ಕೆನಡಾದಲ್ಲಿ ಭಾರತೀಯನ ಬಂಧನ
Team Udayavani, Apr 11, 2023, 5:31 AM IST
ಒಟ್ಟಾವಾ: ಕೆನಡಾದ ಮರ್ಖಾಂ ನಗರದ ಮಸೀದಿಯೊಂದರಲ್ಲಿ ಪ್ರಾರ್ಥನೆಗೆ ಸೇರಿದ್ದ ಜನರನ್ನು ಬೆದರಿಸಿ, ಧಾರ್ಮಿಕ ದ್ವೇಷದಿಂದಾಗಿ ಅವರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಕ್ಕಾಗಿ ಭಾರತೀಯ ಮೂಲದ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.
ಶರಣ್ ಕರುಣಾಕರನ್ ಎನ್ನುವ ವ್ಯಕ್ತಿ ಮರ್ಖಾಂನ ಇಸ್ಲಾಮಿಕ್ ಸೊಸೈಟಿಗೆ ಧಾವಿಸಿ, ಕುರಾನ್ ಪ್ರತಿಗಳನ್ನು ಹರಿದುಹಾಕಿದ್ದಾನೆ. ಅಲ್ಲದೇ, ಏಕಾಏಕಿ ಭಕ್ತಾದಿಗಳ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಾನೆ. ಅವರಿಗೆಲ್ಲ ಬೆದರಿಕೆ ಒಡ್ಡಿ, ಧರ್ಮವಿರೋಧಿ ನಿಂದನೆಗಳನ್ನು ಮಾಡಿದ್ದಾನೆಂದು ಜನರು ಆರೋಪಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ