Hunsur News:ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ 7 ಕರುಗಳ ರಕ್ಷಣೆ, ವಾಹನ ವಶ, ಚಾಲಕ ಪರಾರಿ
Team Udayavani, Apr 5, 2023, 10:35 AM IST
ಹುಣಸೂರು: ಟಾಟಾ ಏಸ್ ವಾಹನದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಏಳು ಕರುಗಳನ್ನು ರಕ್ಷಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.
ನಗರದ ಪೋಲಿಸ್ ಇನ್ಸ್ಪೆಕ್ಟರ್ ದೇವೆಂದ್ರ ಹಾಗೂ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವೇಳೆ ಟಾಟಾ ಎಸ್ ಗೂಡ್ಸ್ ವಾಹನದಲ್ಲಿ ಕರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ರತ್ನಪುರಿ ರಸ್ತೆಯ ಸಲೀಂ ಪ್ಯಾಲೆಸ್ ಬಳಿ ಗೂಡ್ಸ್ ವಾಹನವನ್ನು ನಿಲ್ಲಿಸಲು ಸೂಚಿಸುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿ ಕತ್ತಲಿನಲ್ಲೇ ಪರಾರಿಯಾಗಿದ್ದಾನೆ.
ವಾಹನದ ಟಾರ್ಪಲ್ ತೆಗೆದು ನೋಡಿದ ವೇಳೆ ಏಳು ಕರುಗಳು ಪತ್ತೆಯಾಗಿದ್ದು, ವಾಹನ ಮತ್ತು ಕರುಗಳನ್ನು ಪೋಲಿಸರು ವಶಕ್ಕೆ ಪಡೆದು ಕರುಗಳನ್ನು ಮೈಸೂರಿನ ಪಿಂಜರಾ ಪೋಲ್ಗೆ ಕಳುಹಿಸಿ ಕೊಡಲಾಗಿದೆ.
ವಾಹನ ಮಾಲಿಕ ಪ್ರಕಾಶ್ ಮತ್ತು ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು