MIvsKKR: ಮುಂಬೈಗಿಲ್ಲ ರೋಹಿತ್ ಬಲ; ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ
Team Udayavani, Apr 16, 2023, 3:12 PM IST
ಮುಂಬೈ: ರವಿವಾರದ ಡಬಲ್ ಧಮಾಕಾದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಆದರೆ ಇಂದಿನ ಪಂದ್ಯಕ್ಕೆ ಮುಂಬೈ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ.
ಹೊಟ್ಟೆ ನೋವಿನ ಕಾರಣದಿಂದ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಉಪನಾಯಕ ಸೂರ್ಯಕುಮಾರ್ ಯಾದವ್ ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ವಿಶೇಷವೆಂದರೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಮೊದಲ ಬಾರಿಗೆ ಐಪಿಎಲ್ ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ತಂಡಗಳು
ಮುಂಬೈ: ಇಶಾನ್ ಕಿಶನ್ (ವಿ.ಕೀ), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಡುವಾನ್ ಜಾನ್ಸೆನ್, ರಿಲೆ ಮೆರೆಡಿತ್
ಕೋಲ್ಕತ್ತಾ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ