ಮೊಜಾಂಬಿಕ್ನಲ್ಲಿ ‘Made In India’ ರೈಲಿನಲ್ಲಿ ಸವಾರಿ ಮಾಡಿದ ಸಚಿವ S Jaishankar
Team Udayavani, Apr 14, 2023, 12:32 PM IST
ಮಾಪುಟೊ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮೊಜಾಂಬಿಕಾ ರಾಜಧಾನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಸವಾರಿ ಮಾಡಿದರು.
ರೈಲು ಜಾಲಗಳಲ್ಲಿ ವಿದ್ಯುತ್ ಬಳಕೆ ಮತ್ತು ಜಲಮಾರ್ಗ ಸಂಪರ್ಕವನ್ನು ವಿಸ್ತರಿಸಲು ಸಹಾಯ ಮಾಡುವಲ್ಲಿ ಭಾರತದ ಪಾಲುದಾರಿಕೆಯ ಬಗ್ಗೆ ಮೊಜಾಂಬಿಕಾ ಸಾರಿಗೆ ಸಚಿವರೊಂದಿಗೆ ಚರ್ಚಿಸಿದರು.
ಶ್ರೀ ಜೈಶಂಕರ್ ಅವರು ಮೂರು ದಿನಗಳ ಭೇಟಿಗಾಗಿ ಗುರುವಾರ ಮೊಜಾಂಬಿಕ್ ನ ರಾಜಧಾನಿಗೆ ಆಗಮಿಸಿದರು ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಆಫ್ರಿಕನ್ ದೇಶದ ಸಂಸತ್ತಿನ ಅಧ್ಯಕ್ಷರನ್ನು ಭೇಟಿ ಮಾಡಿದರು.
ಎಪ್ರಿಲ್ 13 ರಿಂದ 15 ರವರೆಗೆ ಮೊಜಾಂಬಿಕಾ ಭೇಟಿಯು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರೊಬ್ಬರು ಆ ದೇಶಕ್ಕೆ ನೀಡಿರುವ ಮೊದಲ ಭೇಟಿಯಾಗಿದೆ.
“ಮೊಜಾಂಬಿಕನ್ ಸಾರಿಗೆ ಮತ್ತು ಸಂವಹನ ಸಚಿವ ಮತ್ತು ಮೊಜಾಂಬಿಕನ್ ಬಂದರು, ರೈಲು ಪ್ರಾಧಿಕಾರದ ಅಧ್ಯಕ್ಷ ಮೇಟಿಯುಸ್ ಮಗಾಲಾ ಅವರೊಂದಿಗೆ ನಡೆಸಿದ ಹಸಿರು ಸಾರಿಗೆ ಸಂಭಾಷಣೆ ಅದ್ಭುತವಾಗಿದೆ.
Took a ride in a ‘Made in India’ train from Maputo to Machava with Mozambican Transport Minister Mateus Magala.
Appreciate CMD RITES Rahul Mithal joining us on the journey. @AshwiniVaishnaw pic.twitter.com/NhfIGwGHQj
— Dr. S. Jaishankar (@DrSJaishankar) April 13, 2023
ರೈಲು ಜಾಲಗಳು, ವಿದ್ಯುತ್ ಚಲನಶೀಲತೆ ಮತ್ತು ಜಲಮಾರ್ಗಗಳ ಸಂಪರ್ಕವನ್ನು ವಿಸ್ತರಿಸುವ ಕುರಿತು ಮಾತನಾಡಿದೆವು. ಈ ನಿಟ್ಟಿನಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರ ರಾಷ್ಟ್ರವಾಗಿದೆ” ಎಂದು ಸಚಿವ ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.
ಮೊಜಾಂಬಿಕನ್ ಸಾರಿಗೆ ಸಚಿವ ಮೇಟಿಯುಸ್ ಮಾಗಾಲಾ ಅವರೊಂದಿಗೆ ಮಾಪುಟೊದಿಂದ ಮಚಾವಾಗೆ ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಜೈಶಂಕರ್ ಸವಾರಿ ಮಾಡಿದರು.
ಸಿಎಂಡಿ ರೈಟ್ಸ್ ರಾಹುಲ್ ಮಿಥಾಲ್ ಅವರು ಪ್ರಯಾಣದಲ್ಲಿ ನಮ್ಮೊಂದಿಗೆ ಸೇರಿಕೊಂಡಿದ್ದನ್ನು ಶ್ಲಾಘಿಸಿ ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ. ಅವರು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ