅಭಿನಯಿಸಲು ಕಾಲ ಕೂಡಿ ಬಂದಿರಲಿಲ್ಲ. ಈ ಸಿನಿಮಾದಲ್ಲಿ ಅವರೊಂದಿಗೂ ಅಭಿನಯಿಸುವ ಅವಕಾಶ ಬಂದಿದೆ. ಈ ಸಿನಿಮಾದಲ್ಲಿ ಜಯರಾಮ್‌ ಅವರಿಂದ ಒಂದು ಪಾತ್ರ ಮಾಡಿಸೋಣ ಅಂತ ನಾನು ಹೇಳಿದ್ದೆ. ಟೀಮ್‌ ಕೂಡ ಈ ಪಾತ್ರಕ್ಕೆ ಅವರೇ ಸೂಕ್ತ ಎನಿಸಿತು. ಇಡೀ ಸಿನಿಮಾದ ಶೂಟಿಂಗ್‌ ಖುಷಿಕೊಡುತ್ತಿದೆ’ ಎಂದರು ಶಿವರಾಜಕುಮಾರ್‌.

2 ಪಾರ್ಟ್‌ನಲ್ಲಿ “ಘೋಸ್ಟ್‌’:  “”ಘೋಸ್ಟ್‌’ ಸಿನಿಮಾ ಎರಡು ಪಾರ್ಟ್‌ನಲ್ಲಿ ಬರುತ್ತದೆ’ ಇಂಥದ್ದೊಂದು ಮಾಹಿತಿಯನ್ನು ಸ್ವತಃ ಶಿವರಾಜಕುಮಾರ್‌ ಅವರೇ ಹಂಚಿಕೊಂಡಿದ್ದಾರೆ. ಈಗಾಗಲೇ “ಘೋಸ್ಟ್‌’ ಮೊದಲ ಭಾಗದ ಚಿತ್ರೀಕರಣ ಶೇಕಡಾ 90ರಷ್ಟು ಪೂರ್ಣಗೊಂಡಿದೆ. “ಘೋಸ್ಟ್‌’ ಮೊದಲ ಭಾಗ ಬಿಡುಗಡೆಯಾದ ನಂತರ “ಘೋಸ್ಟ್‌’ ಎರಡನೇ ಭಾಗ ಕೂಡ ತೆರೆಗೆ ಬರಲಿದೆ. ಮೊದಲ ಭಾಗದಲ್ಲಿರುವ ಬಹುತೇಕ ಎಲ್ಲ ಕಲಾವಿದರೂ ಎರಡನೇ ಭಾಗದಲ್ಲೂ ಇರಲಿದ್ದಾರೆ. ನಿರ್ದೇಶಕ ಶ್ರೀನಿ, ನಿರ್ಮಾಪಕ ಸಂದೇಶ್‌ ನಾಗರಾಜ್‌ ದೊಡ್ಡ ಕ್ಯಾನ್ವಾಸ್‌ನಲ್ಲಿ, ಬಿಗ್‌ ಬಜೆಟ್‌ನಲ್ಲಿ “ಘೋಸ್ಟ್‌’ ಸಿನಿಮಾ ಮಾಡುತ್ತಿದ್ದಾರೆ. ಎಲ್ಲ ಥರದ ಎಂಟರ್‌ಟೈನ್ಮೆಂಟ್‌ “ಘೋಸ್ಟ್‌’ನಲ್ಲಿ ಇರಲಿದೆ. ಎಲ್ಲರೂ ಎಂಜಾಯ್‌ ಮಾಡುವಂಥ ಸಿನಿಮಾ ಆಗಲಿದೆ’ ಎಂಬ ವಿಶ್ವಾಸದ ಮಾತು ಶಿವಣ್ಣ ಅವರದ್ದು.

ವರ್ಷಾಂತ್ಯಕ್ಕೆ ದರ್ಶನ  ಸದ್ಯ “ಘೋಸ್ಟ್‌’ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಲಿದ್ದು, ಮತ್ತೂಂದೆಡೆ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಕೂಡ ಭರದಿಂದ ನಡೆಯುತ್ತಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್‌ ಅಥವಾ ಸೆಪ್ಟೆಂಬರ್‌ ವೇಳೆಗೆ “ಘೋಸ್ಟ್‌’ ತೆರೆಗೆ ಬರಲಿದೆ.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.