ಹೀಗೂ ಉಂಟು: ಸಮಕಾಲೀನರಲ್ಲಿ ಓರ್ವ ಸಿಎಂ ಆದರೂ ಮತ್ತೊಬ್ಬರಿಗೆ ಸಚಿವ ಸ್ಥಾನವೂ ಸಿಗಲಿಲ್ಲ!
ಬೆಳ್ತಂಗಡಿ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗ ಮೊದಲ ಶಾಸಕರಾಗಿ ಡಿ. ರತ್ನವರ್ಮ ಹೆಗ್ಗಡೆ ಚುನಾಯಿತರಾದರು.
Team Udayavani, Apr 4, 2023, 1:41 PM IST
ಬೆಳ್ತಂಗಡಿ: ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ 15 ಬಾರಿ ಶಾಸಕತ್ವಕ್ಕೆ ಚುನಾವಣೆ ನಡೆದಿದ್ದು, 8 ಮಂದಿ ಶಾಸಕರಾಗಿದ್ದಾರೆ. 1952ರಲ್ಲಿ ಮದ್ರಾಸ್ ಪ್ರಾಂತ್ಯದ ಭಾಗವಾಗಿ ನಡೆದ ಚುನಾವಣೆಯಲ್ಲಿ ಪುತ್ತೂರು ವಿ.ಸ. ಕ್ಷೇತ್ರದ ಭಾಗವಾಗಿತ್ತು. ಬಳಿಕ 1957ರಲ್ಲಿ ಸ್ವತಂತ್ರ್ಯ ಬೆಳ್ತಂಗಡಿ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗ ಮೊದಲ ಶಾಸಕರಾಗಿ ಡಿ. ರತ್ನವರ್ಮ ಹೆಗ್ಗಡೆ ಚುನಾಯಿತರಾದರು.
1962, 67ರಲ್ಲಿ ವೈಕುಂಠ ಬಾಳಿಗ ಶಾಸಕರಾಗಿದ್ದರು. 1968ರಲ್ಲಿ ಕೆ. ಚಿದಾನಂದ ಪೂಜಾರಿ ಶಾಸಕರಾದರು. 1972ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆ. ಸುಬ್ರಹ್ಮಣ್ಯ ಗೌಡ ಆಯ್ಕೆಯಾದರು. 1978ರ ಚುನಾವಣೆಯಲ್ಲಿ ಕೆ. ಗಂಗಾಧರ ಗೌಡ ಕಾಂಗ್ರೆಸ್ನಲ್ಲಿ ಗೆಲುವು ಸಾಧಿಸಿದ್ದಲ್ಲದೆ, ಬೆಳ್ತಂಗಡಿ ತಾ|ನಿಂದ ಗೆದ್ದು ಅತೀ ಕಿರಿಯ ಸಚಿವರಾಗಿ ಅನುಭವ ಹೊಂದಿದ ಏಕಮಾತ್ರ ಶಾಸಕರು ಎಂಬ ದಾಖಲೆ ಅವರ ಹೆಸರಲ್ಲೇ ಉಳಿದಿದೆ.
ಅಂದು 28ನೇ ವಯಸ್ಸಿನಲ್ಲಿ ಅವರು ಯುವಜನ ಸೇವೆ ಮತ್ತು ಕ್ರೀಡಾ ಸಚಿವರಾಗಿದ್ದರು. 1989ರಲ್ಲಿ ಮತ್ತೆ ಸ್ಪರ್ಧಿಸಿದ ಕೆ.ಗಂಗಾಧರ ಗೌಡರು ಎರಡನೇ ಬಾರಿಗೆ ಶಾಸಕರಾದರು. ಬಳಿಕ ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿದವರು ಕೆ. ವಸಂತ ಬಂಗೇರ. 1983ರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದರು. 1985ರಲ್ಲಿ ಮತ್ತೆ ಚುನಾಯಿತರಾದರು. ಅಂದು ರಾಜ್ಯದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದ ಇಬ್ಬರಲ್ಲಿ ಒಬ್ಬರು ಕೆ. ವಸಂತ ಬಂಗೇರರು
ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು. ಸಮಕಾಲೀನರಾಗಿರುವ ಇವರಲ್ಲಿ ಯಡಿಯೂರಪ್ಪ ಹಲವು ಬಾರಿ ಶಾಸಕರಾಗಿ, ಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದರೆ, ಬಂಗೇರ ಅವರು ಬಿಜೆಪಿ, ಜನತಾದಳ, ಕಾಂಗ್ರೆಸ್ನಿಂದ ಸ್ಪರ್ಧಿಸಿದರೂ ಸಚಿವರಾಗುವ ಕನಸು ಈಡೇರಿಲ್ಲ.
– ಚೈತ್ರೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ