IPL 2023: ಮೊಹಾಲಿ ಕಣದಲ್ಲಿ ಪಂಜಾಬ್‌-ಗುಜರಾತ್‌


Team Udayavani, Apr 13, 2023, 7:50 AM IST

PUN GUJ

ಮೊಹಾಲಿ: ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ಗೆ ಪ್ರಸಕ್ತ ಋತುವಿನಲ್ಲಿ ರಿಂಕು ಸಿಂಗ್‌ ಎಂಬ ಸ್ಫೋಟಕ ಬ್ಯಾಟರ್‌ ಮೊದಲ ಸೋಲಿನ ರುಚಿ ತೋರಿಸಿದ್ದು, ತವರಿನ ಅಹ್ಮದಾಬಾದ್‌ ಅಂಗಳದಲ್ಲೇ ಗುಜರಾತ್‌ ಮೊದಲ ಸೋಲನುಭವಿಸಿದ್ದೆಲ್ಲ ಈಗ ಇತಿಹಾಸ. ಆದರೆ ಕೇವಲ ಎರಡು ದಿನಗಳ ಹಿಂದಿನ ಈ ಆಘಾತಕಾರಿ ಹಾಗೂ ಅನಿರೀಕ್ಷಿತ ವಿದ್ಯಮಾನವನ್ನು ಗುಜರಾತ್‌ ಪಡೆ ಮರೆಯುವುದು ಅಷ್ಟು ಸುಲಭವಲ್ಲ. ಅಷ್ಟರಲ್ಲಿ ಮೊಹಾಲಿಯಲ್ಲಿ ಪಂಜಾಬ್‌ ಕಿಂಗ್ಸ್‌ ಸವಾಲು ಎದುರಾಗಿದೆ. ಗುರುವಾರ ರಾತ್ರಿ ಇತ್ತಂಡಗಳು ಇಲ್ಲಿ ಎದುರಾಗಲಿವೆ.

ಹೇಳಿ ಕೇಳಿ ಮೊಹಾಲಿ ಪಂಜಾಬ್‌ ತಂಡದ ತವರಿನ ಅಂಗಳ. ಇಲ್ಲಿ ಆಡಲಾದ ಕೆಕೆಆರ್‌ ಎದುರಿನ ಮೊದಲ ಪಂದ್ಯವನ್ನು ಪಂಜಾಬ್‌ ಡಿ-ಎಲ್‌ ನಿಯಮದಂತೆ 7 ರನ್ನುಗಳಿಂದ ಜಯಿಸಿತ್ತು. ಹೋಮ್‌ ಗ್ರೌಂಡ್‌ನ‌ಲ್ಲಿ ಗೆಲುವಿನ ಲಯವನ್ನು ಮುಂದು ವರಿಸಿಕೊಂಡು ಹೋಗುವುದು ಪಂಜಾಬ್‌ ಗುರಿ ಯಾದರೆ, ಸೋಲಿನ ಸುಳಿಯಿಂದ ಹೊರಬಂದು ಮತ್ತೆ ಗೆಲುವಿನ ಹಳಿ ಏರುವುದು ಗುಜರಾತ್‌ ಯೋಜನೆ.

ಹಾರ್ದಿಕ್‌ ಪಾಂಡ್ಯ ಆಗಮನ
ಕೆಕೆಆರ್‌ ವಿರುದ್ಧ ಅಹ್ಮದಾಬಾದ್‌ನಲ್ಲಿ ಆಡಲಾದ ಕಳೆದ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌, ನಾಯಕ ಹಾರ್ದಿಕ್‌ ಪಾಂಡ್ಯ ಸೇವೆಯಿಂದ ವಂಚಿತವಾಗಿತ್ತು. ಅನಾರೋಗ್ಯದಿಂದ ಅವರು ಹೊರಗುಳಿದಿದ್ದರು. ಇವರ ಬದಲು ತಂಡವನ್ನು ಮುನ್ನಡೆಸಿದ ರಶೀದ್‌ ಖಾನ್‌ ಹ್ಯಾಟ್ರಿಕ್‌ ಹೀರೋ ಎನಿಸಿಕೊಂಡು ಯಶಸ್ಸಿನ ಹಾದಿಯಲ್ಲಿದ್ದರು. ಆದರೆ ರಿಂಕು ಸಿಂಗ್‌ ಎಲ್ಲವನ್ನೂ ಬುಡಮೇಲು ಮಾಡಿಬಿಟ್ಟರು.

ಪಂಜಾಬ್‌ ವಿರುದ್ಧ ಆಡುವಾಗ ಗುಜರಾತ್‌ ಮೊದಲು “ರಿಂಕು ಸಿಂಗ್‌ ಭೀತಿ”ಯನ್ನು ಹೊಡೆ ದೋಡಿಸಬೇಕು. ಹಾರ್ದಿಕ್‌ ಪಾಂಡ್ಯ ಮರಳುವುದರಿಂದ ಗುಜರಾತ್‌ ಪೂರ್ಣ ಸಾಮರ್ಥ್ಯದೊಂದಿಗೆ ಹಾಗೂ ಆತ್ಮವಿಶ್ವಾಸದೊಂದಿಗೆ ಆಡ ಬಹುದಾಗಿದೆ.

ಮೊಹಾಲಿ ಕೂಡ ಬ್ಯಾಟಿಂಗ್‌ ಟ್ರ್ಯಾಕ್‌ ಆಗಿದೆ. ಗುಜರಾತ್‌ ತಂಡದ ಬ್ಯಾಟಿಂಗ್‌ ಪಂಜಾಬ್‌ಗಿಂತ ಬಲಿಷ್ಠ. ಗಿಲ್‌, ಸಾಹಾ, ಸಾಯಿ ಸುದರ್ಶನ್‌, ವಿಜಯ್‌ ಶಂಕರ್‌, ತೆವಾಟಿಯಾ ಮೊದಲಾದ ಬಿಗ್‌ ಹಿಟ್ಟರ್ ಇದ್ದಾರೆ. ಪಾಂಡ್ಯ ಬ್ಯಾಟ್‌ನಿಂದ ಮಾತ್ರ ಇನ್ನೂ ರನ್‌ ಬಂದಿಲ್ಲ. 2 ಪಂದ್ಯಗಳಲ್ಲಿ ಅವರು ಗಳಿಸಿದ್ದು ತಲಾ 8 ರನ್‌ ಮಾತ್ರ. ಆದರೆ ನಾಯಕತ್ವದ ವಿಷಯದಲ್ಲಿ ಪಾಂಡ್ಯ ನಿಜಕ್ಕೂ ಲಕ್ಕಿ. ಬೌಲಿಂಗ್‌ಗೆ ಶಮಿ, ರಶೀದ್‌ ಖಾನ್‌, ಜೋಸೆಫ್, ಲಿಟ್ಲ ಇದ್ದಾರೆ. ಆದರೆ ಯಶ್‌ ದಯಾಳ್‌ಗೆ ಗೇಟ್‌ಪಾಸ್‌ ಖಾತ್ರಿ!

ಚೇತರಿಸಬೇಕಿದೆ ಪಂಜಾಬ್‌
ಪಂಜಾಬ್‌ ಕಳೆದ ಪಂದ್ಯದಲ್ಲಿ ಶೋಚನೀಯ ಬ್ಯಾಟಿಂಗ್‌ ನಡೆಸಿ ಹೈದರಾಬಾದ್‌ಗೆ ಮೊದಲ ಗೆಲುವನ್ನು ಕೊಡಿಸಿತ್ತು. 143ರ ಮೊತ್ತದಲ್ಲಿ ನಾಯಕ ಧವನ್‌ ಒಬ್ಬರೇ 99 ರನ್‌ ಮಾಡಿ ಹೋರಾಟ ನಡೆಸಿದ್ದರು. ಆದರೆ ಬ್ಯಾಟಿಂಗ್‌ ಸುಧಾರಣೆ ಆಗದ ಹೊರತು ಪಂಜಾಬ್‌ ಗೆಲುವಿನ ನಿರೀಕ್ಷೆ ಮಾಡುವುದರಲ್ಲಿ ಅರ್ಥವಿಲ್ಲ. ಒಂದು ವೇಳೆ ಲಿಯಮ್‌ ಲಿವಿಂಗ್‌ಸ್ಟೋನ್‌ ಸೇರ್ಪಡೆಯಾದರೆ ತಂಡಕ್ಕೆ ಹೆಚ್ಚಿನ ಬಲ ಲಭಿಸುವುದು ಖಂಡಿತ.

ಪಂಜಾಬ್‌ ಬೌಲಿಂಗ್‌ ಕೂಡ ಸಾಕಷ್ಟು ಸುಧಾರಣೆ ಕಾಣಬೇಕಿದೆ. ಈವರೆಗೆ ಪರಿಣಾಮ ಬೀರಿದ್ದು ಅರ್ಷದೀಪ್‌ ಸಿಂಗ್‌ ಮಾತ್ರ.

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.