BJPಗೆ ಅಧಿಕಾರ ನೀಡಿದರೆ ರಾಮರಾಜ್ಯ ಪರಿಕಲ್ಪನೆ ಸಾಕಾರ: ಡಾ| ಸುಧಾಕರ್
Team Udayavani, Apr 9, 2023, 7:26 AM IST
ಬೆಂಗಳೂರು: ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಗೆ ಅಧಿಕಾರ ನೀಡಿದರೆ ಐದು ವರ್ಷಗಳಲ್ಲಿ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ| ಸುಧಾಕರ್ ಅಭಿಪ್ರಾಯಪಟ್ಟರು.
ರಾಜ್ಯಕ್ಕೆ ಸಮ್ಮಿಶ್ರ ಸರಕಾರವು ಶಾಪವಾಗಿದೆ. ಇಂತಹ ಸರಕಾರಗಳಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ಕೇಂದ್ರದಲ್ಲಿರುವ ಪಕ್ಷದ ಸರಕಾರವೇ ರಾಜ್ಯದಲ್ಲೂ ಇದ್ದರೆ ಅನುದಾನ ತರಲು, ಯೋಜನೆ ನೀಡಲು ಸುಲಭವಾಗುತ್ತದೆ. ಕರ್ನಾಟಕದ ಜನರು ಉತ್ತಮ ರಾಜಕೀಯ ಪ್ರಜ್ಞೆ ಹೊಂದಿದ್ದು, ಮತ್ತೆ ಬಿಜೆಪಿಯನ್ನು ಆಶೀರ್ವದಿಸಬೇಕು ಎಂದು ತಿಳಿಸಿದರು.
ಬಿಜೆಪಿಗೆ ರಾಜ್ಯದಲ್ಲಿ ಸ್ಪಷ್ಟವಾದ ಬಹುಮತ ಇದುವರೆಗೆ ಸಿಕ್ಕಿಲ್ಲ. ಕೇಂದ್ರದಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದರಿಂದ ಅವರು ದಿಟ್ಟ ತೀರ್ಮಾನ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಿದೆ. ಬಿಜೆಪಿ ಏಕಪಕ್ಷೀಯವಾಗಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸಲಾಗುವುದು ಎಂದು ಭರವಸೆ ನೀಡಿದರು.