ಗಾಂಜಾ ಮಾರಾಟ: ವಿದ್ಯಾರ್ಥಿ ಸಹಿತ ಮೂವರ ಬಂಧನ


Team Udayavani, Apr 15, 2023, 5:11 AM IST

arrest

ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವ ಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೆಡಿಕಲ್‌ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.400 ಕೆ.ಜಿ. ಗಾಂಜಾ ಮತ್ತು 4 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಮೂಲತಃ ಬೀದರ್‌ನವನಾಗಿದ್ದು ಗೋರಿಗುಡ್ಡ ಚರ್ಚ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪ್ರಜ್ವಲ್‌ ಫಿನೆಹಾಸ್‌ (26), ಮೂಲತಃ ಸಕಲೇಶಪುರ ಬೈಕರವಳ್ಳಿಯವನಾಗಿದ್ದು ಕುಲಶೇಖರದಲ್ಲಿ ವಾಸವಿದ್ದ ಧ್ರುವ ಶೆಟ್ಟಿ (19), ಕುಳಾಯಿ ನಿವಾಸಿ ಶಿವಾನಿ (22) ಬಂಧಿತ ಆರೋಪಿಗಳು.
ಪಿಎಸ್‌ಐ ಶೀತಲ್‌ ಅಲಗೂರು ಅವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್‌ ಫಿನೆಹಾನ್‌ ಎಂಬಾತನನ್ನು ಬಂಧಿಸಿ ಆತ ನೀಡಿದ ಮಾಹಿತಿ ಆಧಾರದಿಂದ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಖರೀದಿ
ಪ್ರಜ್ವಲ್‌ ಫಿನೆಹಾನ್‌ ಗಾಂಜಾವನ್ನು ಮಹಾರಾಷ್ಟ್ರದಿಂದ ಖರೀದಿ ಮಾಡಿಕೊಂಡು ಬಂದು ಮಂಗಳೂರಿನಲ್ಲಿ ಆತನ ಸ್ನೇಹಿತರಾದ ಧ್ರುವ ಶೆಟ್ಟಿ ಮತ್ತು ಶಿವಾನಿ ಅವರಿಗೆ ನೀಡಿ ಅವರ ಮೂಲಕ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮಾರಾಟ ಮಾಡು ತ್ತಿದ್ದರು ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

ಕಾಪು: ಮಟ್ಕಾ ದಾಳಿ; ಇಬ್ಬರು ವಶಕ್ಕೆ
ಕಾಪು: ಕಾಪುವಿನ ಪ್ರತ್ಯೇಕ ಸಾರ್ವಜನಿಕ ಪ್ರದೇಶಗಳಲ್ಲಿ ಮಟ್ಕಾ ಜುಗಾರಿ ಬರೆಯುತ್ತಿದ್ದ ಇಬ್ಬರನ್ನು ವಶಪಡಿಸಿಕೊಂಡಿರುವ ಪೊಲೀಸರು ಬಂಧಿತರಿಂದ 7,400 ರೂ. ನಗದನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಕಾಪು ಎಸ್‌ಐ ಸುಮಾ ಬಿ. ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕಾಪು ಪಡು ಗ್ರಾಮದ ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡಿಸುತ್ತಿದ್ದ ಚಂದ್ರಹಾಸ, ಕಾಪುವಿನ ಹೊಟೇಲ್‌ವೊಂದರ ಬಳಿಯಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ಸುರೇಶ್‌ ಪೂಜಾರಿ ಎಂಬವರನ್ನು ಬಂಧಿಸಲಾಗಿದೆ.
ಬಂಧಿತರಿಂದ‌ ಆಟಕ್ಕೆ ಬಳಸಿದ ಪೆನ್‌, ಮಟ್ಕಾ ಚೀಟಿ ಹಾಗೂ ಆಟದಿಂದ ಸಂಗ್ರಹಿಸಿದ 3,500 ಮತ್ತು 3,900 ರೂ. ವಶಪಡಿಸಿ ಕೊಳ್ಳಲಾಗಿದ್ದು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.