karnataka polls 2023; ಮರಗಳಿದ್ದರೂ ಹಾರಲಿಕ್ಕೆ ರೆಂಬೆ-ಕೊಂಬೆಗಳೇ ಕಡಿಮೆ


Team Udayavani, Apr 8, 2023, 3:38 PM IST

karnataka polls 2023; ಮರಗಳಿದ್ದರೂ ಹಾರಲಿಕ್ಕೆ ರೆಂಬೆ-ಕೊಂಬೆಗಳೇ ಕಡಿಮೆkarnataka polls 2023; ಮರಗಳಿದ್ದರೂ ಹಾರಲಿಕ್ಕೆ ರೆಂಬೆ-ಕೊಂಬೆಗಳೇ ಕಡಿಮೆ

ಮಂಗಳೂರು: ಒಂದು ಪಕ್ಷದಲ್ಲಿ ಭಿನ್ನಾಭಿಪ್ರಾಯ ಜೋರಾ ದಾಗ ನಾಯಕನೊಬ್ಬ ಆ ಪಕ್ಷಕ್ಕೆ ವಿದಾಯ ಹೇಳಿ ಇನ್ನೊಂದು ಪಕ್ಷ ಸೇರುವುದು, ಅಥವಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ರಾಜ್ಯದಲ್ಲಿ ಈಗೀಗ ಸಾಮಾನ್ಯ.

ಈ ಚುನಾವಣೆ ಸಂದರ್ಭದಲ್ಲಂತೂ ಅವಕಾಶವಾದಿಗಳಾಗಿ ಗೋಚರಿಸುವ ರಾಜಕಾರಣಿಗಳು ಸಾಕಷ್ಟು ಮಂದಿ ಇದ್ದಾರೆ. ಕೆಲವರು ಅಸಮಾಧಾನವನ್ನು ಚುನಾ ವಣೆ ಸಂದರ್ಭದಲ್ಲಿ ಪಕ್ಷಾಂತರ ಮಾಡುವ ಮೂಲಕ ಹೊರಹಾಕುತ್ತಾರೆ.

ಹಾಗೆ ನೋಡಿದರೆ ಹಿಂದಿನಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷಾಂತರ ಇಲ್ಲವೇ ಇಲ್ಲ ಎಂದಲ್ಲ, ಆದರೆ ಅಂತಹ ಬೆಳವಣಿಗೆಗಳು ಅಪರೂಪ. ಬರುತ್ತಾ ಬರುತ್ತಾ ಎರಡೇ ಪಕ್ಷಗಳ ನೇರ ಹೋರಾಟದ ಕಣವಾಗಿ ಮಾರ್ಪಟ್ಟಿರುವ ಇಲ್ಲಿ ಸೈದ್ಧಾಂತಿಕವಾಗಿ ಒಂದು ಪಕ್ಷವನ್ನು ಒಪ್ಪಿಕೊಂಡವರು ಮತ್ತೆ ಅದರಿಂದ ಹೊರಗೆ ಬರುವುದು ಕಷ್ಟ. ಹಾಗಾಗಿ ಈಚೆಗಿನ ವರ್ಷಗಳಲ್ಲಿ ಪಕ್ಷಾಂತರ ರಾಜಕೀಯ ಕಡಿಮೆ.

ಬೆಳ್ತಂಗಡಿಯಲ್ಲೇ ಇಬ್ಬರು
ಪ್ರಮುಖವಾಗಿ ನೋಡಿದರೆ ಬೆಳ್ತಂಗಡಿಯ ಹಿರಿಯ ರಾಜ ಕಾರಣಿ ವಸಂತ ಬಂಗೇರ 3 ಪಕ್ಷಗಳಲ್ಲಿ ಈಜಿದವರು. ಆರಂಭದಲ್ಲಿ ಬಿಜೆಪಿಯಲ್ಲಿದ್ದು ಸ್ಪರ್ಧಿಸಿ ಶಾಸಕರಾದವರು. 1983 ಹಾಗೂ 1985ರಲ್ಲಿ ಎರಡು ಬಾರಿ ಬಿಜೆಪಿಯನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸಿ ದವರು. ಆ ಬಳಿಕ ಬಿಜೆಪಿಯಿಂದ ಹೊರಗೆ ಬಂದು ಜನತಾ ಪರಿವಾರ ಸೇರಿದರು. 1989ರಲ್ಲಿ ಜನತಾ ದಳದಿಂದ ಸ್ಪರ್ಧಿ ಸಿದರೂ ಗೆಲುವು ದಕ್ಕಲಿಲ್ಲ, ಆದರೆ 1994ರಲ್ಲಿ ಮತ್ತೆ ಅದೇ ಪಕ್ಷದಲ್ಲಿದ್ದು ಗೆದ್ದು ಬಂದರು. 1999ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. 2004ರಲ್ಲೂ ಜೆಡಿಎಸ್‌ನಿಂದಲೇ ಮತ್ತೆ ಸ್ಪರ್ಧೆ, 3ನೇ ಸ್ಥಾನಕ್ಕೇ ತೃಪ್ತಿ. 2008ರಲ್ಲಿ ಕಾಂಗ್ರೆಸ್‌ ಸೇರಿ ಸ್ಪರ್ಧಿಸಿ ಮತ್ತೆ ಶಾಸಕರಾದರು. 2013ರಲ್ಲೂ ಅಲ್ಲೇ ಶಾಸಕರಾದರು.

ಇನ್ನು ಅವರದ್ದೇ ಕ್ಷೇತ್ರದವರು, ಮಾಜಿ ಸಚಿವ ಗಂಗಾಧರ ಗೌಡರೂ ಕಾಂಗ್ರೆಸ್‌ನಲ್ಲಿದ್ದು 1978, 1989 ಎರಡು ಬಾರಿ ಶಾಸಕರಾದವರು. ಆದರೆ 2008ರಲ್ಲಿ ಜೆಡಿಎಸ್‌ ಸೇರಿ ಸ್ಪರ್ಧಿಸಿ, ಅವರೂ ತೃತೀಯ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಬಳಿಕ 2013ರ ವೇಳೆಗೆ ಬಿಜೆಪಿ ಸೇರಿದ ಅವರ ಪುತ್ರ ರಂಜನ್‌ ಗೌಡ ಸ್ಪರ್ಧಿಸಿ ಸೋತರು. ಬಳಿಕ ರಂಜನ್‌ ರಾಜಕೀಯದಲ್ಲಿ ಸಕ್ರಿಯರಾಗಿಲ್ಲ, ಗಂಗಾಧರ ಗೌಡ ಮತ್ತೆ ಕಾಂಗ್ರೆಸ್‌ ಸೇರಿ ಸಕ್ರಿಯರಾಗಿದ್ದಾರೆ.

ಶಕುಂತಳಾ ಶೆಟ್ಟಿ
ಈಚೆಗಿನ ರಾಜಕೀಯದಲ್ಲಿ ಮತ್ತೂಂದು ಪಕ್ಷಾಂತರದ ಉದಾಹರಣೆ ಶಕುಂತಳಾ ಶೆಟ್ಟಿ. ಪ್ರಬಲ ಹಿಂದುತ್ವದೊಂದಿಗೆ ಬಿಜೆಪಿ ಶಾಸಕಿಯಾಗಿ ಪುತ್ತೂರಿನಿಂದ 2004ರಲ್ಲಿ ಗೆದ್ದು ಬಂದವರು. 2008ರಲ್ಲಿ ಟಿಕೆಟ್‌ ಸಿಗದಿದ್ದಾಗ ತಮ್ಮ ರಾಜಕೀಯ ಗುರು ಮಾಜಿ ಶಾಸಕ ಉರಿಮಜಲು ರಾಮ ಭಟ್ಟರ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧಿಸಿದರೂ ಯಶಸ್ವಿಯಾಗಲಿಲ್ಲ. ಮತ್ತೆ ಶಕುಂತಳಾ ಶೆಟ್ಟಿ ಸೇರಿದ್ದು ಕಾಂಗ್ರೆಸ್‌ ಪಾಳಯವನ್ನು. 2013ರಲ್ಲಿ ಶಕುಂತಳಾ ಶೆಟ್ಟರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾದರು. 2018ರಲ್ಲಿ ಸೋತಿದ್ದಾರೆ, ಈ ಬಾರಿಯೂ ಕಣದಲ್ಲಿ ಆಕಾಂಕ್ಷಿಯಾಗಿದ್ದಾರೆ.

ಬಿ. ನಾಗರಾಜ ಶೆಟ್ಟಿ
ಉಳಿದಂತೆ ಪ್ರಮುಖರು ಪಕ್ಷಾಂತರವಾಗಿದ್ದು, ಆಗಿ ಯಶಸ್ಸು ಕಂಡಿದ್ದು ಕಡಿಮೆ. ಬಿಜೆಪಿಯಲ್ಲಿ ಸಚಿವರಾಗಿದ್ದ ಬಿ.ನಾಗರಾಜ ಶೆಟ್ಟಿಯವರು ಬಿಜೆಪಿಯಲ್ಲಿ ಅಸಮಾಧಾನಗೊಂಡು ಜೆಡಿಎಸ್‌ಗೆ 2012ರಲ್ಲಿ ಸೇರ್ಪಡೆಯಾದರು. ಆದರೆ ಅಲ್ಲಿನ ರಾಜಕೀಯಕ್ಕೆ ಬೇಸತ್ತು ಮರುವರ್ಷವೇ ರಾಜೀನಾಮೆ ಕೊಟ್ಟರು. ಮತ್ತೆ
ಬಿಜೆಪಿಗೆ ಸೇರಿದರು.

ವೇಣುವಿನೋದ್‌ ಕೆ. ಎಸ್‌.

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.