ಕಳ್ಳಭಟ್ಟಿ ಸೇವಿಸಿ 14 ಮಂದಿ ಮೃತಪಟ್ಟ ಪ್ರಕರಣ: 80 ಮಂದಿ ಸೆರೆ
Team Udayavani, Apr 17, 2023, 6:45 AM IST
ಮೋತಿಹಾರಿ/ಪಟ್ನಾ: ಬಿಹಾರದ ಪೂರ್ವ ಚಂಪಾ ರಣ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವನೆಯಿಂದ 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಿರುಸುಗೊಂಡಿದೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ ಇದುವರೆಗೆ ಎಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಜತೆಗೆ ಪೊಲೀಸ್ ಇಲಾಖೆಯಿಂದಲೇ ಹನ್ನೊಂದು ಮಂದಿ ಸಿಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಅದರಲ್ಲಿ ಒಬ್ಬರು ಸಬ್-ಇನ್ಸ್ಪೆಕ್ಟರ್, ಸಹಾಯಕ ಸಬ್-ಇನ್ಸೆ$ಪೆಕ್ಟರ್ ಕೂಡ ಸೇರಿದ್ದಾರೆ. ಮೋತಿಹಾರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಒಂಬತ್ತು ಮಂದಿ “ಚೌಕಿದಾರ’ರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿ ಇರಿಸಲಾಗಿದ್ದ ಕಳ್ಳಭಟ್ಟಿಯನ್ನು ವಶ ಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಪಟ್ನಾದಲ್ಲಿ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Mumbai; ಉದ್ಧವ್ ಬಣದ ಅಭ್ಯರ್ಥಿ ಅನಿಲ್ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್ ಧ್ವಜ ಹಾರಾಟ?
Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್
Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!
Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?