ಮಾದರಿಯಾದ “ಹಾಲಾಡಿ ಮಾಡೆಲ್‌’


Team Udayavani, Apr 5, 2023, 6:10 AM IST

ರಾಜಕಾರಣಿಗೆ ಮಾದರಿಯಾದ “ಹಾಲಾಡಿ ಮಾಡೆಲ್‌’

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಅಭ್ಯರ್ಥಿ ಆಯ್ಕೆಗಾಗಿ ಅನ್ಯ ರಾಜ್ಯಗಳ “ಮಾದರಿ’ ಹುಡುಕುತ್ತಿರುವ ಬಿಜೆಪಿಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಈಗ ದೊಡ್ಡ “ಮಾಡೆಲ್‌’ ಆಗಿ ಪರಿಣಮಿಸಿದ್ದಾರೆ. ಶಾಸಕ, ಸಂಸದ, ಸಚಿವರಾಗಿಯೇ “ಕೊನೆಯ ಉಸಿರಾಡಬೇಕು’ ಎಂಬ ಹಪಹಪಿಕೆಯ ರಾಜಕಾರಣಿಗಳ ಮಧ್ಯೆ ಹಾಲಾಡಿಯವರ ಈ ನಡೆ ಹೊಸ ಮಾರ್ಗವನ್ನು ಸೃಷ್ಟಿಸಿದ್ದು, ರಾಜಕಾರಣದಲ್ಲಿ ಇಂಥವರು ಇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರವಾಗಿ ನಿಂತಿದ್ದಾರೆ.

“ಕುಂದಾಪುರದ ವಾಜಪೇಯಿ’ ಎಂದೇ ಜನಜನಿತರಾಗಿದ್ದ ಹಾಲಾಡಿ ಸತತ ಐದು ಬಾರಿಗೆ ಗೆಲುವು ಕಂಡವರು. ಸ್ವಂತ ಭೂಮಿ ಮಾರಿ ರಾಜಕೀಯ ನಡೆಸಿದವರು. “ಸ್ವಂತಕ್ಕೆ ಸ್ವಲ್ಪ’ ಎಂಬ ಮಾತು ಅವರಿಗೆ ಹೆಚ್ಚು ಅನ್ವಯವಾಗುತ್ತಿತ್ತು. ಬಿಜೆಪಿಯ ಅಧಿಕಾರ ರಾಜಕಾರಣದ ಲಾಬಿಯಲ್ಲಿ ಅವರಿಗೆ “ಮಂತ್ರಿ’ಯಾಗುವ ಅವಕಾಶ ಲಭಿಸದೇ ಇದ್ದರೂ ಜನರ ಹೃದಯದಲ್ಲಿ “ರಾಜ’ನಾಗಿಯೇ ಇದ್ದರು. ಸ್ಪರ್ಧಿಸಿದ್ದೇ ಹೌದಾದರೆ ಈ ಬಾರಿಯೂ ಗೆಲುವು ನಿಶ್ಚಿತವಾಗಿತ್ತು. ಹಾಗಿದ್ದೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಒಂದಿಷ್ಟು ಬದಲಾವಣೆ ನಿರೀಕ್ಷಿತ ಎಂಬ ಸುದ್ದಿ ಹೊರಬಿದ್ದಾಗ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಸಲ ಟಿಕೆಟ್‌ ಇಲ್ಲ ಎಂಬ ಚರ್ಚೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗಾಢವಾಗಿತ್ತು. ಈ ವರ್ಷ ಅವರಿಗಂತೆ, ಇವರಿಗಂತೆ ಎಂಬ ವದಂತಿ ಜೀವಂತವಾಗಿರುವಾಗಲೇ “ನಾನು ಸ್ಪರ್ಧಿಸುವುದಿಲ್ಲ’ ಎಂದು ಸ್ವಯಂ ಘೋಷಣೆ ಮೂಲಕ ಶ್ರೀನಿವಾಸ್‌ ಶೆಟ್ಟರು ಅಚ್ಚರಿ ಮೂಡಿಸಿದ್ದಾರೆ.

ಸ್ವಯಂ ಆಗಿರಲಿ, ಕಡ್ಡಾಯವಾಗಿರಲಿ ಅಥವಾ ವಯೋ ಸಹಜವೇ ಆಗಿರಲಿ “ನಿವೃತ್ತಿ’ ಎಂಬ ಪದ ಅಧಿಕಾರ ಗದ್ದುಗೆ ಏರಿದವರಿಗೆ ಅಪಥ್ಯವಷ್ಟೇ ಅಲ್ಲ ಸಂಕಟದಾಯಕವೂ ಹೌದು! ನಿವೃತ್ತಿ ಅನಿವಾರ್ಯವಾಗಿದ್ದಾಗ ಕಣ್ಣೀರಿಟ್ಟವರನ್ನು, ನಿವೃತ್ತಿ ಘೋಷಿಸಿದ ಬಳಿಕವೂ ಹತ್ತು ವರ್ಷ ಮೇಲ್ಪಟ್ಟು ಸಕ್ರಿಯ ರಾಜಕಾರಣದಲ್ಲೇ ಇರುವಂಥವರನ್ನೂ ಕರ್ನಾಟಕದ ಜನ ಕಂಡಿದ್ದಾರೆ. ಆದರೆ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಯಾವುದೇ ರಂಗಸ್ಥಳವನ್ನು ಸೃಷ್ಟಿಸದೇ ಪಕ್ಷಕ್ಕೊಂದು ಪತ್ರ ಕೊಟ್ಟು ನೇಪಥ್ಯಕ್ಕೆ ಸರಿದಿದ್ದಾರೆ. ಅವರ ಹಾದಿಯಲ್ಲಿ ಬಿಜೆಪಿಯ ಇನ್ನೊಬ್ಬ ಹಿರಿಯ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಎಸ್‌.ಎ.ರವೀಂದ್ರನಾಥ್‌ ಕೂಡಾ ಹೆಜ್ಜೆಯಿಟ್ಟಿದ್ದಾರೆ. ಹೀಗಾಗಿ ಬಿಜೆಪಿಯ ಇನ್ನಷ್ಟು ನಾಯಕರು ಇದೇ ಹಾದಿಯಲ್ಲಿ ಸಹಪ್ರಯಾಣಿಕರಾಗಬಹುದೇ ಎಂಬ ಕುತೂಹಲ ಈಗ ಸೃಷ್ಟಿಯಾಗಿದೆ.

ಕಂಗಾಲು:
ಈ ಬಾರಿ ಚುನಾವಣೆಯಲ್ಲಿ ಗುಜರಾತ್‌ ಮಾದರಿಯಂತೆ, ಯುಪಿ ಮಾದರಿಯಂತೆ ಎಂದೆಲ್ಲ ಟಿವಿ ವಾಹಿನಿಯಲ್ಲಿ ವಿಶ್ಲೇಷಣೆ ನಡೆಸುತ್ತಿದ್ದ ಬಿಜೆಪಿಯ “ಬೌದ್ಧಿಕ’ರು ಅಧಿವೇಶನ ಸಂದರ್ಭದಲ್ಲಿ ಬಣ್ಣ ಬಣ್ಣದ “ಗಾಳಿಪಟ’ ಹೆಣೆಸುವ ಕೇಸರಿ ಪಕ್ಷದ ಶಾಸಕರಿಗೆ ತ್ಯಾಗದ ಪ್ರಶ್ನೆ ಬಂದಾಗ ಯಾವ ಮಾದರಿಯೂ ಸವಿಯೆನಿಸುತ್ತಿರಲಿಲ್ಲ. ಆದರೆ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿರುವ ಹಲವರು ಹಾಲಾಡಿ ಮಾಡೆಲ್‌ನಿಂದ ಕಂಗಾಲಾಗಿರುವುದಂತೂ ಸುಳ್ಳಲ್ಲ. ಹಲವು ವರ್ಷಗಳ ಕಾಲ ಶಾಸಕರಾಗಿ, ಸಂಸದರಾಗಿ ವಿಧಾನಸೌಧದ ಹಾದಿ ಸವೆಸಿದವರಿಗೆ ಈ ದಾರಿಯಲ್ಲಿ ನಡೆಯಿರಿ ಎಂದು ವರಿಷ್ಠರೇ ಪತ್ರ ಬರೆಸುವ ಸಾಧ್ಯತೆ ನಿಚ್ಚಳವಾಗಿದೆ.

ಈಗಾಗಲೇ ಬಿಜೆಪಿಯ ಡಜನ್‌ಗಟ್ಟಲೇ ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಇದೆ. ಈ ಪಟ್ಟಿಯಲ್ಲಿ ಮಾಜಿ ಸಿಎಂ, ಡಿಸಿಎಂ, ಹಾಲಿ ಸಚಿವರೂ ಇದ್ದಾರೆ. ಏಪ್ರಿಲ್‌ 9ರೊಳಗಾಗಿ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವುದಕ್ಕೆ ಮುನ್ನ “ಹಾಲಾಡಿ ಮಾಡೆಲ್‌’ ಪತ್ರಗಳು ಇನ್ನಷ್ಟು ಪ್ರಕಟಗೊಳ್ಳಬಹುದೆಂಬ ಮಾತು ಬಿಜೆಪಿ ಪಡಸಾಲೆಯಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ. ನಿವೃತ್ತಿಯ ಪ್ರಶ್ನೆಯೇ ಇಲ್ಲ ಎಂದು ಬೀಗುತ್ತಿದ್ದ ರಾಜಕಾರಣಿಗಳನ್ನು ಸದ್ದಿಲ್ಲದೇ ಬದಿಗೆ ಸರಿಸುವುದಕ್ಕೆ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರ ನಡೆ ಬಿಜೆಪಿ ವರಿಷ್ಠರಿಗೆ ಈಗ ದಿವ್ಯಾಸ್ತ್ರವಾಗಿ ಪರಿಣಮಿಸಿದೆ. ಕುತೂಹಲಕಾರಿ ಸಂಗತಿ ಎಂದರೆ ಬಿಜೆಪಿಯ ಭದ್ರಕೋಟೆ ಎನಿಸಿದ ಕರಾವಳಿ-ಮಲೆನಾಡು ಜಿಲ್ಲೆಯ “ಹಿರಿತಲೆಗಳೇ’ ಈ ಪ್ರಯೋಗಕ್ಕೆ ಶರಣಾಗಬಹುದು.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.