New Born Baby; ಹೆರಿಗೆ ಆದ ಕೂಡಲೇ ಶಿಶುವನ್ನು ಬಕೆಟ್ಗೆ ಹಾಕಿದ ಮಹಾ ತಾಯಿ!
ನವಜಾತ ಶಿಶುವನ್ನು ರಕ್ಷಿಸಿದ ಕೇರಳ ಪೊಲೀಸರು, ನರ್ಸಿಂಗ್ ಹೋಂ ಸಿಬ್ಬಂದಿ
Team Udayavani, Apr 6, 2023, 7:30 AM IST
ಚೆಂಗನ್ನೂರ್: ಮನೆಯ ಸ್ನಾನದ ಕೊಠಡಿಯಲ್ಲಿ ಬಕೆಟ್ವೊಂದರಲ್ಲಿ ಹಾಕಲಾಗಿದ್ದ ನವಜಾತ ಶಿಶುವೊಂದು ಕೇರಳ ಪೊಲೀಸರು ಮತ್ತು ಖಾಸಗಿ ನರ್ಸಿಂಗ್ ಹೋಂ ವೈದ್ಯರ ಸಮಯಪ್ರಜ್ಞೆಯಿಂದಾಗಿ ಬದುಕುಳಿಯಲು ಸಾಧ್ಯವಾಗಿದೆ.
ಪಟ್ಟಣಂತಿಟ್ಟ ಜಿಲ್ಲೆಯ ಕೊಟ್ಟ ಎಂಬ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತನಗೆ ತೀವ್ರ ರಕ್ತಸ್ರಾವವಾಗುತ್ತಿದ್ದು, ಚಿಕಿತ್ಸೆ ನೀಡಿ ಎಂದು ಕೋರಿ 34 ವರ್ಷದ ಮಹಿಳೆ ಚೆಂಗನ್ನೂರು ನರ್ಸಿಂಗ್ ಹೋಂಗೆ ಆಗಮಿಸಿದ್ದರು. ಆಕೆಯನ್ನು ಪರೀಕ್ಷಿಸಿದಾಗ, ಆಕೆಗೆ ಸ್ವಲ್ಪ ಹೊತ್ತಿಗೆ ಮುಂಚೆಯಷ್ಟೇ ಹೆರಿಗೆಯಾಗಿದ್ದು ವೈದ್ಯರಿಗೆ ಗೊತ್ತಾಯಿತು.
ಕೂಡಲೇ, ಮಗು ಎಲ್ಲಿದೆ ಎಂದು ಆಕೆಯನ್ನು ಪ್ರಶ್ನಿಸಲಾಯಿತು. ಮಹಿಳೆಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಆಕೆಯ 9 ವರ್ಷದ ಮಗ, “ಮಗುವನ್ನು ಅಮ್ಮ ಮನೆಯ ಬಾತ್ರೂಂನಲ್ಲಿ ಬಕೆಟ್ಗೆ ಹಾಕಿಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ.
ಇದನ್ನು ಕೇಳಿ ಗಾಬರಿಗೊಂಡ ಆಸ್ಪತ್ರೆಯ ಸಿಬ್ಬಂದಿ, ಸ್ವಲ್ಪವೂ ತಡಮಾಡದೇ ಆಕೆಯ ಮನೆಗೆ ಧಾವಿಸಿ, ಮಗುವನ್ನು ಎತ್ತಿಕೊಂಡು ನರ್ಸಿಂಗ್ ಹೋಂಗೆ ಶಿಫ್ಟ್ ಮಾಡಿದರು.
ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಶಿಶುವನ್ನು ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಈ ಮೂಲಕ ಮಗುವಿನ ಜೀವವನ್ನು ಉಳಿಸಲಾಯಿತು. ಪೊಲೀಸರು ಬಾತ್ರೂಂನಿಂದ ಶಿಶುವನ್ನು ಎತ್ತಿಕೊಂಡು ರಸ್ತೆಗೆ ಧಾವಿಸುತ್ತಿರುವ, ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Kerala | Police in Chengannur of Alappuzha district rescued a newborn abandoned by its mother in a bucket at her home. The woman reached the hospital after delivery at home and informed the hospital authorities that she left her newborn alive in a bucket in the bathroom of her… pic.twitter.com/ffGsQFFh4s
— ANI (@ANI) April 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ