ಮತ ಜಾಗೃತಿ; ಕೈಯಲ್ಲಿ ಎಷ್ಟು ಹಣ ಸಾಗಿಸಬಹುದು?
Team Udayavani, Apr 4, 2023, 6:52 AM IST
ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಘೋಷಣೆಯಾಗಿದ್ದು, ಈಗ ಹಣ ಸಾಗಾಟದ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಇದರ ನಡುವೆಯೇ ದಾಖಲೆ ಇಲ್ಲದ ನಗದು ಜಪ್ತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಹಣದ ಜರೂರತ್ತಿನಿಂದಾಗಿ ಕೆಲವರು ಕೈಯಲ್ಲಿ ನಗದು ಇರಿಸಿಕೊಂಡು ಹೋಗುತ್ತಿರುತ್ತಾರೆ. ಇಂಥವರು ಸಿಕ್ಕಿಬಿದ್ದು ನಾನಾ ಸಂಕಷ್ಟ , ಕಿರಿಕಿರಿ ಅನುಭವಿಸುತ್ತಾರೆ. ಇಂತಹ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಬಳಿ ಕೈಯಲ್ಲಿ ನಗದು ಎಷ್ಟಿರಬೇಕು, ಹೆಚ್ಚು ನಗದು ಇದ್ದರೆ ಏನಾಗುತ್ತದೆ ಎಂಬ ಬಗ್ಗೆ ಪ್ರಶ್ನೆಗಳು ಏಳುವುದು ಸಹಜ. ಈ ಬಗ್ಗೆ ಇಲ್ಲಿದೆ ಮಾಹಿತಿ.
ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ದಾಖಲೆಗಳು ಇಲ್ಲದೇನೆ ತನ್ನ ಬಳಿ ಗರಿಷ್ಠ 50 ಸಾವಿರ ರೂ. ನಗದು ಇಟ್ಟುಕೊಳ್ಳಬಹುದು. 50 ಸಾವಿರ ಮೇಲ್ಪಟ್ಟು ಇದ್ದರೆ ಅದಕ್ಕೆ ಸಮರ್ಪಕ ದಾಖಲೆಗಳನ್ನು ಹೊಂದಿರಬೇಕು. ಆರ್ಬಿಐ ಮಾರ್ಗಸೂಚಿಗಳ ಪ್ರಕಾರ 2 ಲಕ್ಷ ಮೇಲ್ಪಟ್ಟು ಮೊತ್ತದ ನಗದು ರೂಪದಲ್ಲಿ ಪಾವತಿಗಳನ್ನು ಮಾಡುವಂತಿಲ್ಲ.
ಚೆಕ್, ಡಿಡಿ ಅಥವಾ ಆನ್ಲೈನ್ ಮೂಲಕವೇ ಪಾವತಿ ಆಗಬೇಕು. ಇಲ್ಲದಿದ್ದರೆ ಐಟಿ ನಿಯಮಗಳು ಸಹಿತ ಇತರ ಕಾನೂನು-ನಿಯಮಗಳ ಅನ್ವಯ ಕ್ರಮ ಜರಗಿಸಬೇಕಾಗುತ್ತದೆ. ಹಾಗೆ ನೋಡಿದರೆ ದಾಖಲೆಗಳಿಲ್ಲದೆ 50 ಸಾವಿರದವರೆಗೆ ನಗದು ಇಟ್ಟುಕೊಳ್ಳುವುದು, 50 ಸಾವಿರ ಮೇಲ್ಪಟ್ಟು ನಗದು ಇದ್ದರೆ ಸಮರ್ಪಕ ದಾಖಲೆಗಳನ್ನು ಇಟ್ಟುಕೊಳ್ಳುವುದು, 2 ಲಕ್ಷ ಮೇಲ್ಪಟ್ಟ ಪಾವತಿಗಳನ್ನು ನಗದು ರೂಪದಲ್ಲಿ ಮಾಡುವಂತಿಲ್ಲ ಎಂಬ ನಿಯಮಗಳು ಈಗಾಗಲೇ ಚಾಲ್ತಿಯಲ್ಲಿವೆ. ಆದರೆ ಚುನಾವಣ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇದಕ್ಕೆ ಮಹತ್ವ ಸಿಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ