Supreme Court: ಜಡ್ಜ್ಗಳ ವಿರುದ್ಧ ದೂರು ಸಲ್ಲಿಕೆಯಾಗುತ್ತಾ ಇರುತ್ತದೆ!
ಸುಪ್ರೀಂಕೋರ್ಟ್ನ ಕೆಲವು ನಿವೃತ್ತ ಜಡ್ಜ್ಗಳು ಭಾರತ ವಿರೋಧಿ ಗುಂಪಿನ ಸದಸ್ಯರೇ ಎಂಬ ಪ್ರಶ್ನೆಗೆ ರಿಜಿಜು ಉತ್ತರ ಮಾಹಿತಿ
Team Udayavani, Apr 8, 2023, 7:19 AM IST
ನವದೆಹಲಿ: ಕೇಂದ್ರ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಹಾಲಿ ಮತ್ತು ನಿವೃತ್ತ ನ್ಯಾಯಮೂರ್ತಿಗಳ ವಿರುದ್ಧ ದೂರುಗಳು ಸಲ್ಲಿಕೆಯಾಗುತ್ತಲೇ ಇರುತ್ತವೆ. ಆದರೆ ಕೇಂದ್ರ ಸರ್ಕಾರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಸಂದರ್ಭದಲ್ಲಿ ಅವರ ಸೇವಾವಧಿಯಲ್ಲಿನ ವಿಚಾರಗಳನ್ನು ಮಾತ್ರ ಪರಿಗಣಿಸುತ್ತದೆ ಎಂದು ಕಾನೂನು ಮತ್ತು ನ್ಯಾಯ ಖಾತೆ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಗುರುವಾರ “ಸುಪ್ರೀಂಕೋರ್ಟ್ನ ಕೆಲವು ನಿವೃತ್ತ ನ್ಯಾಯಮೂರ್ತಿಗಳು ಭಾರತ ವಿರೋಧಿ ಗುಂಪಿಗೆ ಸೇರಿಕೊಂಡಿದ್ದಾರೆಯೇ’ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಇದರ ಜತೆಗೆ ಸಚಿವರಿಗೆ ಯಾವ ಮೂಲದಿಂದ ಮಾಹಿತಿ ಲಭ್ಯವಾಗುತ್ತದೆ ಎಂದೂ ಪ್ರಶ್ನಿಸಲಾಗಿತ್ತು. ಜತೆಗೆ ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮಾಹಿತಿ ನೀಡಲಾಗಿದೆಯೇ ಎಂದು ಪ್ರಶ್ನಿಸಲಾಗಿದೆ.
ಗಮನಾರ್ಹ ವಿಚಾರವೆಂದರೆ ಇಂಗ್ಲಿಷ್ನಲ್ಲಿ ನೀಡಲಾಗಿರುವ ಉತ್ತರದಲ್ಲಿ ಕೇಳಲಾಗಿರುವ ನಾಲ್ಕು ಉಪ- ಪ್ರಶ್ನೆಗೆ ರಿಜಿಜು ಉತ್ತರ ನೇರ ಉತ್ತರ ನೀಡಿರಲಿಲ್ಲ. ಆದರೆ, ಹಿಂದಿಯಲ್ಲಿ ನೀಡಲಾಗಿರುವ ಉತ್ತರದಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO
Casino Financial Institution Repayment Methods: A Comprehensive Guide
How to Play Roulette Free Online