Bhatinda shooting: ಅನುಮಾನ ಸೃಷ್ಟಿಸಿದ ಭಟಿಂಡಾ ಗುಂಡಿನ ದಾಳಿ

ಸೇನಾ ಶಿಬಿರದಲ್ಲಿ ಅಪರಿಚಿತರಿಂದ ದುಷ್ಕೃತ್ಯ: ನಾಲ್ವರು ಯೋಧರು ಹುತಾತ್ಮ

Team Udayavani, Apr 13, 2023, 8:09 AM IST

army

ಭಟಿಂಡಾ: ಪಂಜಾಬ್‌ನ ಭಟಿಂಡಾದಲ್ಲಿನ ಸೇನಾ ಘಟಕವೊಂದರಲ್ಲಿ ಬುಧವಾರ ಬೆಳಗಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರ ಸಹಿತ ನಾಲ್ವರು ಯೋಧರು ಹುತಾತ್ಮ­ರಾಗಿ­ದ್ದಾರೆ. ಯೋಧರು ತಮ್ಮ ಶಿಬಿರಗಳಲ್ಲಿ ಮಲಗಿದ್ದ ಸಮಯದಲ್ಲಿ ಅಂದರೆ ಮುಂಜಾನೆ 4.30ರ ವೇಳೆಗೆ ಈ ದುರ್ಘ‌ಟನೆ ನಡೆದಿದೆ.

ಇದು ಉಗ್ರ ಕೃತ್ಯವಲ್ಲ. ಮೇಲ್ನೋಟಕ್ಕೆ ಇದು ಯೋಧರೊಳಗಿನ ಜಗಳದಿಂದಾಗಿ ನಡೆದ ಕೃತ್ಯ(ಭಾÅತೃ ಹತ್ಯೆ)ದಂತೆ ಕಂಡುಬಂದಿದೆ ಎಂದು ಮೊದಲಿಗೆ ಪೊಲೀಸರು ತಿಳಿಸಿದ್ದಾರಾದರೂ ಈ ಘಟನೆಯು ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಘಟನೆ ಬಗ್ಗೆ ಸ್ಪಷ್ಟತೆ ಸಿಗುತ್ತಿಲ್ಲ ಎಂದು ಸಂಜೆ ವೇಳೆಗೆ ಪೊಲೀಸರು ಹೇಳಿದ್ದಾರೆ.

ಎಫ್ಐಆರ್‌ನಲ್ಲೇನಿದೆ?: ಕುರ್ತಾ ಪೈಜಾಮ ಧರಿಸಿಕೊಂಡು, ಇನ್ಸಾಸ್‌ ರೈಫ‌ಲ್‌ ಹಾಗೂ ಕೊಡಲಿಯೊಂದನ್ನು ಹಿಡಿದುಕೊಂಡು ಬಂದ ಇಬ್ಬರು ವ್ಯಕ್ತಿಗಳು, ಮಲಗಿದ್ದ ಯೋಧರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಪಂಜಾಬ್‌ ಪೊಲೀಸರು ಎಫ್ಐಆರ್‌ನಲ್ಲಿ ಉಲ್ಲೇಖೀಸಿದ್ದಾರೆ. ಅಲ್ಲದೇ 2 ದಿನಗಳ ಹಿಂದಷ್ಟೇ ಮಿಲಿಟರಿ ಸ್ಟೇಶನ್‌ನಲ್ಲಿದ್ದ ಇನ್ಸಾಸ್‌ ರೈಫ‌ಲ್‌ಗ‌ಳು ಕಾಣೆಯಾಗಿದ್ದವು. ಹೀಗಾಗಿ ಎಲ್ಲ ದಿಕ್ಕಿನಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದೂ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಕಾಣೆಯಾಗಿದ್ದ ಇನ್ಸಾಸ್‌ ರೈಫ‌ಲ್‌ಗ‌ಳು ಮತ್ತು ಗುಂಡುಗಳು ಬುಧವಾರ ಪತ್ತೆಯಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಭೂಸೇನಾ ಮುಖ್ಯಸ್ಥ ಜ|ಮನೋಜ್‌ ಪಾಂಡೆ ಅವರು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ತನಿಖೆ ನಡೆಸುತ್ತಿರುವ ಭಟಿಂಡಾ ಎಸ್‌ಪಿ ಅಜಯ್‌ ಗಾಂಧಿ, “ಸ್ಥಳದಲ್ಲಿ ಇನ್ಸಾಸ್‌ ರೈಫ‌ಲ್‌ನ 19 ಖಾಲಿ ಶೆಲ್‌ಗ‌ಳು ದೊರೆತಿವೆ’ ಎಂದಿದ್ದಾರೆ.

ಕರ್ನಾಟಕ, ತಮಿಳುನಾಡಿನ ಯೋಧರು
ಹತರಾದ ನಾಲ್ವರು ಯೋಧರು ಕೂಡ 20ರ ಆಸುಪಾಸಿನ ವಯಸ್ಸಿನವರು. ಹತ್ಯೆಕೋರರು ಕೊಲೆ ಗೈದು ಪರಾರಿಯಾಗುತ್ತಿದ್ದ ಸಮಯದಲ್ಲೇ ಅವರು ಶಿಬಿರದಲ್ಲಿದ್ದ ಮತ್ತೂಬ್ಬ ಯೋಧನ ಕಣ್ಣಿಗೆ ಬಿದ್ದಿದ್ದಾರೆ. ಈ ಯೋಧ ಇತರರಿಗೆ ವಿಚಾರ ತಿಳಿಸಿದ್ದು, ಶಿಬಿರದೊಳಗೆ ಹೋಗಿ ನೋಡಿದಾಗ ಒಂದು ಕೊಠಡಿಯಲ್ಲಿ ಸಾಗರ್‌ ಅಪ್ಪಾ ಸಾಹೇಬ ಬನ್ನೆ (25) ಮತ್ತು ಯೋಗೇಶ್‌ ಕುಮಾರ್‌ ಜೆ. (24) ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮತ್ತೂಂದು ಕೊಠಡಿಯಲ್ಲಿ ಸಂತೋಷ್‌ ಎಂ. ನಾಗರಾಳ (25) ಮತ್ತು ಕಮಲೇಶ್‌ ಆರ್‌. (24) ಅವರ ಮೃತದೇಹ ಪತ್ತೆಯಾಗಿದೆ. ಮೃತರಲ್ಲಿ ಸಂತೋಷ್‌ ಮತ್ತು ಸಾಗರ್‌ ಕರ್ನಾಟಕದವರಾದರೆ ಮತ್ತಿಬ್ಬರು ತಮಿಳುನಾಡಿನವರು ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.