ವಾವ್! ಏನ್ ರುಚಿ ಈ ಸಿಗಡಿ ಘೀ ರೋಸ್ಟ್..ಸಿಗಡಿ ತಂದರೆ ಒಮ್ಮೆ ಹೀಗೆ ಮಾಡಿ ನೋಡಿ…

ಕರಾವಳಿ ಪ್ರದೇಶದಲ್ಲಿ ಸಿಗಡಿ ರೆಸಿಪಿ ಹೆಚ್ಚು ಪ್ರಸಿದ್ಧಿ ಪಡೆದಿದೆ.

ಶ್ರೀರಾಮ್ ನಾಯಕ್, Mar 31, 2023, 5:42 PM IST

Food

ಸಿಗಡಿ  ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಮೀನು ಪ್ರಿಯರಿಗೆ ಸಿಗಡಿ ಅಂದರೆ ಎಲ್ಲರಿಗೆ ಅಚ್ಚುಮೆಚ್ಚು. ಮಾಂಸಹಾರದಲ್ಲಿ ಅತ್ಯಂತ ಆರೋಗ್ಯಕರವಾದ ಆಹಾರದಲ್ಲಿ ಸಿಗಡಿಯೂ ಉತ್ತಮವಾದ ಸ್ಥಾನಮಾನ ಪಡೆದಿದೆ. ಕರಾವಳಿ ಪ್ರದೇಶದಲ್ಲಿ ಸಿಗಡಿ ರೆಸಿಪಿ ಹೆಚ್ಚು ಪ್ರಸಿದ್ಧಿ ಪಡೆದಿದೆ. ಸಿಗಡಿಯಿಂದ ಅನೇಕ ರೀತಿಯ ಖಾದ್ಯಗಳನ್ನು ಮಾಡುತ್ತಾರೆ. ನೀವು ನಾನ್‌ ವೆಜ್‌ ಪ್ರಿಯರಾಗಿದ್ದರೆ ಯಾವಾಗಲೂ ಒಂದೇ ರೀತಿಯ ಪದಾರ್ಥ ತಿಂದು ಬೋರ್‌ ಆಗಿದ್ದರೆ ನಾವು ನಿಮಗೊಂದು ರೆಸಿಪಿ ಹೇಳುತ್ತೇವೆ ಮನೆಯಲ್ಲಿ ಟ್ರೈ ಮಾಡಿ ನೋಡಿ. ಒಮ್ಮೆ ಮಾಡಿ ನೋಡಿ ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ.

ಅಂದಹಾಗೆ ನಾವು ಇವತ್ತು ಸಿಗಡಿ ಘೀ ರೋಸ್ಟ್‌ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ಹಾಗಾದರೆ ಮತ್ತೇಕೆ ತಡ “ಸಿಗಡಿ ಘೀ ರೋಸ್ಟ್‌” ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ ಬನ್ನಿ…..

ಸಿಗಡಿ ಘೀ ರೋಸ್ಟ್‌
ಬೇಕಾಗುವ ಸಾಮಗ್ರಿಗಳು
ಸಿಗಡಿ-ಅರ್ಧ ಕೆ.ಜಿ., ಅರಿಶಿನ ಪುಡಿ-ಅರ್ಧ ಚಮಚ, ಮೊಸರು-4 ಚಮಚ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2 ಚಮಚ, ಒಣಮೆಣಸು-4ರಿಂದ 5, ಕೊತ್ತಂಬರಿ ಬೀಜ(ಧನಿಯಾ)-1ಚಮಚ, ಜೀರಿಗೆ-ಅರ್ಧ ಚಮಚ, ಕಾಳುಮೆಣಸು-4ರಿಂದ5, ಖಾರದ ಪುಡಿ-2 ಚಮಚ, ತುಪ್ಪ-4ಚಮಚ, ಕರಿಬೇವು-ಸ್ವಲ್ಪ, ಮೆಂತ್ಯೆ-ಅರ್ಧ ಚಮಚ, ಈರುಳ್ಳಿ-1, ಲವಂಗ, ಚಕ್ಕೆ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಸಿಗಡಿಯನ್ನು ಸ್ವಚ್ಛಗೊಳಿಸಿ ಒಂದು ಪಾತ್ರೆಗೆ ಹಾಕಿ ಅದಕ್ಕೆ ಖಾರದ ಪುಡಿ, ಅರಿಶಿನ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಮೊಸರು ಮತ್ತು ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಸುಮಾರು ಅರ್ಧ ಗಂಟೆಗಳ ಕಾಲ ಹಾಗೆ ಬಿಡಿ.

ನಂತರ ಒಂದು ಪ್ಯಾನ್‌ ಗೆ ಒಣಮೆಣಸು, ಕಾಳು ಮೆಣಸು, ಜೀರಿಗೆ, ಮೆಂತ್ಯೆ, ಧನಿಯಾ, ಲವಂಗ ಮತ್ತು ಚಕ್ಕೆಯನ್ನು ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ತದನಂತರ ಅದನ್ನು ಮಿಕ್ಸ್‌ ಜಾರಿಗೆ ಹಾಕಿ ಸ್ವಲ್ಪ ನೀರನ್ನು ಸೇರಿಸಿ ನುಣ್ಣಗೆ ರುಬ್ಬಿ ಇಟ್ಟುಕೊಳ್ಳಿ.

ನಂತರ ಒಂದು ಪ್ಯಾನ್‌ ಗೆ ಮಿಶ್ರಣ ಮಾಡಿಟ್ಟ ಸಿಗಡಿಯನ್ನು ಹಾಕಿ ಅರ್ಧ ಬೇಯುವವರೆಗೆ ಬೇಯಿಸಿಕೊಂಡು ಆಮೇಲೆ ನೀರು ಮತ್ತು ಸಿಗಡಿಯನ್ನು ಬೇರೆ ಬೇರೆ ತೆಗೆದಿಟ್ಟುಕೊಳ್ಳಿ.

ತದನಂತರ ಇನ್ನೊಂದು ಪ್ಯಾನ್‌ ಗೆ 2ಚಮಚ ತುಪ್ಪ ಹಾಕಿ ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಕೈ ಅಡಿಸಿ ಆಮೇಲೆ ರುಬ್ಬಿಟ್ಟ ಮಸಾಲೆ ಹಾಗು ತೆಗೆದಿಟ್ಟ ಸಿಗಡಿ ನೀರು ಮತ್ತು ರುಚಿಗೆ ಬೇಕಾದಷ್ಟು ಉಪ್ಪನ್ನು ಸೇರಿಸಿ ಫ್ರೈ ಮಾಡಿ.

ನಂತರ ಬೆಂದ ಸಿಗಡಿಯನ್ನು ಸೇರಿಸಿ ಅದಕ್ಕೆ 2 ಚಮಚ ತುಪ್ಪ ಬೆರೆಸಿ ಕೊನೆಗೆ ಕರಿಬೇವು ಹಾಕಿದರೆ ಬಿಸಿ-ಬಿಸಿಯಾದ ಸಿಗಡಿ ಘೀ ರೋಸ್ಟ್‌ ಸವಿಯಲು ಸಿದ್ಧ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.