BJP ಸೋಲಿಸಲು ಹೊಸ ರಂಗಕ್ಕೆ ಶ್ರೀಕಾರ: ಖರ್ಗೆ ನಿವಾಸದಲ್ಲಿ ನಿತೀಶ್, ತೇಜಸ್ವಿ ಭೇಟಿ
Team Udayavani, Apr 13, 2023, 7:50 AM IST
ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳೆಲ್ಲ ಒಟ್ಟಾಗಿ ಸೆಣಸುವ ನಿಟ್ಟಿನಲ್ಲಿ ಹೊಸ ರಾಜಕೀಯ ರಂಗ ರಚನೆ ಮಾಡುವ ಹೊಸ ಪ್ರಯತ್ನ ಶುರುವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ಜೆಡಿ ನಾಯಕ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರು ಬುಧವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ವಿಪಕ್ಷಗಳನ್ನು ಒಂದೇ ವೇದಿಕೆಯ ವ್ಯಾಪ್ತಿಯಲ್ಲಿ ತರುವ ಬಗ್ಗೆ ಮಾತು ಕತೆಗಳನ್ನು ನಡೆಸಲಾಗಿದೆ. ಇದೇ ಮೊದಲ ಬಾರಿಗೆ ವಿಪಕ್ಷಗಳೆಲ್ಲವೂ ಒಟ್ಟಾಗುವ ಬಗ್ಗೆ ಮಾತುಕತೆಗಳು ನಡೆದಿವೆ.
ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ “ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭು ತ್ವದ ರಕ್ಷಣೆಗಾಗಿ ಎಲ್ಲ ವಿಪಕ್ಷಗಳೂ ಒಗ್ಗೂಡಲಿವೆ. ಮಾತ್ರವಲ್ಲದೆ, ದೇಶಕ್ಕೆ ಒಂದು ಹೊಸ ದಾರಿಯನ್ನು ತೋರಿಸಲಿವೆ” ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, “ವಿಪಕ್ಷಗಳೆಲ್ಲವೂ ಒಂದೇ ವೇದಿಕೆಯಡಿ ಬರಲಿದ್ದು, ಅಲ್ಲಿ ದೇಶಕ್ಕಾಗಿ ಒಂದು ದಿಕ್ಸೂಚಿ ಚಿಂತನೆಯ ಬಗ್ಗೆ ಚರ್ಚೆ ಮಾಡಿ ಅಂತಿಮಗೊಳಿಸಲಿವೆ. ಬಳಿಕ ಅದನ್ನು ದೇಶದ ಜನರ ಮುಂದೆ ಇರಿಸಲಿವೆ” ಎಂದರು. ಇದೊಂದು ಐತಿಹಾಸಿಕ ಹೆಜ್ಜೆ ಎಂದು ರಾಹುಲ್ ಗಾಂಧಿ ಹೇಳಿಕೊಂಡರು.
ಐಕ್ಯಮತದಲ್ಲಿ ಕೆಲಸಕ್ಕೆ ಸಿದ್ಧ: ಬಿಹಾರ ಸಿಎಂ ನಿತೀಶ್ ಮಾತನಾಡಿ “ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ಎಲ್ಲರೂ ಕುಳಿತು ಮಾತಾಡಲಿದ್ದೇವೆ. ಬುಧವಾರದ ಸಭೆ ಎಲ್ಲದಕ್ಕೂ ಶ್ರೀಕಾರವಾಗಲಿದೆ” ಎಂದು ಹೇಳಿದ್ದಾರೆ.
ಖರ್ಗೆ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್, ರಾಹುಲ್ ಗಾಂಧಿ ಮತ್ತು ಇತರ ಪ್ರಮುಖರು ಮಧ್ಯಾಹ್ನದ ಭೋಜ ನವನ್ನೂ ಸವಿದಿದ್ದಾರೆ. ಡಿಎಂಕೆ ಹಾಗೂ ಇತರ ಪಕ್ಷಗಳ ಜತೆ ಮಾತನಾಡುವ ಹೊಣೆ ಖರ್ಗೆ ಅವರಿಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್